AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವನ ಭಾವನೆ ಅರ್ಥೈಸಿಕೊಂಡು ಸಂವಹನ ನಡೆಸುವ ರೋಬೋಟ್​​​: ಐಐಟಿ ಸಂಶೋಧನೆ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿ ಬೆಂಗಳೂರಿನ ಸಂಶೋಧಕರು ಹೊಸ ರೋಬೋಟಿಕ್ ಮಾದರಿಯನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಮನುಷ್ಯರನ್ನು ಅರ್ಥಮಾಡಿಕೊಂಡು, ಅವರ ಭಾವನೆಗಳ ತಕ್ಕ ಹಾಗೆ ಅವರೊಂದಿಗೆ ಸಂವಹನ ನಡೆಸುತ್ತದೆ. ​

ಮಾನವನ ಭಾವನೆ ಅರ್ಥೈಸಿಕೊಂಡು ಸಂವಹನ ನಡೆಸುವ ರೋಬೋಟ್​​​: ಐಐಟಿ ಸಂಶೋಧನೆ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Dec 04, 2023 | 11:38 AM

ಬೆಂಗಳೂರು ಡಿ.04: ಮನುಷ್ಯರನ್ನು ಅರ್ಥಮಾಡಿಕೊಂಡು, ಅವರ ಭಾವನೆಗಳ ತಕ್ಕ ಹಾಗೆ ಅವರೊಂದಿಗೆ ಸಂವಹನ ನಡೆಸುವ ರೋಬೋಟಿಕ್ ಮಾದರಿಯನ್ನು (Robotic model) ​ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿ ಬೆಂಗಳೂರಿನ (IIIT-B) ಸಂಶೋಧಕರು ಅಭಿವೃದ್ಧಿಪಡಿಸಿದ್ದಾರೆ.

ಎಷ್ಟೊಸಾರಿ ಮನುಷ್ಯನಿಗೆ ಮನಷ್ಯನ ಭಾವನೆಯನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುದಿಲ್ಲ. ಆದರೆ ಈ ರೋಬೊಟ್​​ ಮಾನವನ ಭಾವನೆಗಳನ್ನು ಅರ್ಥೈಸಿಕೊಂಡು ಸಂವಹನ ನಡೆಸುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ. ಸೋಹಂ ಜೋಶಿ, ಅರ್ಪಿತಾ ಮಳವಳ್ಳಿ ಮತ್ತು ಶ್ರೀಶಾ ರಾವ್ ಅವರ ಈ ಸಂಶೋಧನಾ ಪ್ರಬಂಧವು ಪಬ್ಲಿಕ್ ಲೈಬ್ರರಿ ಸೈನ್ಸ್ (PLOS) ನ ಜರ್ನಲ್‌ನಲ್ಲಿ ಪ್ರಕಟವಾಗಿದೆ.

ಕೆಲವೊಂದು ಸಾರಿ ವರ್ತನೆ ತಕ್ಕ ಹಾಗೆ ನಮಗೆ ಪ್ರತಿಕ್ರಿಯೆ ದೊರೆಯುವುದಿಲ್ಲ, ವಿಭಿನ್ನವಾಗಿರುತ್ತದೆ. ಆದರೆ ಈ ರೋಬೋಟ್​ ಮಾನವನ ವರ್ತನೆ ಮತ್ತು ಭಾವನೆಯನ್ನು ಅರ್ಥ ಮಾಡಿಕೊಂಡು ನಿಖರವಾಗಿ ಪ್ರತಿಕ್ರಿಯೆ ನೀಡುತ್ತದೆ ಎಂದು ಯೋಜನೆಯ ಅಧ್ಯಾಪಕ, ಮೇಲ್ವಿಚಾರಕ ರಾವ್ ಹೇಳಿದರು.

ಇದನ್ನೂ ಓದಿ: ಒಮಾನ್ ಮೂಲದ ಮಗುವಿಗೆ ರೋಬೋಟ್ ಸಹಾಯದಿಂದ ಕಿಡ್ನಿ ಶಸ್ತ್ರಚಿಕಿತ್ಸೆ ನಡೆಸಿದ ಬೆಂಗಳೂರಿನ ವೈದ್ಯರು 

ರೋಬೋಟ್‌ಗಳು/ಮಾಡೆಲ್‌ಗಳು ಮನೋವಿಜ್ಞಾನದ ಬಗ್ಗೆ ಸ್ವಲ್ಪ ತಿಳುವಳಿಕೆಯನ್ನು ಹೊಂದಿರಬೇಕು. ಸಂವಹನ ನಡೆಸುವ ವ್ಯಕ್ತಿಯ ಆಸಕ್ತಿ ಮತ್ತು ವಯಸ್ಸನ್ನು ಪರಿಗಣಿಸಬೇಕು. ಈ ಹೊಸ ತಂತ್ರಜ್ಞಾನವು ಭಾವನೆಗಳು ಮತ್ತು ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಸಾಧನಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ.

ಓರ್ವ ಉದ್ಯಮಿಯ ಮಾನಸಿಕ ಸ್ಥಿತಿಯನ್ನು ಅರ್ಥಮಾಡಿಕೊಂಡು ಅವರ ಉದ್ಯಮಕ್ಕೂ ಸಹ ಈ ರೋಬೋಟ್​ ಸಹಾಯಕವಾಗಬಹುದು. ಅಲ್ಲದೆ, ಅಪಘಾತಗಳನ್ನು ತಡೆಗಟ್ಟಲು ಚಾಲಕನ ನಡವಳಿಕೆಯ ಆಧಾರದ ಮೇಲೆ ಆತನ ನಿದ್ದೆ ಅಥವಾ ಅನಾರೋಗ್ಯವನ್ನು ರೊಬೋಟ್​​ ಪತ್ತೆ ಮಾಡಿ ಬಳಿಕ ಎಚ್ಚರಿಕೆ ನೀಡುತ್ತದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:06 am, Mon, 4 December 23

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್