AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿವಾರ್ಯತೆ ಇಲ್ಲದಿದ್ದರೆ ರಾಜ್ಯಪಾಲರಿಗೆ ಉತ್ತರ ಕೊಡುವುದಿಲ್ಲ, ಯಾವುದಕ್ಕೆ ಕೊಡಬೇಕೋ ಕೊಡುತ್ತೇವೆ -ಡಾ.ಪರಮೇಶ್ವರ್

ರಾಜ್ಯಪಾಲರ ಹುದ್ದೆ ಅತ್ಯಂತ ಜವಾಬ್ದಾರಿಯುತ ಸ್ಥಾನ. ಸಂವಿಧಾನ ರಕ್ಷಣೆ ಮಾಡುವ ಸ್ಥಾನ ಕೊಟ್ಟಿದ್ದಾರೆ. ಪ್ರತಿ ನಿತ್ಯ ಆಡಳಿತದಲ್ಲಿ ಸರ್ಕಾರದ ಕಾರ್ಯದ ಬಗ್ಗೆ ರಾಜ್ಯಪಾಲರು ಮಾಹಿತಿ ಕೇಳಿದ್ದ ಸಂದರ್ಭಗಳೇ ಇಲ್ಲ. ಆದರೆ ದಿನ ನಿತ್ಯ ಪತ್ರ ಬರೆದು ಪತ್ರದ ಮೂಲಕ ಮಾಹಿತಿ ಕೊಡಿ ಅಂತಿದ್ದಾರೆ ಎಂದಿ ಡಾ.ಪರಮೇಶ್ವರ್​​ ಅವರು ಕಿಡಿಕಾರಿದ್ದಾರೆ.

ಅನಿವಾರ್ಯತೆ ಇಲ್ಲದಿದ್ದರೆ ರಾಜ್ಯಪಾಲರಿಗೆ ಉತ್ತರ ಕೊಡುವುದಿಲ್ಲ, ಯಾವುದಕ್ಕೆ ಕೊಡಬೇಕೋ ಕೊಡುತ್ತೇವೆ -ಡಾ.ಪರಮೇಶ್ವರ್
ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್
Follow us
ಪ್ರಸನ್ನ ಗಾಂವ್ಕರ್​
| Updated By: ಆಯೇಷಾ ಬಾನು

Updated on: Sep 23, 2024 | 12:48 PM

ಬೆಂಗಳೂರು, ಸೆ.23: ಅರ್ಕಾವತಿ ಬಡಾವಣೆಗೆ ಸ್ವಾಧೀನಪಡಿಸಿದ್ದ ಜಮೀನು ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ರಾಜ್ಯಪಾಲರು (Thawar Chand Gehlot) ಸರ್ಕಾರಕ್ಕೆ (Karnataka Government) ಪತ್ರ ಬರೆಯುತ್ತಿದ್ದಾರೆ. ಈ ಸಂಬಂಧ ರಾಜ್ಯಪಾಲರು ಪದೇ ಪದೆ ಸರ್ಕಾರಕ್ಕೆ ಪತ್ರ ಬರೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ (Dr G Parameshwar) ಆಕ್ರೋಶ ಹೊರ ಹಾಕಿದ್ದಾರೆ. ಪ್ರತಿನಿತ್ಯ ಸರ್ಕಾರದ ಕಾರ್ಯದ ಬಗ್ಗೆ ರಾಜ್ಯಪಾಲರು ಮಾಹಿತಿ ಕೇಳಿದ್ದ ಸಂದರ್ಭಗಳೇ ಇಲ್ಲ. ಆದರೆ ಪ್ರತಿ ದಿನ ಪತ್ರ ಬರೆದು ಪತ್ರದ ಮೂಲಕ ಮಾಹಿತಿ ಕೊಡಿ ಅಂತಿದ್ದಾರೆ.

ರಾಜ್ಯಪಾಲರು ಹಾಗೂ ಸರ್ಕಾರದ ಮಧ್ಯೆ ಗುಡ್ ರಿಲೇಷನ್​ಶಿಪ್ ಇರುತ್ತೆ. ಆದರೆ ಹೀಗಾದರೆ ಸ್ಮೂತ್ ಆಗಿ ಆಗೋದಿಲ್ಲ. ಮುಂದೆ ಏನು ಮಾಡಬೇಕೆಂದು ಸಿಎಂ ಜತೆ ಚರ್ಚೆ ಮಾಡುತ್ತೇವೆ. ಅನಿವಾರ್ಯತೆ ಇಲ್ಲದಿದ್ದರೆ ರಾಜ್ಯಪಾಲರಿಗೆ ಉತ್ತರ ಕೊಡುವುದಿಲ್ಲ. ಯಾವುದಕ್ಕೆ ಉತ್ತರ ಕೊಡಬೇಕೋ ಕೊಡುತ್ತೇವೆ. ಸಂಪುಟದಲ್ಲಿ ರಾಜ್ಯಪಾಲರ ನಡವಳಿಕೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ ಅವರು ರಾಜ್ಯಪಾಲರ ನಡೆಗೆ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ, ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು

ರಾಜ್ಯಪಾಲರ ಹುದ್ದೆ ಅತ್ಯಂತ ಜವಾಬ್ದಾರಿಯುತ ಸ್ಥಾನ. ಸಂವಿಧಾನ ರಕ್ಷಣೆ ಮಾಡುವ ಸ್ಥಾನ ಕೊಟ್ಟಿದ್ದಾರೆ. ಸಂವಿಧಾನ ಯಾವ ರೀತಿ ರಕ್ಷಣೆ ಮಾಡಬೇಕು ಅಂತ ಅಧಿಕಾರ ಕೊಟ್ಟಿದ್ದಾರೆ. ಪ್ರಥಮಬಾರಿಗೆ ಈ ರೀತಿಯಾಗಿದೆ. ಪ್ರತಿ ನಿತ್ಯ ಆಡಳಿತದಲ್ಲಿ ಸರ್ಕಾರದ ಕಾರ್ಯದ ಬಗ್ಗೆ ರಾಜ್ಯಪಾಲರು ಮಾಹಿತಿ ಕೇಳಿದ್ದ ಸಂದರ್ಭಗಳೇ ಇಲ್ಲ. ಇತಿಹಾಸದಲ್ಲಿ ಕರ್ನಾಟಕದಲ್ಲಿ ಕೇಳಿಲ್ಲ. ಇಲ್ಲಿಯವರೆಗೆ ಅನೇಕ ಗೌರ್ನರ್​ಗಳು ಬಂದಿದ್ದಾರೆ. ಆದರೆ ದಿನ ನಿತ್ಯ ಪತ್ರ ಬರೆದು ಪತ್ರದ ಮೂಲಕ ಮಾಹಿತಿ ಕೊಡಿ ಅಂತಿದ್ದಾರೆ.

ಕೆಲವೊಂದು ಸಂದರ್ಭಗಳಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಎಂ, ಕಾನೂನು ಸುವ್ಯವಸ್ಥೆ ವಿಚಾರ ಬಂದರೆ ಗೃಹ ಸಚಿವರು ರಾಜ್ಯಪಾಲರಿಗೆ ಮಾಹಿತಿ ನೀಡುತ್ತಿದ್ದರು. ಅವರಿಗೆ ಸಚಿವರನ್ನ ಕರೆದು ಮಾಹಿತಿ ಪಡೆಯುವ ಹಕ್ಕು ಇದೆ. ಸರ್ಕಾರದಲ್ಲಿ ಸಿಎಂ ಜೊತೆಗೆ ಇದರ ಬಗ್ಗೆ ಚರ್ಚೆ ಮಾಡ್ತೇವೆ. ದಿನ ಪತ್ರ ಬರೆದು ಮಾಹಿತಿ ಕೇಳೋದು ಸಂವಿಧಾನ ವಿರೋಧವಾಗಿದೆ. ಈ ಸಂಬಂಧ ಸಿಎಂ ಜೊತೆ ಚರ್ಚೆ ಮಾಡುತ್ತೇವೆ. ಅನಿವಾರ್ಯತೆ ಇಲ್ಲದಿದ್ದರೆ ನಾವು ರಾಜ್ಯಪಾಲರಿಗೆ ಉತ್ತರ ಕೊಡಲ್ಲ. ಯಾವುದಕ್ಕೆ ಉತ್ತರ ಕೊಡಬೇಕೋ ಕೊಡುತ್ತೇವೆ. ಎಲ್ಲರಿಗೂ ಒಂದೇ ಮಾನದಂಡ. ಸಿದ್ದರಾಮಯ್ಯಗೆ ಒಂದು ಮಾನದಂಡ, ಕುಮಾರಸ್ವಾಮಿಗೆ ಒಂದು ಮಾನದಂಡ ಆಗಲ್ಲ. ನಾಲ್ಕೂ ಜನ ಮಂತ್ರಿ ಮಾಜಿ ಸಿಎಂಗಳ ದೂರಿಗೆ ರಾಜ್ಯಪಾಲರು ನೋಟಿಸ್​ ಅನ್ನೇ ನೀಡಿಲ್ಲ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ