AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi Scheme: ನೋಂದಣಿ ಮಾಡಿಸದಿದ್ದರೆ ಉಚಿತ ವಿದ್ಯುತ್ ಸಿಗಲ್ಲ, ಇಂಧನ ಇಲಾಖೆಯಿಂದ ಮಹತ್ವದ ಸೂಚನೆ

ಜುಲೈ 25 ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ ಜುಲೈ ತಿಂಗಳಿಗೆ ಉಚಿತ ವಿದ್ಯುತ್ ಪಡೆಯಲು ಸಾಧ್ಯವಾಗುತ್ತದೆ ಎಂದು ಇಂಧನ ಇಲಾಖೆ ಸೂಚನೆ ನೀಡಿದೆ.

Gruha Jyothi Scheme: ನೋಂದಣಿ ಮಾಡಿಸದಿದ್ದರೆ ಉಚಿತ ವಿದ್ಯುತ್ ಸಿಗಲ್ಲ, ಇಂಧನ ಇಲಾಖೆಯಿಂದ ಮಹತ್ವದ ಸೂಚನೆ
ಉಚಿತ ವಿದ್ಯುತ್
TV9 Web
| Edited By: ಆಯೇಷಾ ಬಾನು|

Updated on: Jul 02, 2023 | 12:26 PM

Share

ಬೆಂಗಳೂರು: ಜುಲೈ 01ರಿಂದ ಗೃಹಜ್ಯೋತಿ ಯೋಜನೆ(Gruha Jyothi Scheme) ಅಧಿಕೃತವಾಗಿ ಆರಂಭವಾಗಿದೆ. ಈ ನಿಟ್ಟಿನಲ್ಲಿ ಜುಲೈ 25 ರೊಳಗೆ ಅರ್ಜಿ ಸಲ್ಲಿಸಲು ಇಂಧನ‌ ಇಲಾಖೆ ಸೂಚನೆ ನೀಡಿದೆ. ಗೃಹಜ್ಯೋತಿಗೆ ಅರ್ಜಿ ಹಾಕುವುದು ತಡವಾದ್ರೆ 200 ಯುನಿಟ್ ಉಚಿತ ವಿದ್ಯುತ್ ಸಿಗುವುದಿಲ್ಲ. ಜುಲೈ 25 ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ ಜುಲೈ ತಿಂಗಳಿಗೆ ಉಚಿತ ವಿದ್ಯುತ್ ಪಡೆಯಲು ಸಾಧ್ಯವಾಗುತ್ತದೆ ಎಂದು ಇಂಧನ ಇಲಾಖೆ ಸೂಚನೆ ನೀಡಿದೆ.

ಕಾಂಗ್ರೆಸ್​ ಸರ್ಕಾರದ ಮಹತ್ವದ ಸ್ಕೀಮ್ ಆದಾ ಗೃಹಜ್ಯೋತಿ ಸ್ಕೀಮ್ ಗೆ ಅರ್ಜಿ ಸಲ್ಲಿಕೆ ಬರದಿಂದ ಸಾಗುತ್ತಿದೆ.‌ ಮತ್ತೊಂದೆಡೆ ಗೃಹಜ್ಯೋತಿ 200 ಯುನಿಟ್ ಕೌಂಟಿಂಗ್ ಜುಲೈ 01ರಿಂದ ಆರಂಭವಾಗಿದೆ. ಗೃಹಜ್ಯೋತಿಗೆ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಉಚಿತ ವಿದ್ಯುತ್ ಸಿಗಲಿದೆ.‌ ಜುಲೈ ತಿಂಗಳ ಬಿಲ್‌ ಬರುವ ಮುನ್ನ ಅರ್ಜಿ ಸಲ್ಲಿಸಬೇಕು.‌ ಇಲ್ಲದಿದ್ರೆ ಕರೆಂಟ್‌ಗೆ ಬಿಲ್ ಹಣವನ್ನ ಕಟ್ಟಲೇಬೇಕಾಗುತ್ತದೆ.

ಇದನ್ನೂ ಓದಿ: Gruha jyothi scheme: ಸಿದ್ದರಾಮಯ್ಯ ಸರ್ಕಾರದ ಉಚಿತ ವಿದ್ಯುತ್ ಬಿಲ್ ಲೆಕ್ಕಾಚಾರ ಹೇಗಿರುತ್ತೆ?

ಗೃಹಜ್ಯೋತಿಗೆ ಅರ್ಜಿ ಹಾಕುವುದು ತಡವಾದ್ರೆ 200 ಯುನಿಟ್ ಉಚಿತ ವಿದ್ಯುತ್ ಸಿಗುವುದಿಲ್ಲ. ಜುಲೈ 25 ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ ಜುಲೈ ತಿಂಗಳಿಗೆ ಉಚಿತ ವಿದ್ಯುತ್ ಪಡೆಯಲು ಸಾಧ್ಯವಾಗುತ್ತದೆ. ಅದೇ ರೀತಿ ಆಗಸ್ಟ್ 25 ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ, ಆ ತಿಂಗಳಿಗೆ ಮಾಸಿಕ ಬಳಕೆಯು ಸರಾಸರಿ 200 ಯೂನಿಟ್‌ಗಳಿಗಿಂತ ಕಡಿಮೆಯಿದ್ದಲ್ಲಿ ವಿದ್ಯುತ್ ಉಚಿತವಾಗಿ ಪಡೆಯಬಹುದು. ಮೀಟರ್ ರೀಡಿಂಗ್ ಪ್ರತಿ ತಿಂಗಳ 25ನೇ ತಾರೀಖಿನಿಂದ ಮುಂದಿನ ತಿಂಗಳ 25ನೇ ತಾರೀಖಿನವರೆಗೆ ನಡೆಯುತ್ತದೆ. ಹೀಗಾಗಿ ಗೃಹಜ್ಯೋತಿ 25 ರೊಳಗೆ ಅರ್ಜಿ ಸಲ್ಲಿಸಲು ಇಂಧನ‌ ಇಲಾಖೆ ಸೂಚನೆ ನೀಡಿದೆ.

ಸರ್ಕಾರದ ನಿಗಧಿ ಮಾಡಿರುವ 200 ಯುನಿಟ್​ನಲ್ಲಿ 187 ಯುನಿಟ್ ವರೆಗೂ ಫ್ರೀ ಇರಲಿದೆ.‌ ಇದರ ಜೊತೆಗೆ ಸರಾಸರಿ ಆದಾರದ ಮೇಲೆ 10 % ವಿದ್ಯುತ್ ಬಳಕೆಗೆ ಅವಕಾಶ ಇದೆ.‌ ಆದ್ರೆ ಸರಾಸರಿಯನ್ನ ಮೀರಿ 200 ಯುನಿಟ್ ಮೇಲೆ ಒಂದೇ ಒಂದು ಯುನಿಟ್ ಜಾಸ್ತಿ‌ ಬಳಕೆ ಮಾಡಿದ್ರೆ, ಹೆಚ್ಚುವರಿ ಬಳಸಿದ ವಿದ್ಯುತ್‌ಗೆ ಬಿಲ್‌ ಪಾವತಿಸಬೇಕಾಗುತ್ತದೆ.‌ ಗೃಹಜ್ಯೋತಿಗೆ ಬೆಂಗಳೂರು ಒನ್ , ಕರ್ನಾಟಕ ಒನ್ , ಗ್ರಾಮ‌ಒನ್ ಗಳಲ್ಲಿ ಅರ್ಜಿ ನೋಂದಣಿ ಮಾಡಲಾಗುತ್ತಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್