ಪೋಷಕರಿಗೆ ಸಮಸ್ಯೆ ಆದ ಕಡೆ ಕಾನೂನಿನಡಿ ಕ್ರಮಕೈಗೊಳ್ಳುತ್ತೇವೆ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಸರ್ಕಾರದ ನಿಯಮಗಳನ್ನು ಎಷ್ಟರ ಮಟ್ಟಿಗೆ ಜಾರಿಗೆ ತರಬಹುದೋ ತಂದಿದ್ದೇವೆ. ಸರ್ಕಾರ ವಿದ್ಯಾರ್ಥಿಗಳು, ಪೋಷಕರ ಪರವಾಗಿಯೇ ನಿಂತಿದ್ದೇವೆ. ಎಲ್ಲೆಲ್ಲಿ ಪೋಷಕರಿಗೆ ಸಮಸ್ಯೆ ಆಗಿದೆಯೋ ಅಲ್ಲಲ್ಲಿ ಸರ್ಕಾರದ ಚೌಕಟ್ಟಿನಲ್ಲಿ ಕಾನೂನು ಕ್ರಮ ಜರುಗಿಸಿದ್ದೇವೆ.

ಪೋಷಕರಿಗೆ ಸಮಸ್ಯೆ ಆದ ಕಡೆ ಕಾನೂನಿನಡಿ ಕ್ರಮಕೈಗೊಳ್ಳುತ್ತೇವೆ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಶಿಕ್ಷಣ ಸಚಿವ ಬಿಸಿ ನಾಗೇಶ್
Follow us
| Updated By: sandhya thejappa

Updated on:Aug 16, 2021 | 11:50 AM

ಬೆಂಗಳೂರು: ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆ ಒಂದು ಸುತ್ತು ಮಾತುಕತೆ ಆಗಿದೆ ಎಂದು ತಿಳಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಯಾವುದನ್ನೂ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೇರುವುದಕ್ಕೆ ಆಗಲ್ಲ. ಆದರೆ ಪೋಷಕರನ್ನು ಗ್ರಾಹಕರ ತರ ನೋಡಬೇಡಿ ಅಂತ ಹೇಳಿದ್ದೇನೆ. ಅನೇಕ ಜಿಲ್ಲೆಗಳಲ್ಲಿ ಇವತ್ತಿಗೂ ಸರಿಯಾಗಿ ಶಿಕ್ಷಣವನ್ನು ಉಚಿತವಾಗಿ ನೀಡಿದ ಖಾಸಗಿ ಶಾಲೆಗಳೂ ಇವೆ. ಶೇ.50ಕ್ಕೂ ಹೆಚ್ಚು ಹೈ ಸ್ಕೂಲ್ ಮಕ್ಕಳು ಖಾಸಗಿ ಶಾಲೆಗಳಲ್ಲೇ ಓದುತ್ತಿದ್ದಾರೆ. ಸೈನ್ಸ್ ಮತ್ತು ಕಾಮರ್ಸ್ ವಿಚಾರದಲ್ಲಿ ಹೆಚ್ಚು ಖಾಸಗಿ ಶಾಲೆಗಳನ್ನೇ ನಂಬಿಕೊಂಡಿದ್ದಾರೆ. ಆದರೆ ಪೋಷಕರಿಗೆ ಸಮಸ್ಯೆ ಆದ ಕಡೆ ಕಾನೂನಿನಡಿ ಕ್ರಮಕೈಗೊಳ್ಳುತ್ತೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರದ ನಿಯಮಗಳನ್ನು ಎಷ್ಟರ ಮಟ್ಟಿಗೆ ಜಾರಿಗೆ ತರಬಹುದೋ ತಂದಿದ್ದೇವೆ. ಸರ್ಕಾರ ವಿದ್ಯಾರ್ಥಿಗಳು, ಪೋಷಕರ ಪರವಾಗಿಯೇ ನಿಂತಿದ್ದೇವೆ. ಎಲ್ಲೆಲ್ಲಿ ಪೋಷಕರಿಗೆ ಸಮಸ್ಯೆ ಆಗಿದೆಯೋ ಅಲ್ಲಲ್ಲಿ ಸರ್ಕಾರದ ಚೌಕಟ್ಟಿನಲ್ಲಿ ಕಾನೂನು ಕ್ರಮ ಜರುಗಿಸಿದ್ದೇವೆ. ಆಗಸ್ಟ್ 23ರ ಒಳಗೆ ಎಲ್ಲ ಶಿಕ್ಷಕರಿಗೆ ವ್ಯಾಕ್ಸಿನ್ ಹಾಕಿಸಲು ಸೂಚನೆ ನೀಡಲಾಗಿದೆ. ಶೇ.80 ರಷ್ಟು ಎಲ್ಲ ಕಡೆಯೂ ವ್ಯಾಕ್ಸಿನ್ ಆಗಿದೆ. ಕೆಲ ತಾಲೂಕುಗಳಲ್ಲಿ ಶೇ.100 ವ್ಯಾಕ್ಸಿನ್ ಆಗಿದೆ ಅಂತ ತಿಳಿಸಿದರು.

ಶಾಲೆಗಳ ಆರಂಭಕ್ಕೆ ಇಂದೇ ಮಾರ್ಗಸೂಚಿ ಪ್ರಕಟ ಇನ್ನು ಶಾಲೆಗಳ ಆರಂಭಕ್ಕೆ ಇಂದೇ ಮಾರ್ಗಸೂಚಿ ಹೊರಡಿಸ್ತೇವೆ ಎಂದು ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ. ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಕಡೆ ಮಾತ್ರ ಶಾಲೆಗಳನ್ನು ಆರಂಭಿಸಲಾಗುತ್ತದೆ. ಮಕ್ಕಳಿಗೆ ಹಾಜರಾತಿ ಕಡ್ಡಾಯ ಮಾಡಿಲ್ಲ. ಸೋಂಕು ಪತ್ತೆಯಾದರೆ ಅಂತಹ ಶಾಲೆಗಳನ್ನ ಕ್ಲೋಸ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

ಪೊಲೀಸರು ಇನ್ನು ಮುಂದೆ ರಾತ್ರಿ ಗಸ್ತು ಕಡ್ಡಾಯ ತಿರುಗಬೇಕು; ಬೆಂಗಳೂರಿನಲ್ಲಿ ಅಪರಾಧ ನಿಯಂತ್ರಣಕ್ಕೆ ಬಂತು ಹೊಸ ಇ- ಪ್ಲ್ಯಾನ್

CM Basavaraj Bommai: ಸಿಎಂ ಬಸವರಾಜ ಬೊಮ್ಮಾಯಿ ಭೇಟಿಗೆ ಬರುವ ಸಾರ್ವಜನಿಕರಿಗೆ ಮೊಬೈಲ್ ನಿಷೇಧ

(If there is a problem with parents from private schools we will take legal action said BC Nagesh)

Published On - 11:47 am, Mon, 16 August 21

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ