AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IIM Bengaluru: ಐಐಎಂನ 27 ವರ್ಷ ವಯಸ್ಸಿನ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಎರಡನೇ ವರ್ಷದ ಪಿಜಿಪಿ ವಿದ್ಯಾರ್ಥಿ ಆಯುಷ್ ಗುಪ್ತಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ಹಳೆ ವಿದ್ಯಾರ್ಥಿಗಳ ಸಮಿತಿಯ ಹಿರಿಯ ಸಂಯೋಜಕರೂ ಆಗಿದ್ದರು ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ತಿಳಿಸಿದೆ.

IIM Bengaluru: ಐಐಎಂನ 27 ವರ್ಷ ವಯಸ್ಸಿನ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
ಆಯುಷ್ ಗುಪ್ತಾ (IIM Twitter Image)Image Credit source: Twitter
ಗಣಪತಿ ಶರ್ಮಾ
|

Updated on: Jul 26, 2023 | 4:31 PM

Share

ಬೆಂಗಳೂರು: ಬೆಂಗಳೂರು ನಗರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIM) ವಿದ್ಯಾರ್ಥಿ, 27 ವರ್ಷ ವಯಸ್ಸಿನ ಆಯುಷ್ ಗುಪ್ತಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಕುರಿತು ಐಐಎಂ ಅಧಿಕೃತ ಟ್ವಿಟರ್​ ಹ್ಯಾಂಡಲ್​​ನಲ್ಲಿ ಮಾಹಿತಿ ನೀಡಿದೆ. ಮೃತ ವಿದ್ಯಾರ್ಥಿಯು ಮ್ಯಾನೇಜ್​ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಪದವಿಯ ಎರಡನೇ ವರ್ಷದ ಅಧ್ಯಯನ ಮಾಡುತ್ತಿದ್ದರು. ಆಯುಷ್ ಗುಪ್ತಾ ಸಾವಿನಿಂದ ಬಹಳ ಬೇಸರವಾಗಿದೆ ಎಂದು ಐಐಎಂ ಭಾನುವಾರ ಟ್ವೀಟ್ ಮಾಡಿತ್ತು.

ಎರಡನೇ ವರ್ಷದ ಪಿಜಿಪಿ ವಿದ್ಯಾರ್ಥಿ ಆಯುಷ್ ಗುಪ್ತಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ಹಳೆ ವಿದ್ಯಾರ್ಥಿಗಳ ಸಮಿತಿಯ ಹಿರಿಯ ಸಂಯೋಜಕರೂ ಆಗಿದ್ದರು ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಭಾನುವಾರ ಟ್ವೀಟ್ ಮಾಡಿತ್ತು. ಸೋಮವಾರದ ತರಗತಿಗಳನ್ನು ರದ್ದುಪಡಿಸಿದ್ದಲ್ಲದೆ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿತ್ತು.

ಫೇರಿಂಗ್ ಕ್ಯಾಪಿಟಲ್‌ನಲ್ಲಿ ಅವರ ಬೇಸಿಗೆಯ ಇಂಟರ್ನ್ ಆಗಿದ್ದ ಆಯುಷ್ ಗುಪ್ತಾ, ಇನ್‌ಸ್ಟಿಟ್ಯೂಟ್‌ನ ಹಳೆಯ ವಿದ್ಯಾರ್ಥಿಗಳೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು. ಅವರು 2017 ರಲ್ಲಿ ಬಿಐಟಿಎಸ್ ಪಿಲಾನಿಯಲ್ಲಿ ಪದವಿಯನ್ನು ಪೂರ್ಣಗೊಳಿಸಿದ್ದರು ಎಂದು ಸಾಮಾಜಿಕ ಮಾಧ್ಯಮದಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಉಲ್ಲೇಖಿಸಿದೆ.

ಇದನ್ನೂ ಓದಿ: Heart Attack: ಜ್ಯೂಸ್ ಕುಡಿಯುವುದರಿಂದ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಬಹುದಾ? ಇಲ್ಲಿದೆ ಮಾಹಿತಿ

ಆಯುಷ್ ಗುಪ್ತಾ ನಿಧನದ ಬಗ್ಗೆ ಲಿಂಕ್ಡ್​ಇನ್​​ನಲ್ಲಿಯೂ ಐಐಎಂ ಸಂದೇಶ ಪ್ರಕಟಿಸಿದ್ದು, ಅನೇಕ ಮಂದಿ ಅವರ ಜತೆಗಿನ ಒಡನಾಟದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು