AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಲೀಕನಿಗೆ ಅರಿವಿಲ್ಲದಿದ್ದರೆ ಆತ ಅಪರಾಧಿಯಲ್ಲ – ಹೈಕೋರ್ಟ್ ಆದೇಶ

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಗೆ ನಡೆಯುತ್ತಿರುವುದು ಮಾಲೀಕನಿಗೆ ಅರಿವಿರದಿದ್ದರೆ ಆತ ಅಪರಾಧಿಯಾಗುವುದಿಲ್ಲ. ಆದ್ರೆ ಮಾಲೀಕನಿಗೆ ಈ ಬಗ್ಗೆ ಮೊದಲೇ ಗೊತ್ತಿದ್ದರೆ ಮಾತ್ರ ಆತ ಹೊಣೆಗಾರನಾಗುತ್ತಾನೆ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಲೀಕನಿಗೆ ಅರಿವಿಲ್ಲದಿದ್ದರೆ ಆತ ಅಪರಾಧಿಯಲ್ಲ - ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Mar 24, 2022 | 5:23 PM

Share

ಬೆಂಗಳೂರು: ಬಾಡಿಗೆ ಮನೆಯ ವೇಶ್ಯಾವಾಟಿಕೆಗೆ(Prostitution) ಅರಿವಿರದ ಮಾಲೀಕ ಹೊಣೆಯಲ್ಲ ಎಂದು ಹೈಕೋರ್ಟ್(Karnataka High Court) ಏಕಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ. ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆಗೆ ನಡೆಯುತ್ತಿರುವುದು ಮಾಲೀಕನಿಗೆ(House Owner) ಅರಿವಿರದಿದ್ದರೆ ಆತ ಅಪರಾಧಿಯಾಗುವುದಿಲ್ಲ. ಆದ್ರೆ ಮಾಲೀಕನಿಗೆ ಈ ಬಗ್ಗೆ ಮೊದಲೇ ಗೊತ್ತಿದ್ದರೆ ಮಾತ್ರ ಆತ ಹೊಣೆಗಾರನಾಗುತ್ತಾನೆ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಬೆಂಗಳೂರಿನ ನಾಗರಭಾವಿಯ‌ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಅನೈತಿಕ ವೇಶ್ಯಾವಾಟಿಕೆ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿದ್ದರು. ಮಾಲೀಕ ಪ್ರಭುರಾಜ್ ಮೇಲೂ ಕೇಸ್ ದಾಖಲಿಸಿದ್ದರು. ಹಾಗಾಗಿ ಮಾಲೀಕ ಬಾಡಿಗೆ ಕರಾರಿನ ಪತ್ರ ಹಾಜರುಪಡಿಸಿದ್ದರು. ಸದರಿ ಕಟ್ಟಡದಲ್ಲಿ ತಾನು ವಾಸವಾಗಿಲ್ಲವೆಂದು ಉತ್ತರ ನೀಡಿದ್ದರು. ವೇಶ್ಯಾವಾಟಿಕೆಯ ಅರಿವಿರಲಿಲ್ಲವೆಂದು ಪೊಲೀಸರಿಗೆ ಉತ್ತರಿಸಿದ್ದರು. ಆತ ಬೇರೆಡೆ ನೆಲೆಸಿರುವುದು ಪೊಲೀಸ್ ತನಿಖೆಯಲ್ಲಿ ಪತ್ತೆಯಾಗಿತ್ತು. ಆದರೂ ಪೊಲೀಸರು ಆರೋಪ ಪಟ್ಟಿ ದಾಖಲಿಸಿದ್ದರು. ಪ್ರಕರಣ ರದ್ದುಪಡಿಸಲು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್ ಮಾಲೀಕನ ವಿರುದ್ಧದ ಕೇಸ್ ರದ್ದುಪಡಿಸಿದ್ದು ನ್ಯಾ.ಎಂ.ನಾಗಪ್ರಸನ್ನ ರವರಿದ್ದ ಏಕಸದಸ್ಯ ಪೀಠ ಆದೇಶ ಹೊರ ಬಿದ್ದಿದೆ.

ಇದನ್ನೂ ಓದಿ: ಪಂಜಾಬ್​​ಗೆ ವರ್ಷಕ್ಕೆ 50 ಸಾವಿರ ಕೋಟಿ ರೂ. ಬಿಡುಗಡೆ ಮಾಡಿ; ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಬೇಡಿಕೆ ಮುಂದಿಟ್ಟ ಭಗವಂತ್ ಮಾನ್​

ಸ್ಥಳೀಯ ಪಂಚಾಯತಿಗಳಿಗೆ ಲಕ್ಷ ಲಕ್ಷ ರೂ. ತೇರಿಗೆ ಕಟ್ಟದೆ ಕಳ್ಳಾಟ; ಮೊಬೈಲ್ ಟವರ್ ಕಂಪನಿಗಳಿಗೆ ಅಧಿಕಾರಿಗಳಿಂದ ಶಾಕ್

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?