AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾರರ ಪಟ್ಟಿ ಅಕ್ರಮ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ಗೆ ಸಂಕಷ್ಟ

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿತ್ತು. ಚಿಲುಮೆ ಸಂಸ್ಥೆಗೆ ಮತದಾರರ ಖಾಸಗಿ ಮಾಹಿತಿ ಸಂಗ್ರಹಕ್ಕೆ ತುಷಾರ್ ಗಿರಿನಾಥ್ ಅವರು ಅವಕಾಶ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಿಎಂಗೆ ಮಾಜಿ ಎಂಎಲ್​ಸಿ ರಮೇಶ್ ಬಾಬು ಪತ್ರ ಬರೆದಿದ್ದರು. ಹೀಗಾಗಿ ತುಷಾರ್ ಗಿರಿನಾಥ್ ವಿರುದ್ಧ ತನಿಖೆ ನಡೆಸಲು ಸರ್ಕಾರ ಮುಂದಾಗಿದೆ.

ಮತದಾರರ ಪಟ್ಟಿ ಅಕ್ರಮ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ಗೆ ಸಂಕಷ್ಟ
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಪ್ರಸನ್ನ ಗಾಂವ್ಕರ್​
| Edited By: |

Updated on:Oct 03, 2023 | 10:42 AM

Share

ಬೆಂಗಳೂರು, ಅ.03: ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ವಿರುದ್ಧ ಗಂಭೀರ ಆರೋಪ ಕೇಳಿ ಬಂದಿತ್ತು. ಚಿಲುಮೆ ಸಂಸ್ಥೆಗೆ ಮತದಾರರ ಖಾಸಗಿ ಮಾಹಿತಿ ಸಂಗ್ರಹಕ್ಕೆ ತುಷಾರ್ ಗಿರಿನಾಥ್ ಅವರು ಅವಕಾಶ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಿಎಂಗೆ ಮಾಜಿ ಎಂಎಲ್​ಸಿ ರಮೇಶ್ ಬಾಬು ಪತ್ರ ಬರೆದಿದ್ದರು. ಸಿಎಂ (Siddaramaiah) ಸೂಚನೆ ಮೇರೆಗೆ ಸಿಎಸ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಈ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವಂತೆ ಸಿಎಸ್​ ಕೋರಿದೆ. ಆಗಸ್ಟ್ ತಿಂಗಳಲ್ಲೇ ಸರ್ಕಾರ ವರದಿ ಕೇಳಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮತದಾನದ ಬಗ್ಗೆ ಮತದಾರರಿಗೆ ಜಾಗೃತಿ ಮೂಡಿಸುವ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಚಿಲುಮೆ ಸಂಸ್ಥೆ ಬಿಎಲ್‌ಓ ( ಬೂತ್‌ ಮಟ್ಟದ ಅಧಿಕಾರಿ) ಹೆಸರಿನಲ್ಲಿ ಗುರುತಿನ ಚೀಟಿಯನ್ನು ಸೃಷ್ಟಿಸಿಕೊಂಡು ಮತದಾರರ ಮನೆಗಳಿಗೆ ಹೋಗಿ ವೈಯಕ್ತಿಕ ಮಾಹಿತಿಗಳನ್ನು ಕಲೆ ಹಾಕಿತ್ತು. ಅಲ್ಲದೆ ಈ ಮಾಹಿತಿಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪ ಇದೆ. ಇನ್ನು ಈ ವೇಳೆ ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಯೂ ಆಗಿದ್ದರು. ತುಷಾರ್ ಗಿರಿನಾಥ್ ಅವರು ಚಿಲುಮೆ ಸಂಸ್ಥೆಗೆ ಮತಪಟ್ಟಿ ಪರಿಷ್ಕರಣೆಗೆ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಇದನ್ನೂ ಓದಿ: ಮತದಾರರ ಖಾಸಗಿ ವಿಷಯ ಸಂಗ್ರಹಿಸಲು ಚಿಲುಮೆ ಸಂಸ್ಥೆಗೆ ಅವಕಾಶ; ತುಷಾರ್ ಗಿರಿನಾಥ್​ ವಿರುದ್ಧ ತನಿಖೆಗೆ ಆಗ್ರಹ

ಎಂಎಲ್​ಸಿ ರಮೇಶ್ ಬಾಬು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ಮತದಾರರ ಖಾಸಗಿ ವಿಷಯ ಸಂಗ್ರಹಿಸಲು ಚಿಲುಮೆ ಸಂಸ್ಥೆಗೆ ಅವಕಾಶ ನೀಡಿದ ಆರೋಪದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ವಿರುದ್ಧ ತನಿಖೆ ನಡೆಸುವಂತೆ ಮನವಿ ಮಾಡಿದ್ದರು. ಅದರಂತೆ ಈಗ ತನಿಖೆ ನಡೆಸಲು ಸರ್ಕಾರ ಮುಂದಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:39 am, Tue, 3 October 23

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?