AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿವಾರ್ಯತೆ ಇಲ್ಲದಿದ್ದರೆ ರಾಜ್ಯಪಾಲರಿಗೆ ಉತ್ತರ ಕೊಡುವುದಿಲ್ಲ, ಯಾವುದಕ್ಕೆ ಕೊಡಬೇಕೋ ಕೊಡುತ್ತೇವೆ -ಡಾ.ಪರಮೇಶ್ವರ್

ರಾಜ್ಯಪಾಲರ ಹುದ್ದೆ ಅತ್ಯಂತ ಜವಾಬ್ದಾರಿಯುತ ಸ್ಥಾನ. ಸಂವಿಧಾನ ರಕ್ಷಣೆ ಮಾಡುವ ಸ್ಥಾನ ಕೊಟ್ಟಿದ್ದಾರೆ. ಪ್ರತಿ ನಿತ್ಯ ಆಡಳಿತದಲ್ಲಿ ಸರ್ಕಾರದ ಕಾರ್ಯದ ಬಗ್ಗೆ ರಾಜ್ಯಪಾಲರು ಮಾಹಿತಿ ಕೇಳಿದ್ದ ಸಂದರ್ಭಗಳೇ ಇಲ್ಲ. ಆದರೆ ದಿನ ನಿತ್ಯ ಪತ್ರ ಬರೆದು ಪತ್ರದ ಮೂಲಕ ಮಾಹಿತಿ ಕೊಡಿ ಅಂತಿದ್ದಾರೆ ಎಂದಿ ಡಾ.ಪರಮೇಶ್ವರ್​​ ಅವರು ಕಿಡಿಕಾರಿದ್ದಾರೆ.

ಅನಿವಾರ್ಯತೆ ಇಲ್ಲದಿದ್ದರೆ ರಾಜ್ಯಪಾಲರಿಗೆ ಉತ್ತರ ಕೊಡುವುದಿಲ್ಲ, ಯಾವುದಕ್ಕೆ ಕೊಡಬೇಕೋ ಕೊಡುತ್ತೇವೆ -ಡಾ.ಪರಮೇಶ್ವರ್
ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್
ಪ್ರಸನ್ನ ಗಾಂವ್ಕರ್​
| Edited By: |

Updated on: Sep 23, 2024 | 12:48 PM

Share

ಬೆಂಗಳೂರು, ಸೆ.23: ಅರ್ಕಾವತಿ ಬಡಾವಣೆಗೆ ಸ್ವಾಧೀನಪಡಿಸಿದ್ದ ಜಮೀನು ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ರಾಜ್ಯಪಾಲರು (Thawar Chand Gehlot) ಸರ್ಕಾರಕ್ಕೆ (Karnataka Government) ಪತ್ರ ಬರೆಯುತ್ತಿದ್ದಾರೆ. ಈ ಸಂಬಂಧ ರಾಜ್ಯಪಾಲರು ಪದೇ ಪದೆ ಸರ್ಕಾರಕ್ಕೆ ಪತ್ರ ಬರೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ (Dr G Parameshwar) ಆಕ್ರೋಶ ಹೊರ ಹಾಕಿದ್ದಾರೆ. ಪ್ರತಿನಿತ್ಯ ಸರ್ಕಾರದ ಕಾರ್ಯದ ಬಗ್ಗೆ ರಾಜ್ಯಪಾಲರು ಮಾಹಿತಿ ಕೇಳಿದ್ದ ಸಂದರ್ಭಗಳೇ ಇಲ್ಲ. ಆದರೆ ಪ್ರತಿ ದಿನ ಪತ್ರ ಬರೆದು ಪತ್ರದ ಮೂಲಕ ಮಾಹಿತಿ ಕೊಡಿ ಅಂತಿದ್ದಾರೆ.

ರಾಜ್ಯಪಾಲರು ಹಾಗೂ ಸರ್ಕಾರದ ಮಧ್ಯೆ ಗುಡ್ ರಿಲೇಷನ್​ಶಿಪ್ ಇರುತ್ತೆ. ಆದರೆ ಹೀಗಾದರೆ ಸ್ಮೂತ್ ಆಗಿ ಆಗೋದಿಲ್ಲ. ಮುಂದೆ ಏನು ಮಾಡಬೇಕೆಂದು ಸಿಎಂ ಜತೆ ಚರ್ಚೆ ಮಾಡುತ್ತೇವೆ. ಅನಿವಾರ್ಯತೆ ಇಲ್ಲದಿದ್ದರೆ ರಾಜ್ಯಪಾಲರಿಗೆ ಉತ್ತರ ಕೊಡುವುದಿಲ್ಲ. ಯಾವುದಕ್ಕೆ ಉತ್ತರ ಕೊಡಬೇಕೋ ಕೊಡುತ್ತೇವೆ. ಸಂಪುಟದಲ್ಲಿ ರಾಜ್ಯಪಾಲರ ನಡವಳಿಕೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ ಅವರು ರಾಜ್ಯಪಾಲರ ನಡೆಗೆ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ, ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು

ರಾಜ್ಯಪಾಲರ ಹುದ್ದೆ ಅತ್ಯಂತ ಜವಾಬ್ದಾರಿಯುತ ಸ್ಥಾನ. ಸಂವಿಧಾನ ರಕ್ಷಣೆ ಮಾಡುವ ಸ್ಥಾನ ಕೊಟ್ಟಿದ್ದಾರೆ. ಸಂವಿಧಾನ ಯಾವ ರೀತಿ ರಕ್ಷಣೆ ಮಾಡಬೇಕು ಅಂತ ಅಧಿಕಾರ ಕೊಟ್ಟಿದ್ದಾರೆ. ಪ್ರಥಮಬಾರಿಗೆ ಈ ರೀತಿಯಾಗಿದೆ. ಪ್ರತಿ ನಿತ್ಯ ಆಡಳಿತದಲ್ಲಿ ಸರ್ಕಾರದ ಕಾರ್ಯದ ಬಗ್ಗೆ ರಾಜ್ಯಪಾಲರು ಮಾಹಿತಿ ಕೇಳಿದ್ದ ಸಂದರ್ಭಗಳೇ ಇಲ್ಲ. ಇತಿಹಾಸದಲ್ಲಿ ಕರ್ನಾಟಕದಲ್ಲಿ ಕೇಳಿಲ್ಲ. ಇಲ್ಲಿಯವರೆಗೆ ಅನೇಕ ಗೌರ್ನರ್​ಗಳು ಬಂದಿದ್ದಾರೆ. ಆದರೆ ದಿನ ನಿತ್ಯ ಪತ್ರ ಬರೆದು ಪತ್ರದ ಮೂಲಕ ಮಾಹಿತಿ ಕೊಡಿ ಅಂತಿದ್ದಾರೆ.

ಕೆಲವೊಂದು ಸಂದರ್ಭಗಳಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಎಂ, ಕಾನೂನು ಸುವ್ಯವಸ್ಥೆ ವಿಚಾರ ಬಂದರೆ ಗೃಹ ಸಚಿವರು ರಾಜ್ಯಪಾಲರಿಗೆ ಮಾಹಿತಿ ನೀಡುತ್ತಿದ್ದರು. ಅವರಿಗೆ ಸಚಿವರನ್ನ ಕರೆದು ಮಾಹಿತಿ ಪಡೆಯುವ ಹಕ್ಕು ಇದೆ. ಸರ್ಕಾರದಲ್ಲಿ ಸಿಎಂ ಜೊತೆಗೆ ಇದರ ಬಗ್ಗೆ ಚರ್ಚೆ ಮಾಡ್ತೇವೆ. ದಿನ ಪತ್ರ ಬರೆದು ಮಾಹಿತಿ ಕೇಳೋದು ಸಂವಿಧಾನ ವಿರೋಧವಾಗಿದೆ. ಈ ಸಂಬಂಧ ಸಿಎಂ ಜೊತೆ ಚರ್ಚೆ ಮಾಡುತ್ತೇವೆ. ಅನಿವಾರ್ಯತೆ ಇಲ್ಲದಿದ್ದರೆ ನಾವು ರಾಜ್ಯಪಾಲರಿಗೆ ಉತ್ತರ ಕೊಡಲ್ಲ. ಯಾವುದಕ್ಕೆ ಉತ್ತರ ಕೊಡಬೇಕೋ ಕೊಡುತ್ತೇವೆ. ಎಲ್ಲರಿಗೂ ಒಂದೇ ಮಾನದಂಡ. ಸಿದ್ದರಾಮಯ್ಯಗೆ ಒಂದು ಮಾನದಂಡ, ಕುಮಾರಸ್ವಾಮಿಗೆ ಒಂದು ಮಾನದಂಡ ಆಗಲ್ಲ. ನಾಲ್ಕೂ ಜನ ಮಂತ್ರಿ ಮಾಜಿ ಸಿಎಂಗಳ ದೂರಿಗೆ ರಾಜ್ಯಪಾಲರು ನೋಟಿಸ್​ ಅನ್ನೇ ನೀಡಿಲ್ಲ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ