AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವನ ಭಾವನೆ ಅರ್ಥೈಸಿಕೊಂಡು ಸಂವಹನ ನಡೆಸುವ ರೋಬೋಟ್​​​: ಐಐಟಿ ಸಂಶೋಧನೆ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿ ಬೆಂಗಳೂರಿನ ಸಂಶೋಧಕರು ಹೊಸ ರೋಬೋಟಿಕ್ ಮಾದರಿಯನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಮನುಷ್ಯರನ್ನು ಅರ್ಥಮಾಡಿಕೊಂಡು, ಅವರ ಭಾವನೆಗಳ ತಕ್ಕ ಹಾಗೆ ಅವರೊಂದಿಗೆ ಸಂವಹನ ನಡೆಸುತ್ತದೆ. ​

ಮಾನವನ ಭಾವನೆ ಅರ್ಥೈಸಿಕೊಂಡು ಸಂವಹನ ನಡೆಸುವ ರೋಬೋಟ್​​​: ಐಐಟಿ ಸಂಶೋಧನೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Dec 04, 2023 | 11:38 AM

Share

ಬೆಂಗಳೂರು ಡಿ.04: ಮನುಷ್ಯರನ್ನು ಅರ್ಥಮಾಡಿಕೊಂಡು, ಅವರ ಭಾವನೆಗಳ ತಕ್ಕ ಹಾಗೆ ಅವರೊಂದಿಗೆ ಸಂವಹನ ನಡೆಸುವ ರೋಬೋಟಿಕ್ ಮಾದರಿಯನ್ನು (Robotic model) ​ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿ ಬೆಂಗಳೂರಿನ (IIIT-B) ಸಂಶೋಧಕರು ಅಭಿವೃದ್ಧಿಪಡಿಸಿದ್ದಾರೆ.

ಎಷ್ಟೊಸಾರಿ ಮನುಷ್ಯನಿಗೆ ಮನಷ್ಯನ ಭಾವನೆಯನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುದಿಲ್ಲ. ಆದರೆ ಈ ರೋಬೊಟ್​​ ಮಾನವನ ಭಾವನೆಗಳನ್ನು ಅರ್ಥೈಸಿಕೊಂಡು ಸಂವಹನ ನಡೆಸುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ. ಸೋಹಂ ಜೋಶಿ, ಅರ್ಪಿತಾ ಮಳವಳ್ಳಿ ಮತ್ತು ಶ್ರೀಶಾ ರಾವ್ ಅವರ ಈ ಸಂಶೋಧನಾ ಪ್ರಬಂಧವು ಪಬ್ಲಿಕ್ ಲೈಬ್ರರಿ ಸೈನ್ಸ್ (PLOS) ನ ಜರ್ನಲ್‌ನಲ್ಲಿ ಪ್ರಕಟವಾಗಿದೆ.

ಕೆಲವೊಂದು ಸಾರಿ ವರ್ತನೆ ತಕ್ಕ ಹಾಗೆ ನಮಗೆ ಪ್ರತಿಕ್ರಿಯೆ ದೊರೆಯುವುದಿಲ್ಲ, ವಿಭಿನ್ನವಾಗಿರುತ್ತದೆ. ಆದರೆ ಈ ರೋಬೋಟ್​ ಮಾನವನ ವರ್ತನೆ ಮತ್ತು ಭಾವನೆಯನ್ನು ಅರ್ಥ ಮಾಡಿಕೊಂಡು ನಿಖರವಾಗಿ ಪ್ರತಿಕ್ರಿಯೆ ನೀಡುತ್ತದೆ ಎಂದು ಯೋಜನೆಯ ಅಧ್ಯಾಪಕ, ಮೇಲ್ವಿಚಾರಕ ರಾವ್ ಹೇಳಿದರು.

ಇದನ್ನೂ ಓದಿ: ಒಮಾನ್ ಮೂಲದ ಮಗುವಿಗೆ ರೋಬೋಟ್ ಸಹಾಯದಿಂದ ಕಿಡ್ನಿ ಶಸ್ತ್ರಚಿಕಿತ್ಸೆ ನಡೆಸಿದ ಬೆಂಗಳೂರಿನ ವೈದ್ಯರು 

ರೋಬೋಟ್‌ಗಳು/ಮಾಡೆಲ್‌ಗಳು ಮನೋವಿಜ್ಞಾನದ ಬಗ್ಗೆ ಸ್ವಲ್ಪ ತಿಳುವಳಿಕೆಯನ್ನು ಹೊಂದಿರಬೇಕು. ಸಂವಹನ ನಡೆಸುವ ವ್ಯಕ್ತಿಯ ಆಸಕ್ತಿ ಮತ್ತು ವಯಸ್ಸನ್ನು ಪರಿಗಣಿಸಬೇಕು. ಈ ಹೊಸ ತಂತ್ರಜ್ಞಾನವು ಭಾವನೆಗಳು ಮತ್ತು ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಸಾಧನಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ.

ಓರ್ವ ಉದ್ಯಮಿಯ ಮಾನಸಿಕ ಸ್ಥಿತಿಯನ್ನು ಅರ್ಥಮಾಡಿಕೊಂಡು ಅವರ ಉದ್ಯಮಕ್ಕೂ ಸಹ ಈ ರೋಬೋಟ್​ ಸಹಾಯಕವಾಗಬಹುದು. ಅಲ್ಲದೆ, ಅಪಘಾತಗಳನ್ನು ತಡೆಗಟ್ಟಲು ಚಾಲಕನ ನಡವಳಿಕೆಯ ಆಧಾರದ ಮೇಲೆ ಆತನ ನಿದ್ದೆ ಅಥವಾ ಅನಾರೋಗ್ಯವನ್ನು ರೊಬೋಟ್​​ ಪತ್ತೆ ಮಾಡಿ ಬಳಿಕ ಎಚ್ಚರಿಕೆ ನೀಡುತ್ತದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:06 am, Mon, 4 December 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ