AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರಿಗೆ ಸಮಸ್ಯೆ ಆದ ಕಡೆ ಕಾನೂನಿನಡಿ ಕ್ರಮಕೈಗೊಳ್ಳುತ್ತೇವೆ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಸರ್ಕಾರದ ನಿಯಮಗಳನ್ನು ಎಷ್ಟರ ಮಟ್ಟಿಗೆ ಜಾರಿಗೆ ತರಬಹುದೋ ತಂದಿದ್ದೇವೆ. ಸರ್ಕಾರ ವಿದ್ಯಾರ್ಥಿಗಳು, ಪೋಷಕರ ಪರವಾಗಿಯೇ ನಿಂತಿದ್ದೇವೆ. ಎಲ್ಲೆಲ್ಲಿ ಪೋಷಕರಿಗೆ ಸಮಸ್ಯೆ ಆಗಿದೆಯೋ ಅಲ್ಲಲ್ಲಿ ಸರ್ಕಾರದ ಚೌಕಟ್ಟಿನಲ್ಲಿ ಕಾನೂನು ಕ್ರಮ ಜರುಗಿಸಿದ್ದೇವೆ.

ಪೋಷಕರಿಗೆ ಸಮಸ್ಯೆ ಆದ ಕಡೆ ಕಾನೂನಿನಡಿ ಕ್ರಮಕೈಗೊಳ್ಳುತ್ತೇವೆ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಶಿಕ್ಷಣ ಸಚಿವ ಬಿಸಿ ನಾಗೇಶ್
TV9 Web
| Edited By: |

Updated on:Aug 16, 2021 | 11:50 AM

Share

ಬೆಂಗಳೂರು: ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆ ಒಂದು ಸುತ್ತು ಮಾತುಕತೆ ಆಗಿದೆ ಎಂದು ತಿಳಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಯಾವುದನ್ನೂ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೇರುವುದಕ್ಕೆ ಆಗಲ್ಲ. ಆದರೆ ಪೋಷಕರನ್ನು ಗ್ರಾಹಕರ ತರ ನೋಡಬೇಡಿ ಅಂತ ಹೇಳಿದ್ದೇನೆ. ಅನೇಕ ಜಿಲ್ಲೆಗಳಲ್ಲಿ ಇವತ್ತಿಗೂ ಸರಿಯಾಗಿ ಶಿಕ್ಷಣವನ್ನು ಉಚಿತವಾಗಿ ನೀಡಿದ ಖಾಸಗಿ ಶಾಲೆಗಳೂ ಇವೆ. ಶೇ.50ಕ್ಕೂ ಹೆಚ್ಚು ಹೈ ಸ್ಕೂಲ್ ಮಕ್ಕಳು ಖಾಸಗಿ ಶಾಲೆಗಳಲ್ಲೇ ಓದುತ್ತಿದ್ದಾರೆ. ಸೈನ್ಸ್ ಮತ್ತು ಕಾಮರ್ಸ್ ವಿಚಾರದಲ್ಲಿ ಹೆಚ್ಚು ಖಾಸಗಿ ಶಾಲೆಗಳನ್ನೇ ನಂಬಿಕೊಂಡಿದ್ದಾರೆ. ಆದರೆ ಪೋಷಕರಿಗೆ ಸಮಸ್ಯೆ ಆದ ಕಡೆ ಕಾನೂನಿನಡಿ ಕ್ರಮಕೈಗೊಳ್ಳುತ್ತೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರದ ನಿಯಮಗಳನ್ನು ಎಷ್ಟರ ಮಟ್ಟಿಗೆ ಜಾರಿಗೆ ತರಬಹುದೋ ತಂದಿದ್ದೇವೆ. ಸರ್ಕಾರ ವಿದ್ಯಾರ್ಥಿಗಳು, ಪೋಷಕರ ಪರವಾಗಿಯೇ ನಿಂತಿದ್ದೇವೆ. ಎಲ್ಲೆಲ್ಲಿ ಪೋಷಕರಿಗೆ ಸಮಸ್ಯೆ ಆಗಿದೆಯೋ ಅಲ್ಲಲ್ಲಿ ಸರ್ಕಾರದ ಚೌಕಟ್ಟಿನಲ್ಲಿ ಕಾನೂನು ಕ್ರಮ ಜರುಗಿಸಿದ್ದೇವೆ. ಆಗಸ್ಟ್ 23ರ ಒಳಗೆ ಎಲ್ಲ ಶಿಕ್ಷಕರಿಗೆ ವ್ಯಾಕ್ಸಿನ್ ಹಾಕಿಸಲು ಸೂಚನೆ ನೀಡಲಾಗಿದೆ. ಶೇ.80 ರಷ್ಟು ಎಲ್ಲ ಕಡೆಯೂ ವ್ಯಾಕ್ಸಿನ್ ಆಗಿದೆ. ಕೆಲ ತಾಲೂಕುಗಳಲ್ಲಿ ಶೇ.100 ವ್ಯಾಕ್ಸಿನ್ ಆಗಿದೆ ಅಂತ ತಿಳಿಸಿದರು.

ಶಾಲೆಗಳ ಆರಂಭಕ್ಕೆ ಇಂದೇ ಮಾರ್ಗಸೂಚಿ ಪ್ರಕಟ ಇನ್ನು ಶಾಲೆಗಳ ಆರಂಭಕ್ಕೆ ಇಂದೇ ಮಾರ್ಗಸೂಚಿ ಹೊರಡಿಸ್ತೇವೆ ಎಂದು ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ. ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಕಡೆ ಮಾತ್ರ ಶಾಲೆಗಳನ್ನು ಆರಂಭಿಸಲಾಗುತ್ತದೆ. ಮಕ್ಕಳಿಗೆ ಹಾಜರಾತಿ ಕಡ್ಡಾಯ ಮಾಡಿಲ್ಲ. ಸೋಂಕು ಪತ್ತೆಯಾದರೆ ಅಂತಹ ಶಾಲೆಗಳನ್ನ ಕ್ಲೋಸ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

ಪೊಲೀಸರು ಇನ್ನು ಮುಂದೆ ರಾತ್ರಿ ಗಸ್ತು ಕಡ್ಡಾಯ ತಿರುಗಬೇಕು; ಬೆಂಗಳೂರಿನಲ್ಲಿ ಅಪರಾಧ ನಿಯಂತ್ರಣಕ್ಕೆ ಬಂತು ಹೊಸ ಇ- ಪ್ಲ್ಯಾನ್

CM Basavaraj Bommai: ಸಿಎಂ ಬಸವರಾಜ ಬೊಮ್ಮಾಯಿ ಭೇಟಿಗೆ ಬರುವ ಸಾರ್ವಜನಿಕರಿಗೆ ಮೊಬೈಲ್ ನಿಷೇಧ

(If there is a problem with parents from private schools we will take legal action said BC Nagesh)

Published On - 11:47 am, Mon, 16 August 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?