AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ನಿವಾಸದ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್​ ಸಂಪರ್ಕ;ಎಷ್ಟು ದಂಡ ಬೀಳಬಹುದು?

ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ (HD Kumaraswamy) ಅವರ ನಿವಾಸಕ್ಕೆ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್​​ ಪಡೆದುಕೊಂಡಿದ್ದರ ಬಗ್ಗೆ ಕಾಂಗ್ರೆಸ್ (Congress)​ ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿಯವರು ‘ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ ಎಂದಿದ್ದರು. ಜೊತೆಗೆ ಇದಕ್ಕೆ ಎಷ್ಟು ದಂಡವಾಗುತ್ತದೆ, ಅದನ್ನು ನಾನು ಕಟ್ಟುತ್ತೇನೆ ಎಂದಿದ್ದರು.

ಕುಮಾರಸ್ವಾಮಿ ನಿವಾಸದ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್​ ಸಂಪರ್ಕ;ಎಷ್ಟು ದಂಡ ಬೀಳಬಹುದು?
ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​
ಸುನಿಲ್​ ಎಮ್​ ಹೆಚ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on:Nov 14, 2023 | 3:03 PM

Share

ಬೆಂಗಳೂರು, ನ.14: ದೀಪಾವಳಿ ದೀಪಾಲಂಕಾರಕ್ಕಾಗಿ ಬೆಂಗಳೂರಿನ ಜೆ.ಪಿ ನಗರ(JP Nagara)ದಲ್ಲಿರುವ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ (HD Kumaraswamy) ಅವರ ನಿವಾಸಕ್ಕೆ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್​​ ಪಡೆದುಕೊಂಡಿದ್ದರ ಬಗ್ಗೆ ಕಾಂಗ್ರೆಸ್ (Congress)​ ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿಯವರು ‘ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ, ದಂಡ ಕಟ್ಟುತ್ತೇನೆ ಎಂದಿದ್ದರು. ಈ ಕುರಿತು ರಾಜ್ಯ-ರಾಜಕಾರಣದಲ್ಲಿ ಧಗಧಗಿಸುತ್ತಿದ್ದು, ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇವರಿಬ್ಬರ ವಾಗ್ವಾದದ ಮಧ್ಯೆ ಇದೀಗ ಬೆಸ್ಕಾಂ ಇಲಾಖೆ ಮಧ್ಯಪ್ರವೇಶಿಸಿದ್ದು, ಪರಿಶೀಲನೆ ನಡೆಸಿದೆ.

ಎಷ್ಟು ದಂಡ ಬೀಳಬಹುದು?

ಇನ್ನು ಈ ಕುರಿತು ಬೆಸ್ಕಾಂ ಬೆಸ್ಕಾಂ ಜಾಗೃತಾ ದಳದ ಡಿವೈಎಸ್ ಪಿ ಅನುಷ ನೇತೃತ್ವದಲ್ಲಿ ವಿದ್ಯುತ್ ಬಳಕೆ ಕೌಂಟಿಂಗ್ ಶುರುವಾಗಿದೆ. ಮನೆಯ ದೀಪಾಲಂಕಾರ ಆನ್ ಮಾಡಿಸಿದ ಅಧಿಕಾರಿಗಳು 10 ನಿಮಿಷ ಎಷ್ಟು ಬಳಕೆ ಆಗುತ್ತದೆ ಎನ್ನುವುದನ್ನು ಲೆಕ್ಕ ಮಾಡುತ್ತಾರೆ. ಇದರಿಂದ ಎರಡು ದಿನ ಎಷ್ಟು ಬಳಕೆ ಆಗಿದೆ ಎಂಬುದರ ಲೆಕ್ಕ ತೆಗೆದು, ಇಂದು(ನ.14) ಸಂಜೆಯೊಳಗೆ ಅಧಿಕಾರಿಗಳು ರಿಪೋರ್ಟ್ ನೀಡಲಿದ್ದಾರೆ. ನಾಳೆ ದಂಡದ‌ ಮೊತ್ತವನ್ನು ನೋಟಿಸ್ ಮೂಲಕ ಬೆಸ್ಕಾ ತಿಳಿಸಲಿದೆ.

ಇದನ್ನೂ ಓದಿ:ರಾಜ್ಯ ರಾಜಕಾರಣದಲ್ಲಿ ಧಗಧಗಿಸಿದ ಕುಮಾರಸ್ವಾಮಿ ಮನೆಯ ಅಕ್ರಮ ವಿದ್ಯುತ್, ಯಾರು ಏನು ಹೇಳಿದ್ರು?

ಇನ್ನು ಕಾಂಗ್ರೆಸ್ ಟ್ವೀಟ್​ ಮಾಡಿರುವ ಬೆನ್ನಲ್ಲೆ ಪ್ರತಿಕ್ರಿಯಿಸಿದ್ದ ಹೆಚ್​​ಡಿಕೆ, ‘ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದರು. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ(ನವೆಂಬರ್ 13) ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಹೇಳುವ ಮೂಲಕ ಸ್ಪಷ್ಟಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Tue, 14 November 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ