AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಕ್ಕೆ ತೆರಳಲು ಮಾಜಿ ಸಚಿವ ರೋಷನ್ ಬೇಗ್‌ಗೆ ಷರತ್ತುಬದ್ಧ ಅನುಮತಿ ನೀಡಿದ ಕೋರ್ಟ್

ಐಎಂಎ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರೋಷನ್ ಬೇಗ್‌ ಅವರಿಗೆ ವಿದೇಶಕ್ಕೆ ತೆರಳಲು ವಿಶೇಷ ನ್ಯಾಯಾಲಯ ಎಚ್ಚರಿಕೆಯೊಂದಿಗೆ ಅನುಮತಿ ಕೊಟ್ಟಿದೆ.

ವಿದೇಶಕ್ಕೆ ತೆರಳಲು ಮಾಜಿ ಸಚಿವ ರೋಷನ್ ಬೇಗ್‌ಗೆ ಷರತ್ತುಬದ್ಧ ಅನುಮತಿ ನೀಡಿದ ಕೋರ್ಟ್
Roshan Baig
TV9 Web
| Edited By: |

Updated on:Oct 29, 2022 | 5:19 PM

Share

ಬೆಂಗಳೂರು: ಐಎಂಎ ಸಂಸ್ಥೆಯಿಂದ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ (IMA Case) ಸಿಲುಕೊಂಡಿರುವ ಮಾಜಿ ಸಚಿವ ರೋಷನ್ ಬೇಗ್‌ಗೆ (Roshan Baig) ವಿದೇಶಕ್ಕೆ ತೆರಳಲು ವಿಶೇಷ ಕೋರ್ಟ್ ಅನುಮತಿ ನೀಡಿದೆ. ನವೆಂಬರ್‌ 15ರಿಂದ 15 ದಿನಗಳ ವರೆಗೆ ಇರಾನ್‌ನ ಮಶಾದ್‌ಗೆ ತೆರಳಲು ನ್ಯಾಯಾಲಯ ಷರತ್ತುಬದ್ಧ ಅನುಮತಿ ಕೊಟ್ಟಿದೆ.

ಐಎಂಎ ಸಂಸ್ಥೆಯಿಂದ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕೋರ್ಟ್​ನಿಂದ ರೋಷನ್​ ಬೇಗ್ ಜಾಮೀನು ಪಡೆದುಕೊಂಡಿದ್ದರು. ​ ಆ ವೇಳೆ ಅನುಮತಿ ಇಲ್ಲದೇ ವಿದೇಶಕ್ಕೆ ಹೋಗದಂತೆ ಕೋರ್ಟ್ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರೋಷನ್ ಬೇಗ್ ಅವರು ಇರಾನ್‌ನ ಮಶಾದ್‌ಗೆ ತೆರಳಲು ಅನುಮತಿ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದರು. ರೋಷನ್ ಬೇಗ್ ಮನವಿ ಪುರಸ್ಕರಿಸಿರುವ ವಿಶೇಷ ನ್ಯಾಯಾಲಯ ನವೆಂಬರ್‌ 15ರಿಂದ 15 ದಿನಗಳ ಪ್ರವಾಸಕ್ಕೆ ತೆರಳಲು ಅನುಮತಿ ಕೊಟ್ಟಿದೆ.

ವಿಮಾನ ಬೋರ್ಡಿಂಗ್ ಪಾಸ್ ಹಾಜರುಪಡಿಸಬೇಕು. ಮೊಬೈಲ್ ಸಂಖ್ಯೆ, ಪ್ರಯಾಣದ ವಿವರ ಸಲ್ಲಿಸಬೇಕು. ಹಿಂತಿರುಗಿದ ಬಳಿಕ ಪಾಸ್ ಪೋರ್ಟ್ ಮರಳಿಸಲು ಸೂಚನೆ ನೀಡಿದೆ. ಒಂದು ವೇಳೆ ಷರತ್ತು ಉಲ್ಲಂಘಿಸಿದರೆ ಜಾಮೀನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿ ಜನಪ್ರತಿನಿಧಿಗಳ ಕೋರ್ಟ್‌ನ ನ್ಯಾ.ಬಿ.ಜಯಂತ ಕುಮಾರ್ ಆದೇಶ ಹೊರಡಿಸಿದ್ದಾರೆ.

400 ಕೋಟಿ ರೂ. ಪಡೆದಿದ್ದ ಆರೋಪ

ರೋಷನ್ ಬೇಗ್ ಐಎಂಎ ಕಂಪನಿಯಿಂದ ಸುಮಾರು 400 ಕೋಟಿ  ರೂಪಾಯಿ ಪಡೆದಿದ್ದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಿಬಿಐ ಅಧಿಕಾರಿಗಳೂ ಸಹ ತನಿಖೆ ನಡೆಸಿದ್ದರು. ಅಕ್ರಮ‌ ಹಣದಿಂದ ಕುಟುಂಬಸ್ಥರ ಹೆಸರಲ್ಲಿ ಆಸ್ತಿ ಸಂಪಾದನೆ ಮಾಡಿರುವ ಆರೋಪವೂ ಕೇಳಿ ಬಂದಿದೆ.

ರಾಜ್ಯ ಸರ್ಕಾರ ಕೇವಲ 16 ಕೋಟಿ ಆಸ್ತಿಯನ್ನು ಮಾತ್ರ ಜಪ್ತಿ ಮಾಡಿತ್ತು. ಉಳಿದ ಹಣ ಅಕ್ರಮವಾಗಿ ಹೂಡಿಕೆ ಮಾಡಿರುವ ಆರೋಪ ಹಿನ್ನೆಲೆ, ಇಡಿ ಅಧಿಕಾರಿಗಳು ರೋಷನ್ ಬೇಗ್ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Sat, 29 October 22

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ