AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ಸಿಂಗ್ ಕ್ಷೇತ್ರದಲ್ಲಿ ಅಗಾದ ಸೇವೆ: ಡಾ ಟಿ ದಿಲೀಪ್‌ಕುಮಾರ್​​ಗೆ ‘ಶ್ರೀನಗರೀಂದ್ರ ಪ್ರಶಸ್ತಿ’

ನರ್ಸಿಂಗ್ ವೈದ್ಯಕೀಯ‌ ಕ್ಷೇತ್ರದಲ್ಲಿ ಅಗಾದವಾದ ಸೇವೆ ಸಲ್ಲಿಸಿ ಅನುಪಮ ಸೇವೆಗೆ ಮೀಸಲಿರುವ ‘ಶ್ರೀನಗರೀಂದ್ರ ಅಂತರರಾಷ್ಟ್ರೀಯ ಪುರಸ್ಕಾರ’ಕ್ಕೆ ಇಂಡಿಯನ್‌ ನರ್ಸಿಂಗ್‌ ಕೌನ್ಸಿಲ್‌ ಅಧ್ಯಕ್ಷ ಡಾ.ಟಿ.ದಿಲೀಪ್‌ಕುಮಾರ್​ ಅವರು ಭಾಜನರಾಗಿದ್ದಾರೆ. ನಾಗರಿಕ ಅಭಿನಂದನಾ ಸಮಿತಿಯಿಂದ ಹಾಗೂ ತರಬೇತಿ ನರ್ಸಿಂಗ್ ಆಪ್ ಇಂಡಿಯಾ ಕರ್ನಾಟಕ ಸಂಸ್ಥೆಯಿಂದ ಖಾಸಗಿ ಹೋಟೆಲ್​ನಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಿಡಿಸಲಾಗಿತ್ತು.

ನರ್ಸಿಂಗ್ ಕ್ಷೇತ್ರದಲ್ಲಿ ಅಗಾದ ಸೇವೆ: ಡಾ ಟಿ ದಿಲೀಪ್‌ಕುಮಾರ್​​ಗೆ ‘ಶ್ರೀನಗರೀಂದ್ರ ಪ್ರಶಸ್ತಿ’
ಡಾ.ಟಿ.ದಿಲೀಪ್‌ಕುಮಾರ್‌
ವಿನಯ್​ ಕಾಶಪ್ಪನವರ್​
| Edited By: |

Updated on: Feb 24, 2024 | 7:21 PM

Share

ಬೆಂಗಳೂರು, ಫೆಬ್ರವರಿ 24: ನರ್ಸಿಂಗ್ ಕ್ಷೇತ್ರದಲ್ಲಿ ಅಗಾದವಾದ ಸೇವೆ ಸಲ್ಲಿಸಿ ಅನುಪಮ ಸೇವೆಗೆ ಮೀಸಲಿರುವ ‘ಶ್ರೀನಗರೀಂದ್ರ ಅಂತರರಾಷ್ಟ್ರೀಯ ಪುರಸ್ಕಾರ’ಕ್ಕೆ ಇಂಡಿಯನ್‌ ನರ್ಸಿಂಗ್‌ ಕೌನ್ಸಿಲ್‌ ಅಧ್ಯಕ್ಷ ಡಾ.ಟಿ.ದಿಲೀಪ್‌ಕುಮಾರ್ (Dr T DilipKumar) ಅವರು ಭಾಜನರಾಗಿದ್ದಾರೆ. ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ಕಳೆದ ವರ್ಷದ ನಡೆದ ಸಮಾರಂಭದಲ್ಲಿ ರಾಣಿ ಮಹಾ ಚಕ್ರಿ ಸಿರಿಂದೋರ್ನ್‌ 2023ನೇ ಸಾಲಿನ ಪುರಸ್ಕಾರವನ್ನು ಡಾ ದಿಲೀಪ್‌ಕುಮಾರ್‌ ಅವರಿಗೆ ಪ್ರದಾನ ಮಾಡಿದ್ದಾರೆ. ನರ್ಸಿಂಗ್ ಕ್ಷೇತ್ರದ ಸಾಧನೆ ಹಾಗೂ ಸಿಕ್ಕ ಗೌರವ ಪ್ರಶಸ್ತಿ ಹಿನ್ನೆಲೆ ಡಾ. ದಿಲೀಪ್ ಕುಮಾರ್ ನಾಗರಿಕ ಅಭಿನಂದನಾ ಸಮಿತಿಯಿಂದ ಹಾಗೂ ತರಬೇತಿ ನರ್ಸಿಂಗ್ ಆಪ್ ಇಂಡಿಯಾ ಕರ್ನಾಟಕ ಸಂಸ್ಥೆಯಿಂದ ಖಾಸಗಿ ಹೋಟೆಲ್​ನಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಿಡಿಸಲಾಗಿತ್ತು.

ದಿಲೀಪ್‌ಕುಮಾರ್‌ ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗ್ರಾಮದವರು. ನರ್ಸಿಂಗ್‌ ಶಿಕ್ಷಣ ಪಡೆದ ಚಿತ್ರದುರ್ಗ, ಬೆಂಗಳೂರು, ಬಳ್ಳಾರಿ ಸೇರಿ ರಾಜ್ಯದ ಹಲವೆಡೆ ಸೇವೆ ಸಲ್ಲಿಸಿದ್ದಾರೆ. ಕೇಂದ್ರೀಯ ಲೋಕಸೇವಾ ಆಯೋಗ ನಡೆಸಿದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ನರ್ಸಿಂಗ್‌ ಉಪ ಸಲಗೆಗಾರರಾಗಿ ದೆಹಲಿಯಲ್ಲಿ ಸೇವೆಗೆ ಸೇರಿದ್ದಾರೆ. ಕೆಲ ವರ್ಷಗಳಿಂದ ಇಂಡಿಯನ್‌ ನರ್ಸಿಂಗ್ ಕೌನ್ಸಿಲ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

ನರ್ಸಿಂಗ್ ಲೋಕದಲ್ಲಿ ಸಾಕಷ್ಟು ಬದಲಾವಣೆ ಅವಶ್ಯಕತೆ ಇದೆ: ಡಾ.ಟಿ.ದಿಲೀಪ್‌ಕುಮಾರ್

ನರ್ಸಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧ್ಯನೆ, ಬದ್ಧತೆ ಮತ್ತು ತಮ್ಮನ್ನು ತಾವು ಶುಶ್ರೂಷೆಗೆ ಕೆಲಸಕ್ಕೆ ಅಪರ್ಣೆ ಮಾಡಿಕೊಂಡು ಕಳೆದ 49 ವರ್ಷಗಳಿಂದ ಭಾರತೀಯ ನರ್ಸಿಂಗ್ ಕೌನ್ಸಿಲ್‌ನಲ್ಲಿ ಸೇವೆ ಸಲ್ಲಿಸಿರುವ ದಿಲೀಪ್ ಕುಮಾರ್ ಮಾತನಾಡಿದ್ದು, ಸಿಕ್ಕ ಗೌರವ ಹಾಗೂ ಪ್ರಶಸ್ತಿಯ ಅಭಿನಂಧನೆಗೆ ಸಂತಸ ವ್ಯಕ್ತಪಡಿಸಿದರು. ಈ ವೇಳೆ ನರ್ಸಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಅಭಿವೃದ್ಧಿಯ ಅವಶ್ಯಕತೆ ಇದೆ. ಜೊತೆಗೆ ನರ್ಸಿಂಗ್ ಸಿಬ್ಬಂದಿಗಳಿಲ್ಲದೆ ಆಸ್ಪತ್ರೆಗಳೆ ಇರಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿಯಲ್ಲಿ ಕ್ಯೂಆರ್‌ ಕೋಡ್‌ ಸೌಲಭ್ಯ; ಡಿಜಿಟಲ್ ಪೇಮೆಂಟ್​ಗೆ ಭರ್ಜರಿ ರೆಸ್ಪಾನ್ಸ್

ಕಾರ್ಯಕ್ರಮದಲ್ಲಿ ರಾಜೀವ ಗಾಂಧೀ ಆರೋಗ್ಯ ವಿವಿ ಕುಲಪತಿ ರಮೇಶ್ ಕುಮಾರ್, ಭಾರತೀಯ ಹೋಮಿಯೋಪತಿ ಕೌನ್ಸಿಲ್ ಅಧ್ಯಕ್ಷ ರುದ್ರಮೂರ್ತಿ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು. ಡಾ. ದಿಲೀಪ್ ಕುಮಾರ್ ಸಾಧನೆ ಬಗ್ಗೆ ಸಾಕಷ್ಟು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಕಳೆದ 50 ವರ್ಷಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ ಡಾ. ದಿಲೀಪ್ ಕುಮಾರ್ ಸಲ್ಲಿಸಿರುವ ಸೇವೆಗೆ ಎಲ್ಲಡೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ