AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವನ ಭಾವನೆ ಅರ್ಥೈಸಿಕೊಂಡು ಸಂವಹನ ನಡೆಸುವ ರೋಬೋಟ್​​​: ಐಐಟಿ ಸಂಶೋಧನೆ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿ ಬೆಂಗಳೂರಿನ ಸಂಶೋಧಕರು ಹೊಸ ರೋಬೋಟಿಕ್ ಮಾದರಿಯನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಮನುಷ್ಯರನ್ನು ಅರ್ಥಮಾಡಿಕೊಂಡು, ಅವರ ಭಾವನೆಗಳ ತಕ್ಕ ಹಾಗೆ ಅವರೊಂದಿಗೆ ಸಂವಹನ ನಡೆಸುತ್ತದೆ. ​

ಮಾನವನ ಭಾವನೆ ಅರ್ಥೈಸಿಕೊಂಡು ಸಂವಹನ ನಡೆಸುವ ರೋಬೋಟ್​​​: ಐಐಟಿ ಸಂಶೋಧನೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Dec 04, 2023 | 11:38 AM

Share

ಬೆಂಗಳೂರು ಡಿ.04: ಮನುಷ್ಯರನ್ನು ಅರ್ಥಮಾಡಿಕೊಂಡು, ಅವರ ಭಾವನೆಗಳ ತಕ್ಕ ಹಾಗೆ ಅವರೊಂದಿಗೆ ಸಂವಹನ ನಡೆಸುವ ರೋಬೋಟಿಕ್ ಮಾದರಿಯನ್ನು (Robotic model) ​ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿ ಬೆಂಗಳೂರಿನ (IIIT-B) ಸಂಶೋಧಕರು ಅಭಿವೃದ್ಧಿಪಡಿಸಿದ್ದಾರೆ.

ಎಷ್ಟೊಸಾರಿ ಮನುಷ್ಯನಿಗೆ ಮನಷ್ಯನ ಭಾವನೆಯನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುದಿಲ್ಲ. ಆದರೆ ಈ ರೋಬೊಟ್​​ ಮಾನವನ ಭಾವನೆಗಳನ್ನು ಅರ್ಥೈಸಿಕೊಂಡು ಸಂವಹನ ನಡೆಸುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ. ಸೋಹಂ ಜೋಶಿ, ಅರ್ಪಿತಾ ಮಳವಳ್ಳಿ ಮತ್ತು ಶ್ರೀಶಾ ರಾವ್ ಅವರ ಈ ಸಂಶೋಧನಾ ಪ್ರಬಂಧವು ಪಬ್ಲಿಕ್ ಲೈಬ್ರರಿ ಸೈನ್ಸ್ (PLOS) ನ ಜರ್ನಲ್‌ನಲ್ಲಿ ಪ್ರಕಟವಾಗಿದೆ.

ಕೆಲವೊಂದು ಸಾರಿ ವರ್ತನೆ ತಕ್ಕ ಹಾಗೆ ನಮಗೆ ಪ್ರತಿಕ್ರಿಯೆ ದೊರೆಯುವುದಿಲ್ಲ, ವಿಭಿನ್ನವಾಗಿರುತ್ತದೆ. ಆದರೆ ಈ ರೋಬೋಟ್​ ಮಾನವನ ವರ್ತನೆ ಮತ್ತು ಭಾವನೆಯನ್ನು ಅರ್ಥ ಮಾಡಿಕೊಂಡು ನಿಖರವಾಗಿ ಪ್ರತಿಕ್ರಿಯೆ ನೀಡುತ್ತದೆ ಎಂದು ಯೋಜನೆಯ ಅಧ್ಯಾಪಕ, ಮೇಲ್ವಿಚಾರಕ ರಾವ್ ಹೇಳಿದರು.

ಇದನ್ನೂ ಓದಿ: ಒಮಾನ್ ಮೂಲದ ಮಗುವಿಗೆ ರೋಬೋಟ್ ಸಹಾಯದಿಂದ ಕಿಡ್ನಿ ಶಸ್ತ್ರಚಿಕಿತ್ಸೆ ನಡೆಸಿದ ಬೆಂಗಳೂರಿನ ವೈದ್ಯರು 

ರೋಬೋಟ್‌ಗಳು/ಮಾಡೆಲ್‌ಗಳು ಮನೋವಿಜ್ಞಾನದ ಬಗ್ಗೆ ಸ್ವಲ್ಪ ತಿಳುವಳಿಕೆಯನ್ನು ಹೊಂದಿರಬೇಕು. ಸಂವಹನ ನಡೆಸುವ ವ್ಯಕ್ತಿಯ ಆಸಕ್ತಿ ಮತ್ತು ವಯಸ್ಸನ್ನು ಪರಿಗಣಿಸಬೇಕು. ಈ ಹೊಸ ತಂತ್ರಜ್ಞಾನವು ಭಾವನೆಗಳು ಮತ್ತು ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಸಾಧನಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ.

ಓರ್ವ ಉದ್ಯಮಿಯ ಮಾನಸಿಕ ಸ್ಥಿತಿಯನ್ನು ಅರ್ಥಮಾಡಿಕೊಂಡು ಅವರ ಉದ್ಯಮಕ್ಕೂ ಸಹ ಈ ರೋಬೋಟ್​ ಸಹಾಯಕವಾಗಬಹುದು. ಅಲ್ಲದೆ, ಅಪಘಾತಗಳನ್ನು ತಡೆಗಟ್ಟಲು ಚಾಲಕನ ನಡವಳಿಕೆಯ ಆಧಾರದ ಮೇಲೆ ಆತನ ನಿದ್ದೆ ಅಥವಾ ಅನಾರೋಗ್ಯವನ್ನು ರೊಬೋಟ್​​ ಪತ್ತೆ ಮಾಡಿ ಬಳಿಕ ಎಚ್ಚರಿಕೆ ನೀಡುತ್ತದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:06 am, Mon, 4 December 23

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ