Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತ್ರಸ್ತ ಯುವತಿ ತಮ್ಮದು ಸಹಮತ ಸೆಕ್ಸ್​ ಎಂದು ಹೇಳಿದರೆ.. ನಾನು ಕಾನೂನು ಹೋರಾಟ ನಡೆಸುತ್ತೇನೆ -ದಿನೇಶ್ ಕಲ್ಲಹಳ್ಳಿ

ರಮೇಶ್ ಜಾರಕಿಹೊಳಿಯವರ ವಿಡಿಯೋ ಬಿಡುಗಡೆ ಮಾಡಿದ್ದ ದಿನೇಶ್ ಕಲ್ಲಹಳ್ಳಿ, ಸಂತ್ರಸ್ತ ಯುವತಿ ಇದಕ್ಕೆ ಸಹಮತ ಇದೆ ಎಂದು ಹೇಳಿದ್ರೆ ನನಗೆ ಮಾಹಿತಿ ನೀಡಿದವರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆಂದು ಹೇಳಿದ್ದಾರೆ.

ಸಂತ್ರಸ್ತ ಯುವತಿ ತಮ್ಮದು ಸಹಮತ ಸೆಕ್ಸ್​ ಎಂದು ಹೇಳಿದರೆ.. ನಾನು ಕಾನೂನು ಹೋರಾಟ ನಡೆಸುತ್ತೇನೆ -ದಿನೇಶ್ ಕಲ್ಲಹಳ್ಳಿ
ದಿನೇಶ್ ಕಲ್ಲಹಳ್ಳಿ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Mar 04, 2021 | 2:45 PM

ಬೆಂಗಳೂರು: ರಮೇಶ್ ಜಾರಕಿಕೊಳಿ ಪಟ್ಟು ಹಿಡಿದು ಮಂತ್ರಿಗಿರಿ ಪಡೆದಿದ್ರು.. ಸರ್ಕಾರವನ್ನೇ ಕೆಡವಿ ಸ್ಥಾನಮಾನ ದಕ್ಕಿಸಿಕೊಂಡಿದ್ರು.. ಆದ್ರೆ, ಒಂದೇ ಒಂದು ವಿಡಿಯೋ  ಅವರನ್ನು ನೆಲಕ್ಕೆ ಕೆಡವಿಬಿಟ್ಟಿದೆ. ಮಂತ್ರಿ ಆಗಿದ್ದವ್ರು, ಈಗ ಮಾಜಿ ಆಗಿದ್ದಾರೆ, ಸಿಕ್ಕ ಸಿಕ್ಕವ್ರಿಗೆ ಆಹಾರ ಆಗಿದ್ದಾರೆ. ಸೆಕ್ಸ್ ಸಿಡಿ ಬಿಡುಗಡೆಯಾದ ಕೇವಲ 20 ಗಂಟೆಯಲ್ಲಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.  ಇದರ ನಡುವೆ ರಮೇಶ್ ಜಾರಕಿಹೊಳಿಯವರ ವಿಡಿಯೋ ಬಿಡುಗಡೆ ಮಾಡಿದ್ದ ದಿನೇಶ್ ಕಲ್ಲಹಳ್ಳಿ, ಸಂತ್ರಸ್ತ ಯುವತಿ ತಮ್ಮದು  ಸಹಮತ ಸೆಕ್ಸ್​​ ಎಂದು ಹೇಳಿದ್ರೆ, ಆವಾಗ ನನಗೆ ಮಾಹಿತಿ ನೀಡಿದವರ ವಿರುದ್ಧವೇ ನಾನು ಕಾನೂನು ಹೋರಾಟ ನಡೆಸುತ್ತೇನೆಂದು ಹೇಳಿದ್ದಾರೆ.

ಇದೂವರೆಗೂ ರಾಸಲೀಲೆಯಲ್ಲಿದ್ದ ಯುವತಿ ನನಗೆ ಅನ್ಯಾಯವಾಗಿದೆ ಎಂದು ಎಲ್ಲೂ ಹೇಳಿಲ್ಲ. ಅವರನ್ನ ನಾನು ಭೇಟಿಯಾಗಿಲ್ಲ. ಒಂದೊಮ್ಮೆ ಯುವತಿ ರಾಸಲೀಲೆ ಮಾಡಿರೋದಕ್ಕೆ ನನ್ನ ಒಪ್ಪಿಗೆ ಇತ್ತು. ಪರಸ್ಪರ ಒಪ್ಪಿಗೆಯಿಂದ ಆಗಿರುವ ಲೈಂಗಿಕ ಕ್ರಿಯೆ ಅಂತಾ ಒಪ್ಪಿಕೊಂಡರೇ.. ಆಗ ನಾನು ನನಗೆ ಮಾಹಿತಿ ನೀಡಿದ ಸಂತ್ರಸ್ತೆಯ ಕುಟುಂಬಸ್ಥರ ವಿರುದ್ಧ ಕಾನೂನು ಹೋರಾಟ ಮಾಡ್ತೇನೆ ಎಂದು ಟಿವಿ9ಗೆ ದಿನೇಶ್ ಕಲ್ಲಹಳ್ಳಿ ಹೇಳಿದ್ದು ಇದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಕಾನೂನು ಹೋರಾಟಕ್ಕೆ ಬೇಕಾದ ಸಕಲ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಸಂತ್ರಸ್ತೆ ಅಥವಾ ಸಂತ್ರಸ್ತೆ ಕುಟುಂಬಸ್ಥರನ್ನ ಮಾಧ್ಯಮಗಳ ಮುಂದೆ ತರಲು ದಿನೇಶ್ ಕಲ್ಲಹಳ್ಳಿ ಪ್ರಯತ್ನಿಸುತ್ತಿದ್ದಾರೆ. ಮಾಹಿತಿ ನೀಡಿದ ವ್ಯಕ್ತಿ ಈವರೆಗೂ ದಿನೇಶ್​ಗೆ ಕರೆ ಮಾಡಿಲ್ಲ. ಹೀಗಾಗಿ ಪೊಲೀಸರ ವಿಚಾರಣೆಗೆ ಸಹಕಾರಿಯಾಗುವಂತೆ, ಆತನ‌ ಮೂಲಕ ವಿಚಾರಣೆಗೆ ಬಲ ತುಂಬಲು ಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಸಿಡಿ ಬಹಿರಂಗಗೊಳಿಸಿದ ದಿನೇಶ್​ ಕಲ್ಲಹಳ್ಳಿ ವಿರುದ್ಧ ಕಬ್ಬನ್​ಪಾರ್ಕ್​ ಠಾಣೆಯಲ್ಲಿ ದೂರು ದಾಖಲಿಸಿದ ಪುಟ್ಟೇಗೌಡ

Published On - 2:30 pm, Thu, 4 March 21

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ