AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಹುಟ್ಟುಹಬ್ಬ ಆಚರಿಸಿಕೊಳ್ತಿಲ್ಲ, ರಾಜ್ಯಾದ್ಯಂತ ಜನ ಶುಭಾಶಯ ಕೋರುತ್ತಿದ್ದಾರೆ: ಸಿಎಂ ಬೊಮ್ಮಾಯಿ

ಸದ್ಯ ಹುಟ್ಟು ಹಬ್ಬ ಹಾಗೂ ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಸಂತಸದಲ್ಲಿರುವ ಸಿಎಂ ಬೊಮ್ಮಾಯಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಸಿಎಂಗೆ ಶುಭಕೋರಲು ಸಚಿವರು ಹಾಗೂ ಶಾಸಕರು ಆರ್ಟಿ ನಗರದ ನಿವಾಸಕ್ಕೆ ಆಗಮಿಸುತ್ತಿದ್ದಾರೆ.

ನಾನು ಹುಟ್ಟುಹಬ್ಬ ಆಚರಿಸಿಕೊಳ್ತಿಲ್ಲ, ರಾಜ್ಯಾದ್ಯಂತ ಜನ ಶುಭಾಶಯ ಕೋರುತ್ತಿದ್ದಾರೆ: ಸಿಎಂ ಬೊಮ್ಮಾಯಿ
ನಾನು ಹುಟ್ಟುಹಬ್ಬ ಆಚರಿಸಿಕೊಳ್ತಿಲ್ಲ, ರಾಜ್ಯಾದ್ಯಂತ ಜನ ಶುಭಾಶಯ ಕೋರುತ್ತಿದ್ದಾರೆ: ರಾಷ್ಟ್ರಪತಿ, ಪ್ರಧಾನಿ, ಶಾ ಸಹ ವಿಶ್ ಮಾಡಿದರು!
TV9 Web
| Edited By: |

Updated on:Jan 28, 2022 | 10:01 AM

Share

ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿಗೆ ದೂರವಾಣಿ ಕರೆ ಮಾಡಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಜನ್ಮದಿನದ ಶುಭಾಶಯ ಕೋರಿದ್ದಾರೆ. ಅಲ್ಲದೆ ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ 6 ತಿಂಗಳು ತುಂಬಿದ್ದಕ್ಕೆ ಶುಭಾಶಯ ತಿಳಿಸಿದ್ದಾರೆ. ಸದ್ಯ ಹುಟ್ಟು ಹಬ್ಬ ಹಾಗೂ ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಸಂತಸದಲ್ಲಿರುವ ಸಿಎಂ ಬೊಮ್ಮಾಯಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಸಿಎಂಗೆ ಶುಭಕೋರಲು ಸಚಿವರು ಹಾಗೂ ಶಾಸಕರು ಆರ್ಟಿ ನಗರದ ನಿವಾಸಕ್ಕೆ ಆಗಮಿಸುತ್ತಿದ್ದಾರೆ. ಸಚಿವ ಆರಗ ಜ್ಞಾನೇಂದ್ರ, ಶಾಸಕರಾದ ರಾಮದಾಸ್ ಸೇರಿದಂತೆ ಹಲವು ನಾಯಕರು ದಂಡು ಆಗಮಿಸಿದೆ.

ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ನಾನು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಆದ್ರೂ ರಾಜ್ಯಾದ್ಯಂತ ಶುಭಾಶಯಗಳು ಬರುತ್ತಿವೆ. ನಮ್ಮ ಸಚಿವರು ಶಾಸಕರು ನಮ್ಮ ಕ್ಷೇತ್ರದ ಜನ ಶುಭಾಶಯ ಕೋರುತ್ತಿದ್ದಾರೆ. ನನ್ನ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ ನಿನ್ನೆಯೇ ಶುಭ ಕೋರಿದ್ದರು. ಇಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ಅಮಿತ್ ಶಾ ದೂರವಾಣಿ ಕರೆ ಮಾಡಿ ಶುಭ ಕೋರಿದರು. ಎಲ್ಲರಿಗೂ ತುಂಬ ಹೃದಯದ ಧನ್ಯವಾದಗಳು. ಇವರ ಶುಭಾಶಯ ಮತ್ತಷ್ಟು ಸ್ಪೂರ್ತಿ ನೀಡಿದೆ. ರಾಜ್ಯದ ಅಭಿವೃದ್ಧಿಯತ್ತ ಕೆಲಸ ಮಾಡುತ್ತೇನೆ ಎಂದರು. ಇನ್ನು ಇದೇ ವೇಳೆ ಕೋವಿಡ್ 50:50 ರೂಲ್ಸ್ ಹಿಂಪಡೆಯುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ಕೇಳಿದಾಗ ಸಿಎಂ ಬೊಮ್ಮಾಯಿ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ವಿಶೇಷ ಕಾರ್ಯಕ್ರಮ ಇಂದು ಸಿಎಂ ಬಸವರಾಜ ಬೊಮ್ಮಾಯಿಗೆ‌ ಡಬಲ್ ಸಂಭ್ರಮದಲ್ಲಿದ್ದಾರೆ. ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಇಂದಿಗೆ 6 ತಿಂಗಳು ತುಂಬಿದ ದಿನವೇ ಸಿಎಂ‌ ಬೊಮ್ಮಾಯಿ ಜನ್ಮದಿನ. ಇಂದು 62ನೇ ವಸಂತಕ್ಕೆ ಸಿಎಂ ಬೊಮ್ಮಾಯಿ ಕಾಲಿಟ್ಟಿದ್ದಾರೆ. ಸದ್ಯ ತಮ್ಮ ಆಡಳಿತಾವಧಿ ಆರು ತಿಂಗಳ ಪೂರೈಕೆ ಹಿನ್ನೆಲೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಇದನ್ನೂ ಓದಿ: ಸ್ವಂತ ಜಿಲ್ಲೆ ಉಸ್ತುವಾರಿ ನೀಡದ್ದಕ್ಕೆ ಎಂಟಿಬಿ ನಾಗರಾಜ್ ಬೇಸರ; ಸಿಎಂ ಬೊಮ್ಮಾಯಿ ವಿರುದ್ಧ ಬೆಂಬಲಿಗರ ಆಕ್ರೋಶ

Published On - 9:39 am, Fri, 28 January 22

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!