AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರಿಷ್ಠರು ಸೂಚಿಸಿದರೆ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸಿದ್ಧ -ಸತೀಶ್ ಜಾರಕಿಹೊಳಿ

ಪಕ್ಷದ ವರಿಷ್ಠರು ಸೂಚಿಸಿದರೆ ನಾನು ಸ್ಪರ್ಧಿಸುವುದಕ್ಕೆ ಸಿದ್ಧ ಎಂದು ವಿಧಾನಸೌಧದಲ್ಲಿ ‘ಕೈ’ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ರು. ಈಗಾಗಲೇ ಮೂರ್ನಾಲ್ಕು ಹೆಸರು ಚಾಲ್ತಿಯಲ್ಲಿವೆ. ಇನ್ನು ಎರಡ್ಮೂರು ದಿನಗಳಲ್ಲಿ ನಾಯಕರು ಚರ್ಚೆ ನಡೆಸ್ತಾರೆ. ಬಳಿಕ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ವರಿಷ್ಠರು ಸೂಚಿಸಿದರೆ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸಿದ್ಧ -ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
ಆಯೇಷಾ ಬಾನು
|

Updated on:Mar 18, 2021 | 2:04 PM

Share

ಬೆಂಗಳೂರು: ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಅನಿಸಿಕೆ ಹೊರ ಹಾಕಿದ್ದಾರೆ. ಪಕ್ಷದ ವರಿಷ್ಠರು ಸೂಚಿಸಿದರೆ ನಾನು ಸ್ಪರ್ಧಿಸುವುದಕ್ಕೆ ಸಿದ್ಧ ಎಂದು ವಿಧಾನಸೌಧದಲ್ಲಿ ‘ಕೈ’ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ರು. ಈಗಾಗಲೇ ಮೂರ್ನಾಲ್ಕು ಹೆಸರು ಚಾಲ್ತಿಯಲ್ಲಿವೆ. ಇನ್ನು ಎರಡ್ಮೂರು ದಿನಗಳಲ್ಲಿ ನಾಯಕರು ಚರ್ಚೆ ನಡೆಸ್ತಾರೆ. ಬಳಿಕ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಇನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸತೀಶ್ ಜಾರಕಿಹೊಳಿ ಸ್ಪರ್ಧಿಸಬೇಕೆ ಎಂದು ಒಂದು ಕಡೆ ಸಿದ್ದರಾಮಯ್ಯ ಪ್ರಯತ್ನ ಪಟ್ರೆ ಮತ್ತೊಂದು ಕಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರಿಂದಲೂ ಒತ್ತಡ ಹೆಚ್ಚಾಗುತ್ತಿತ್ತು. ಅಲ್ಲದೆ ಸತೀಶ್ ಜಾರಕಿಹೊಳಿಯನ್ನು ಕಣಕ್ಕಿಳಿಸುವುದಕ್ಕೆ ಕಾಂಗ್ರೆಸ್ ಹೈಕಮಾಂಡ್‌ನಿಂದಲೂ ಸೂಚನೆ ಬಂದಿತ್ತು. ಆದರೆ ಈ ಬಗ್ಗೆ ಸತೀಶ್ ಜಾರಕಿಹೊಳಿ ಮಾತ್ರ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಸದ್ಯ ಈಗ ವಿಧಾನಸೌಧದಲ್ಲಿ ‘ಕೈ’ ಶಾಸಕ ಸತೀಶ್ ಜಾರಕಿಹೊಳಿ ತಾವು ಪಕ್ಷದ ವರಿಷ್ಠರು ಸೂಚಿಸಿದರೆ ನಾನು ಸ್ಪರ್ಧಿಸುವುದಕ್ಕೆ ಸಿದ್ಧ ಎಂದಿದ್ದಾರೆ.

ಸತೀಶ್ ಕಣಕ್ಕಿಳಿದರೆ ಸಹೋದರರಿಂದಲೇ ಪರೋಕ್ಷವಾಗಿ ಸಹಾಯ ಸಿಗಬಹುದೆಂದು ‘ಕೈ’ ಲೆಕ್ಕಾಚಾರ ಹಾಕಿಕೊಂಡಿದೆ. ಜೊತೆಗೆ ಲಿಂಗಾಯತ ಸಮುದಾಯದ ಹೊರತಾಗಿ ಅಹಿಂದ ಮತಗಳು ಕ್ರೋಡೀಕರಣವಾಗುತ್ತೆಂಬ ಲೆಕ್ಕಾಚಾರವಿದೆ. ಸಂಪನ್ಮೂಲ ಕ್ರೋಡೀಕರಣದಲ್ಲೂ ಸತೀಶ್ ಎತ್ತಿದ ಕೈ ಎಂಬುವುದು ಕೈ ನಾಯಕರ ನಿಲುವು. ಸತೀಶ್ ಜಾರಕಿಹೊಳಿಗಿಂತ ಬೇರೆ ಉತ್ತಮ ಅಭ್ಯರ್ಥಿ ಇಲ್ಲ. ಹೀಗಾಗಿ ಸತೀಶ್ ಜಾರಕಿಹೊಳಿ ಕಣಕ್ಕಿಳಿಸಲು ಕಾಂಗ್ರೆಸ್ ಪ್ಲ್ಯಾನ್ ಮಾಡಿಕೊಂಡಿತ್ತು.

ಇದನ್ನೂ ಓದಿ: ನಿನ್ನೆಯಷ್ಟೇ ದೂರು ದಾಖಲಾಗಿದೆ.. ತಾಳ್ಮೆಯಿಂದ ಕಾಯೋಣ: ಸತೀಶ್​ ಜಾರಕಿಹೊಳಿ

Published On - 1:18 pm, Thu, 18 March 21

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?