AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IISc ಸಂಶೋಧನೆಯಲ್ಲಿ ತಿಳಿಯಿತು ಬೆಳ್ಳಂದೂರು ಕೆರೆಯ ನೊರೆಗೆ ಕಾರಣ, ಇಲ್ಲಿದೆ ಮಾಹಿತಿ

ಬೆಳ್ಳಂದೂರು ಕೆರೆಯಲ್ಲಿ ನೊರೆ ಕಾಣಿಸಿಕೊಳ್ಳಲು ಕಾರಣವೇನೆಂದು ಐಐಎಸ್‌ಸಿಯ ಸಂಶೋಧಕರು ಪತ್ತೆ ಹಚ್ಚಿದ್ದಾರೆ. ಸುದೀರ್ಘ ನಾಲ್ಕು ವರ್ಷಗಳ ಕಾಲ ಅಧ್ಯಯನ ನಡೆಸಿದ ಸಂಶೋಧಕರು ಪ್ರಮುಖವಾಗಿ 3 ಕಾರಣಗಳನ್ನು ತಿಳಿಸಿದ್ದಾರೆ.

IISc ಸಂಶೋಧನೆಯಲ್ಲಿ ತಿಳಿಯಿತು ಬೆಳ್ಳಂದೂರು ಕೆರೆಯ ನೊರೆಗೆ ಕಾರಣ, ಇಲ್ಲಿದೆ ಮಾಹಿತಿ
ಬೆಳ್ಳಂದೂರು ಕೆರೆ ನೊರೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 07, 2023 | 8:01 AM

Share

ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ (Bellandur Lake) ನೊರೆ (foam) ಕಾಣಿಸಿಕೊಳ್ಳಲು ಕಾರಣವೇನೆಂದು ಐಐಎಸ್‌ಸಿಯ (IISc) ಸಂಶೋಧಕರು ಪತ್ತೆ ಹಚ್ಚಿದ್ದಾರೆ. ಸುದೀರ್ಘ ನಾಲ್ಕು ವರ್ಷಗಳ ಕಾಲ ಅಧ್ಯಯನ ನಡೆಸಿದ ಸಂಶೋಧಕರು ಪ್ರಮುಖವಾಗಿ 3 ಕಾರಣಗಳನ್ನು ತಿಳಿಸಿದ್ದಾರೆ. ಒಂದು ಅತಿಯಾದ ಮಳೆ, ಎರಡು ಕರೆಗೆ ಸೇರುವ ಸಂಸ್ಕರಿಸದ ಕೊಳಚೆ ನೀರು, ಮೂರನೇಯದ್ದು, ನಿರ್ದಿಷ್ಟ ಬ್ಯಾಕ್ಟೀರಿಯಾವನ್ನು ಹೊಂದಿರುವ ಘನವಸ್ತುಗಳು ಕೆರೆ ಸೇರುವುದರಿಂದ ನೊರೆ ನಿರ್ಮಾಣವಾಗುತ್ತಿದೆ ಇದೆ ಎಂದು ಸೆಂಟರ್ ಫಾರ್ ಸಸ್ಟೈನಬಲ್ ಟೆಕ್ನಾಲಜೀಸ್ (CST), ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)ಯ ಸಂಶೋಧಕರು ತಿಳಿಸಿದ್ದಾರೆ. ಆದರೆ ತಂಡದ ಇತ್ತೀಚಿನ ವಿಶ್ಲೇಷಣೆಯ ಪ್ರಕಾರ ಮನೆಯಲ್ಲಿ ತೊಳೆಯಲು ಬಳಸುವ ಸೋಪ್​ಪೌಡರ್​ ಮತ್ತು ಶಾಂಪುಗಳಿಂದ ನೊರೆ ಉಂಟಾಗುತ್ತಿದೆ ಎಂದು ಹೇಳಿದ್ದಾರೆ.

ನೊರೆ ಬರುವುದನ್ನು ತಡೆಯುವ ಒಂದು ಮಾರ್ಗವೆಂದರೆ, ಸಂಸ್ಕರಣೆ ಮಾಡದ ಕೊಳಚೆ ನೀರನ್ನು ಕೆರೆಗೆ ಬಿಡುವುದನ್ನು ನಿಲ್ಲಿಸುವುದು, ಜೊತೆಗೆ ಮಳೆಗಾಲದ ಮೊದಲು ಕೆರೆಗಳಲ್ಲಿ ಸಂಗ್ರಹವಾಗಿರುವ ಹೂಳನ್ನು ತೆಗೆಯುವುದು.

ಇದನ್ನೂ ಓದಿ: ಜೂನ್ 11ರಂದು ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಅಧಿಕ ಮಳೆ ಸಾಧ್ಯತೆ

ಕೆಸರು ಹೇಗೆ ಸಂಗ್ರಹಗೊಳ್ಳುತ್ತದೆ

ಸಂಸ್ಕರಣೆ ಮಾಡದ ಕೊಳಚೆನೀರು ಕೆರೆಗೆ ಸೇರಿ ಕೆಸರಾಗಿ ಬದಲಾಗುತ್ತಿದೆ. ಹೀಗಾಗಿ ಸಂಸ್ಕರಣೆ ಮಾಡದ ಕೊಳಚೆನೀರನ್ನು ಕೆರೆಗೆ ಬಿಡುವುದನ್ನು ನಿಲ್ಲಿಸಬೇಕು. ಕೆರೆಗೆ ಕೊಳಚೆನೀರು ಸೇರಿ 10-15 ದಿನಗಳ ನಂತರ ಹೂಳಾಗಿ ಬದಲಾಗುತ್ತದೆ IISc ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಕೊಳಚೆನೀರು ಹರಿಯುವುದರಿಂದ ಅದರ ಒಂದು ಭಾಗವು ಕೆಸರಿಗೆ ಸಡಿಲವಾಗಿ ಅಂಟಿಕೊಳ್ಳುತ್ತದೆ. ಪರಿಣಾಮವಾಗಿ, ಅದರ ಸಾಂದ್ರತೆಯು ಹೆಚ್ಚಾಗುತ್ತದೆ. “ಕೆಲವು ಸಂದರ್ಭಗಳಲ್ಲಿ, ಮೂಲ ಸಾಂದ್ರತೆಯ 200 ಪಟ್ಟು ಹೆಚ್ಚು ಸರೋವರವನ್ನು ಪ್ರವೇಶಿಸುತ್ತದೆ” ಎಂದು CST ಯ ಮುಖ್ಯ ಸಂಶೋಧನಾ ವಿಜ್ಞಾನಿ ಮತ್ತು ಅಧ್ಯಯನದ ಲೇಖಕರಲ್ಲಿ ಒಬ್ಬರಾದ ಚಾಣಕ್ಯ ಹೆಚ್​​ ತಿಳಿಸಿದ್ದಾರೆ.

ನೊರೆಗೆ ಮತ್ತೊಂದು ಕಾರಣವೆಂದರೇ ಮಳೆಗಾಲದಲ್ಲಿ ಕೆರೆಗೆ ಒಳ ಹರಿವು ಹೆಚ್ಚುವುದರಿಂದ ನಗರದ ಹೊಲಸು ಕೆರೆಗೆ ಹೆಚ್ಚಿನ ಪ್ರಮಾಣದಲ್ಲಿ ಸೇರುತ್ತದೆ. ಈ ಹೆಚ್ಚಿನ ಪ್ರಮಾಣದ ಒಳಹರಿವಿನ ಮೂಲಕ ಬಂದ ಸರ್ಫ್ಯಾಕ್ಟಂಟ್ ನೊರೆಗೆ ಮುಖ್ಯ ಕಾರಣವಾಗಿದೆ. ಮಳೆಯಿಂದಾಗಿ ಕೆರೆಯಲ್ಲಿ ನೀರಿನ ಮಟ್ಟವು ಹೆಚ್ಚಾದಂತೆ, ಹೆಚ್ಚಿನ ಪ್ರಮಾಣದ ಸರ್ಫ್ಯಾಕ್ಟಂಟ್‌ ಸೇರಿಕೊಂಡು ಕೆರೆಯ 25 ಅಡಿ ಆಳದವರೆಗು ತಲುಪುತ್ತದೆ ಎಂದು ಸಸ್ಟೈನಬಲ್ ಟೆಕ್ನಾಲಜೀಸ್ ಸೆಂಟರ್‌ನ ಅಸೋಸಿಯೇಟ್ ಪ್ರೊಫೆಸರ್ ಮತ್ತು ಲೇಖಕರಲ್ಲಿ ಒಬ್ಬರಾದ ಲಕ್ಷ್ಮೀನಾರಾಯಣ ರಾವ್ ಹೇಳಿದರು.

ಈ ಎರಡು ಅಂಶಗಳ ಜೊತೆಗೆ, ಕೆಲವು ಬ್ಯಾಕ್ಟೀರಿಯಾಗಳನ್ನು ಹೊಂದಿರುವ ಬೇಡವಾದ ಘನವಸ್ತುಗಳು ನೊರೆಗೆ ಕಾರಣವಾಗಿರಬಹುದು ಎಂದು ಸಂಶೋಧಕರು ಸೂಚಿಸಿದ್ದಾರೆ ಎಂದು IISc ಹೇಳಿದೆ. ನೊರೆ ರಚನೆಯನ್ನು ಅಧ್ಯಯನ ಮಾಡಲು, ಸಂಶೋಧಕರು ಆಯಾ ಕಾಲದಲ್ಲಿ ನೀರು, ನೊರೆ ಸಂಗ್ರಹಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:00 am, Wed, 7 June 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ