AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಕೆಜಿ ಅಕ್ಕಿಗೆ‌ ಕೊರತೆ ಇದ್ರೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಿ; ವಿಧಾನಸಭೆಯಲ್ಲಿ ಕಾಂಗ್ರೆಸ್​ಗೆ ಹೆಚ್​ಡಿ ಕುಮಾರಸ್ವಾಮಿ ಸಲಹೆ

ಅನ್ನಭಾಗ್ಯದಲ್ಲಿ ಐದು ಕೆಜಿ ಅಕ್ಕಿಗೆ‌ ಕೊರತೆ ಇದೆ. ಪೌಷ್ಠಿಕ ಆಹಾರದ ಕೊರತೆ ಇರುವವರಿಗೆ ಬೇಳೆ, ಎಣ್ಣೆ, ಬೆಲ್ಲ, ಮುಂತಾದ ಪದಾರ್ಥ ಕೊಡಬಹುದು ಎಂದು ಹೆಚ್​ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

5 ಕೆಜಿ ಅಕ್ಕಿಗೆ‌ ಕೊರತೆ ಇದ್ರೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಿ; ವಿಧಾನಸಭೆಯಲ್ಲಿ ಕಾಂಗ್ರೆಸ್​ಗೆ ಹೆಚ್​ಡಿ ಕುಮಾರಸ್ವಾಮಿ ಸಲಹೆ
ಹೆಚ್​ಡಿ ಕುಮಾರಸ್ವಾಮಿ
ಕಿರಣ್​ ಹನಿಯಡ್ಕ
| Edited By: |

Updated on: Jul 12, 2023 | 3:16 PM

Share

ಬೆಂಗಳೂರು: ಇಂದು (ಜು.12) ನಡೆದ ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ(HD Kumaraswamy) ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದು ಅನ್ನಭಾಗ್ಯ ಯೋಜನೆಯಡಿ(Anna Bhagya) ಹೆಚ್ಚುವರಿ 5 ಕೆಜಿ ಅಕ್ಕಿಗೆ‌ ಕೊರತೆ ಇದ್ರೆ ಸಮಸ್ಯೆ ಬಗೆಹರಿಯುವವರೆಗೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಬಹುದು ಎಂದು ಸಲಹೆ ನೀಡಿದ್ದಾರೆ.

ಅನ್ನಭಾಗ್ಯದಲ್ಲಿ ಐದು ಕೆಜಿ ಅಕ್ಕಿಗೆ‌ ಕೊರತೆ ಇದೆ. ಪೌಷ್ಠಿಕ ಆಹಾರದ ಕೊರತೆ ಇರುವವರಿಗೆ ಬೇಳೆ, ಎಣ್ಣೆ, ಬೆಲ್ಲ, ಮುಂತಾದ ಪದಾರ್ಥ ಕೊಡಬಹುದು. ಗೃಹಲಕ್ಷ್ಮಿ ಯೋಜನೆಯಲ್ಲಿ ಕುಟುಂಬದ ಸಹಬಾಳ್ವೆ ಹಾಳಾಗದಂತೆ ಕ್ರಮ ವಹಿಸಿ. ಯುವಭತ್ಯೆ ಯೋಜನೆಯಡಿ ಡಿಪ್ಲೊಮಾ ಪದವೀಧರರಿಗೆ ಒಂದೂವರೆ ಸಾವಿರ ಮಾತ್ರ ಯಾಕೆ? ನಿರುದ್ಯೋಗಿ ಪದವೀಧರರಿಗೆ 3000 ಆದ್ರೆ ಡಿಪ್ಲೋಮಾದವರಿಗೆ 1.5 ಸಾವಿರ ಮಾತ್ರ ಯಾಕೆ? ಈ ವರ್ಷದ ನಿರುದ್ಯೋಗಿಗಳು ಮಾತ್ರ ನಿರುದ್ಯೋಗಿಗಳಾ? ಹಿಂದಿನ ವರ್ಷಗಳಲ್ಲಿರುವವರು ನಿರುದ್ಯೋಗಿಗಳಲ್ವಾ? ನೀವು ನುಡಿದಂತೆ ನಡೆದಿಲ್ಲ ಅಂತ ಹೇಳಲ್ಲ, ಆದ್ರೆ ನುಡಿದಂತೆ ಸಂಪೂರ್ಣ ನಡೆದಿಲ್ಲ. ಕೊಟ್ಟ ಮಾತು ಸಂಪೂರ್ಣವಾಗಿ ಉಳಿಸಿಕೊಳ್ಳುವತ್ತ ಗಮನ ಕೊಡಿ ಎಂದು ಹೆಚ್​ಡಿ ಕುಮಾರಸ್ವಾಮಿ ಕಾಂಗ್ರೆಸ್​ಗೆ ಸಲಹೆ ನೀಡಿದರು.

ಇನ್ನು ಗ್ಯಾರಂಟಿ ಕಾರ್ಡ್‌ಗಳಿಗೆ ಸಹಿ ಹಾಕಿ‌ ಕೊಟ್ಟಿದೀರಿ. ಎಲ್ಲರಿಗೂ ಖಚಿತ, ಉಚಿತ, ನಿಶ್ಚಿತ ಅಂದಿರಿ. ಆದ್ರೆ ಮಂತ್ರಿಯೊಬ್ಬರು ದಾರಿಯಲ್ಲಿ ಹೋಗೋರಿಗೆಲ್ಲಾಕೊಡಲು ಆಗುತ್ತಾ ಅಂದ್ರು. ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ ಕೊಡುತ್ತೇವೆ ಅಂದಿದ್ದೀರಿ ಎಂದು ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಪ್ರಸ್ತಾಪಿಸಿ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Mangaluru News: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್; ಮಂಗಳೂರಿನಲ್ಲಿ 21 ಪ್ರಕರಣ ದಾಖಲು

5 ಕೆಜಿ ಅಕ್ಕಿಯ ಬದಲಾಗಿ ಬ್ಯಾಂಕ್ ಖಾತೆಗಳಿಗೆ 170 ರೂ. ಹಣ ವರ್ಗಾವಣೆ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿರುವ ಎಲ್ಲಾ 5 ಗ್ಯಾರಂಟಿಗಳನ್ನು ಜಾರಿ ಮಾಡೇ ಮಾಡುತ್ತೇವೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ, 3ನೇ ಗ್ಯಾರಂಟಿ ಅನ್ನಭಾಗ್ಯ ಯೋಜನೆಗೆ ಅಧಿಕೃತವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದ್ದಾರೆ.

ಪಡಿತರಚೀಟಿದಾರರ ಅಕೌಂಟ್ ಗೆ ತಲಾ ಒಬ್ಬರಿಗೆ ಪ್ರತಿ ಕೆಜಿಗೆ 34 ರೂ.ನಂತೆ 170 ವರ್ಗಾವಣೆ ಮಾಡಲಾಯಿತು. ಕರ್ನಾಟಕ ರಾಜ್ಯದಲ್ಲಿ 1.28 ಕೋಟಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಕುಟುಂಬಗಳ ಪಡಿತರ ಚೀಟಿದಾರರು ಇದ್ದಾರೆ. ಇದರಲ್ಲಿ ಶೇ. 99 ರಷ್ಟು ಕಾರ್ಡುಗಳು ಆಧಾರ್ ಜೋಡಣೆ ಹೊಂದಿವೆ. ಶೇ. 82 ರಷ್ಟು ಪಡಿತರ ಚೀಟಿಗಳು ಅಂದರೆ 1.06 ಪಡಿತರ ಚೀಟಿಗಳು. ಸಕ್ರಿಯ ಬ್ಯಾಂಕ್ ಖಾತೆಗಳೊಂದಿಗೆ ಜೋಡಣೆಯಾಗಿವೆ. ಈ ಖಾತೆಗಳಿಗೆ ನಗದು ವರ್ಗಾವಣೆ ಮಾಡಲಾಗುವುದು. ಉಳಿದ ಕಾರ್ಡುದಾರರಿಗೆ ಖಾತೆ ತೆರೆಯಲು ಮಾಹಿತಿ ನೀಡಲಾಗುವುದು. 1.27 ಕೋಟಿ ಕಾರ್ಡುಗಳಲ್ಲಿ ಒಬ್ಬ ಸದಸ್ಯರನ್ನು ಕುಟುಂಬದ ಮುಖ್ಯಸ್ಥರೆಂದು ಗುರುತಿಸಲಾಗಿದ್ದು ಅವರ ಖಾತೆಗೆ ನಗದು ವರ್ಗಾಯಿಸಲಾಗುವುದು. ಶೇ. 94 ರಷ್ಟು ಕುಟುಂಬಗಳ ಮುಖ್ಯಸ್ಥರು ಮಹಿಳೆಯರು ಹಾಗೂ ಶೇ. 5 ರಷ್ಟು ಪುರುಷರಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳಲಿದ್ದಾರೆ. ಈ ಯೋಜನೆಗೆ ಅಂದಾಜು 800 ಕೋಟಿ ರೂ. ವೆಚ್ಚ ತಗುಲಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!