AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಕ್ಕೆ ತೆರಳಲು ಮಾಜಿ ಸಚಿವ ರೋಷನ್ ಬೇಗ್‌ಗೆ ಷರತ್ತುಬದ್ಧ ಅನುಮತಿ ನೀಡಿದ ಕೋರ್ಟ್

ಐಎಂಎ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರೋಷನ್ ಬೇಗ್‌ ಅವರಿಗೆ ವಿದೇಶಕ್ಕೆ ತೆರಳಲು ವಿಶೇಷ ನ್ಯಾಯಾಲಯ ಎಚ್ಚರಿಕೆಯೊಂದಿಗೆ ಅನುಮತಿ ಕೊಟ್ಟಿದೆ.

ವಿದೇಶಕ್ಕೆ ತೆರಳಲು ಮಾಜಿ ಸಚಿವ ರೋಷನ್ ಬೇಗ್‌ಗೆ ಷರತ್ತುಬದ್ಧ ಅನುಮತಿ ನೀಡಿದ ಕೋರ್ಟ್
Roshan Baig
TV9 Web
| Edited By: |

Updated on:Oct 29, 2022 | 5:19 PM

Share

ಬೆಂಗಳೂರು: ಐಎಂಎ ಸಂಸ್ಥೆಯಿಂದ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ (IMA Case) ಸಿಲುಕೊಂಡಿರುವ ಮಾಜಿ ಸಚಿವ ರೋಷನ್ ಬೇಗ್‌ಗೆ (Roshan Baig) ವಿದೇಶಕ್ಕೆ ತೆರಳಲು ವಿಶೇಷ ಕೋರ್ಟ್ ಅನುಮತಿ ನೀಡಿದೆ. ನವೆಂಬರ್‌ 15ರಿಂದ 15 ದಿನಗಳ ವರೆಗೆ ಇರಾನ್‌ನ ಮಶಾದ್‌ಗೆ ತೆರಳಲು ನ್ಯಾಯಾಲಯ ಷರತ್ತುಬದ್ಧ ಅನುಮತಿ ಕೊಟ್ಟಿದೆ.

ಐಎಂಎ ಸಂಸ್ಥೆಯಿಂದ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕೋರ್ಟ್​ನಿಂದ ರೋಷನ್​ ಬೇಗ್ ಜಾಮೀನು ಪಡೆದುಕೊಂಡಿದ್ದರು. ​ ಆ ವೇಳೆ ಅನುಮತಿ ಇಲ್ಲದೇ ವಿದೇಶಕ್ಕೆ ಹೋಗದಂತೆ ಕೋರ್ಟ್ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರೋಷನ್ ಬೇಗ್ ಅವರು ಇರಾನ್‌ನ ಮಶಾದ್‌ಗೆ ತೆರಳಲು ಅನುಮತಿ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದರು. ರೋಷನ್ ಬೇಗ್ ಮನವಿ ಪುರಸ್ಕರಿಸಿರುವ ವಿಶೇಷ ನ್ಯಾಯಾಲಯ ನವೆಂಬರ್‌ 15ರಿಂದ 15 ದಿನಗಳ ಪ್ರವಾಸಕ್ಕೆ ತೆರಳಲು ಅನುಮತಿ ಕೊಟ್ಟಿದೆ.

ವಿಮಾನ ಬೋರ್ಡಿಂಗ್ ಪಾಸ್ ಹಾಜರುಪಡಿಸಬೇಕು. ಮೊಬೈಲ್ ಸಂಖ್ಯೆ, ಪ್ರಯಾಣದ ವಿವರ ಸಲ್ಲಿಸಬೇಕು. ಹಿಂತಿರುಗಿದ ಬಳಿಕ ಪಾಸ್ ಪೋರ್ಟ್ ಮರಳಿಸಲು ಸೂಚನೆ ನೀಡಿದೆ. ಒಂದು ವೇಳೆ ಷರತ್ತು ಉಲ್ಲಂಘಿಸಿದರೆ ಜಾಮೀನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿ ಜನಪ್ರತಿನಿಧಿಗಳ ಕೋರ್ಟ್‌ನ ನ್ಯಾ.ಬಿ.ಜಯಂತ ಕುಮಾರ್ ಆದೇಶ ಹೊರಡಿಸಿದ್ದಾರೆ.

400 ಕೋಟಿ ರೂ. ಪಡೆದಿದ್ದ ಆರೋಪ

ರೋಷನ್ ಬೇಗ್ ಐಎಂಎ ಕಂಪನಿಯಿಂದ ಸುಮಾರು 400 ಕೋಟಿ  ರೂಪಾಯಿ ಪಡೆದಿದ್ದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಿಬಿಐ ಅಧಿಕಾರಿಗಳೂ ಸಹ ತನಿಖೆ ನಡೆಸಿದ್ದರು. ಅಕ್ರಮ‌ ಹಣದಿಂದ ಕುಟುಂಬಸ್ಥರ ಹೆಸರಲ್ಲಿ ಆಸ್ತಿ ಸಂಪಾದನೆ ಮಾಡಿರುವ ಆರೋಪವೂ ಕೇಳಿ ಬಂದಿದೆ.

ರಾಜ್ಯ ಸರ್ಕಾರ ಕೇವಲ 16 ಕೋಟಿ ಆಸ್ತಿಯನ್ನು ಮಾತ್ರ ಜಪ್ತಿ ಮಾಡಿತ್ತು. ಉಳಿದ ಹಣ ಅಕ್ರಮವಾಗಿ ಹೂಡಿಕೆ ಮಾಡಿರುವ ಆರೋಪ ಹಿನ್ನೆಲೆ, ಇಡಿ ಅಧಿಕಾರಿಗಳು ರೋಷನ್ ಬೇಗ್ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Sat, 29 October 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು