AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವನ ಭಾವನೆ ಅರ್ಥೈಸಿಕೊಂಡು ಸಂವಹನ ನಡೆಸುವ ರೋಬೋಟ್​​​: ಐಐಟಿ ಸಂಶೋಧನೆ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿ ಬೆಂಗಳೂರಿನ ಸಂಶೋಧಕರು ಹೊಸ ರೋಬೋಟಿಕ್ ಮಾದರಿಯನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಮನುಷ್ಯರನ್ನು ಅರ್ಥಮಾಡಿಕೊಂಡು, ಅವರ ಭಾವನೆಗಳ ತಕ್ಕ ಹಾಗೆ ಅವರೊಂದಿಗೆ ಸಂವಹನ ನಡೆಸುತ್ತದೆ. ​

ಮಾನವನ ಭಾವನೆ ಅರ್ಥೈಸಿಕೊಂಡು ಸಂವಹನ ನಡೆಸುವ ರೋಬೋಟ್​​​: ಐಐಟಿ ಸಂಶೋಧನೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Dec 04, 2023 | 11:38 AM

Share

ಬೆಂಗಳೂರು ಡಿ.04: ಮನುಷ್ಯರನ್ನು ಅರ್ಥಮಾಡಿಕೊಂಡು, ಅವರ ಭಾವನೆಗಳ ತಕ್ಕ ಹಾಗೆ ಅವರೊಂದಿಗೆ ಸಂವಹನ ನಡೆಸುವ ರೋಬೋಟಿಕ್ ಮಾದರಿಯನ್ನು (Robotic model) ​ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿ ಬೆಂಗಳೂರಿನ (IIIT-B) ಸಂಶೋಧಕರು ಅಭಿವೃದ್ಧಿಪಡಿಸಿದ್ದಾರೆ.

ಎಷ್ಟೊಸಾರಿ ಮನುಷ್ಯನಿಗೆ ಮನಷ್ಯನ ಭಾವನೆಯನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುದಿಲ್ಲ. ಆದರೆ ಈ ರೋಬೊಟ್​​ ಮಾನವನ ಭಾವನೆಗಳನ್ನು ಅರ್ಥೈಸಿಕೊಂಡು ಸಂವಹನ ನಡೆಸುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ. ಸೋಹಂ ಜೋಶಿ, ಅರ್ಪಿತಾ ಮಳವಳ್ಳಿ ಮತ್ತು ಶ್ರೀಶಾ ರಾವ್ ಅವರ ಈ ಸಂಶೋಧನಾ ಪ್ರಬಂಧವು ಪಬ್ಲಿಕ್ ಲೈಬ್ರರಿ ಸೈನ್ಸ್ (PLOS) ನ ಜರ್ನಲ್‌ನಲ್ಲಿ ಪ್ರಕಟವಾಗಿದೆ.

ಕೆಲವೊಂದು ಸಾರಿ ವರ್ತನೆ ತಕ್ಕ ಹಾಗೆ ನಮಗೆ ಪ್ರತಿಕ್ರಿಯೆ ದೊರೆಯುವುದಿಲ್ಲ, ವಿಭಿನ್ನವಾಗಿರುತ್ತದೆ. ಆದರೆ ಈ ರೋಬೋಟ್​ ಮಾನವನ ವರ್ತನೆ ಮತ್ತು ಭಾವನೆಯನ್ನು ಅರ್ಥ ಮಾಡಿಕೊಂಡು ನಿಖರವಾಗಿ ಪ್ರತಿಕ್ರಿಯೆ ನೀಡುತ್ತದೆ ಎಂದು ಯೋಜನೆಯ ಅಧ್ಯಾಪಕ, ಮೇಲ್ವಿಚಾರಕ ರಾವ್ ಹೇಳಿದರು.

ಇದನ್ನೂ ಓದಿ: ಒಮಾನ್ ಮೂಲದ ಮಗುವಿಗೆ ರೋಬೋಟ್ ಸಹಾಯದಿಂದ ಕಿಡ್ನಿ ಶಸ್ತ್ರಚಿಕಿತ್ಸೆ ನಡೆಸಿದ ಬೆಂಗಳೂರಿನ ವೈದ್ಯರು 

ರೋಬೋಟ್‌ಗಳು/ಮಾಡೆಲ್‌ಗಳು ಮನೋವಿಜ್ಞಾನದ ಬಗ್ಗೆ ಸ್ವಲ್ಪ ತಿಳುವಳಿಕೆಯನ್ನು ಹೊಂದಿರಬೇಕು. ಸಂವಹನ ನಡೆಸುವ ವ್ಯಕ್ತಿಯ ಆಸಕ್ತಿ ಮತ್ತು ವಯಸ್ಸನ್ನು ಪರಿಗಣಿಸಬೇಕು. ಈ ಹೊಸ ತಂತ್ರಜ್ಞಾನವು ಭಾವನೆಗಳು ಮತ್ತು ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಸಾಧನಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ.

ಓರ್ವ ಉದ್ಯಮಿಯ ಮಾನಸಿಕ ಸ್ಥಿತಿಯನ್ನು ಅರ್ಥಮಾಡಿಕೊಂಡು ಅವರ ಉದ್ಯಮಕ್ಕೂ ಸಹ ಈ ರೋಬೋಟ್​ ಸಹಾಯಕವಾಗಬಹುದು. ಅಲ್ಲದೆ, ಅಪಘಾತಗಳನ್ನು ತಡೆಗಟ್ಟಲು ಚಾಲಕನ ನಡವಳಿಕೆಯ ಆಧಾರದ ಮೇಲೆ ಆತನ ನಿದ್ದೆ ಅಥವಾ ಅನಾರೋಗ್ಯವನ್ನು ರೊಬೋಟ್​​ ಪತ್ತೆ ಮಾಡಿ ಬಳಿಕ ಎಚ್ಚರಿಕೆ ನೀಡುತ್ತದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:06 am, Mon, 4 December 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್