AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಕಾರ್ಯಾಲಯದಲ್ಲಿ ಬೆಂಗಳೂರು ಆಡಳಿತಕ್ಕೆ ಸಂಬಂಧಿಸಿದ ಮಹತ್ವದ ಕಡತ ನಾಪತ್ತೆ: ಮಹತ್ವದ ದಾಖಲೆ ಕಳೆದದ್ದು ಹೇಗೆಂಬ ಪ್ರಶ್ನೆಗೆ ಸಿಕ್ಕಿಲ್ಲ ಉತ್ತರ

ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದು, ‘ಒಂದು ವರ್ಷದಿಂದ ಫೈಲ್ ಬಂದಿಲ್ಲ’ ಎಂದು ಹೇಳಿದ್ದರು.

ಸಿಎಂ ಕಾರ್ಯಾಲಯದಲ್ಲಿ ಬೆಂಗಳೂರು ಆಡಳಿತಕ್ಕೆ ಸಂಬಂಧಿಸಿದ ಮಹತ್ವದ ಕಡತ ನಾಪತ್ತೆ: ಮಹತ್ವದ ದಾಖಲೆ ಕಳೆದದ್ದು ಹೇಗೆಂಬ ಪ್ರಶ್ನೆಗೆ ಸಿಕ್ಕಿಲ್ಲ ಉತ್ತರ
ಸಿಎಂ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Nov 25, 2022 | 2:42 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯಾಲಯದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಸಂಬಂಧಿಸಿದ ಮಹತ್ವದ ಕಡತ ನಾಪತ್ತೆಯಾಗಿದೆ. ರಾಜ್ಯ ಅಡಳಿತದ ಶಕ್ತಿಕೇಂದ್ರದಲ್ಲಿಯೇ ಮಹತ್ವದ ಕಡತವೊಂದು ನಾಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದು, ‘ಒಂದು ವರ್ಷದಿಂದ ಫೈಲ್ ಬಂದಿಲ್ಲ’ ಎಂದು ಹೇಳಿದ್ದರು.

ಸಿಎಂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಅವರಿಗೆ ಈ ಸಂಬಂಧ ಪತ್ರ ಕಳಿಸಿದ್ದಾರೆ. ಬಿಬಿಎಂಪಿ ಜಾಹೀರಾತು ನಿಯಮಗಳನ್ನು ಕುರಿತ ಕಡತವನ್ನು ಸಿಎಂ ಮಾಹಿತಿಗಾಗಿ ಕಳಿಸಲಾಗಿತ್ತು. ಆದರೆ ಫೈಲ್ ನಮ್ಮ ಕಚೇರಿಗೆ ಹಿಂದಿರುಗಿಸಿಲ್ಲ ಎಂದು ಹೇಳಿದ್ದಾರೆ. ನಗರಾಭಿವೃದ್ಧಿ ಇಲಾಖೆಯ ಕಡತವನ್ನೂ ಇನ್ನೂ ಹಿಂದಿರುಗಿಸಿಲ್ಲ ಎಂದು ಸಿಎಂ ಕಚೇರಿ ಅಧಿಕಾರಿಗಳಿಗೆ ಪತ್ರ ಬರೆದು ನೆನಪಿಸಲಾಗಿದೆ.

2021ರ ಡಿಸೆಂಬರ್ 7ರಂದು ಸಿಎಂ ಕಚೇರಿಗೆ ಕಳುಹಿಸಿದ್ದ ಕಡತ ರವಾನಿಸಲಾಗಿತ್ತು. ಇದರಲ್ಲಿ ಬಿಬಿಎಂಪಿ ‘ಜಾಹೀರಾತು ನೀತಿ-2019’ಕ್ಕೆ ಸಂಬಂಧಿಸಿದ ಮಾಹಿತಿ ಇತ್ತು. ಲೆಕ್ಕಪತ್ರ ಸಮಿತಿಗೆ ಸಲ್ಲಿಕೆಯಾಗಬೇಕಿರುವ ಮಹತ್ವದ ಕಡತ ನಾಪತ್ತೆಯಾಗಿರುವುದರಿಂದ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಕಡತ ಮರಳಿಸುವಂತೆ ಕೋರಿದ್ದಾರೆ.

ಈ ಕಡತದ ಮಹತ್ವವೇನು?

ಈ ಕಡತದಲ್ಲಿ ಬೆಂಗಳೂರಿನಲ್ಲಿ ಜಾಹೀರಾತು ನಿಯಮ ಜಾರಿಗೊಳಿಸುವ ಬಗ್ಗೆ ಮಹತ್ವದ ಮಾಹಿತಿಯಿತ್ತು. ಎಲ್ಲೆಲ್ಲಿ ಜಾಹೀರಾತು ಹಾಕಬೇಕು? ಎಲ್ಲಿ ಹಾಕಬಾರದು? ಎಷ್ಟು ದರ ನಿಗದಿಪಡಿಸಬಹುದು ಎಂಬ ಬಗ್ಗೆ ಈ ಕಡತದಲ್ಲಿ ಮಾಹಿತಿಯಿತ್ತು. ಈ ಕಡತವು ಸಕಾಲಕ್ಕೆ ಮರಳಿ ಬಂದಿದ್ದರೆ ಜಾಹೀರಾತು ನಿಯಮಗಳು ನಗರದಲ್ಲಿ ಜಾರಿಯಾಗುತ್ತಿದ್ದವು ಎಂದು ಮೂಲಗಳು ಹೇಳಿವೆ.

File-Missing

ಕಡತ ನಾಪತ್ತೆ ಕುರಿತು ಸಿಎಂ ಕಚೇರಿಗೆ ಬರೆದಿರುವ ಪತ್ರ

Published On - 2:42 pm, Fri, 25 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ