AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi Scheme: ನೋಂದಣಿ ಮಾಡಿಸದಿದ್ದರೆ ಉಚಿತ ವಿದ್ಯುತ್ ಸಿಗಲ್ಲ, ಇಂಧನ ಇಲಾಖೆಯಿಂದ ಮಹತ್ವದ ಸೂಚನೆ

ಜುಲೈ 25 ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ ಜುಲೈ ತಿಂಗಳಿಗೆ ಉಚಿತ ವಿದ್ಯುತ್ ಪಡೆಯಲು ಸಾಧ್ಯವಾಗುತ್ತದೆ ಎಂದು ಇಂಧನ ಇಲಾಖೆ ಸೂಚನೆ ನೀಡಿದೆ.

Gruha Jyothi Scheme: ನೋಂದಣಿ ಮಾಡಿಸದಿದ್ದರೆ ಉಚಿತ ವಿದ್ಯುತ್ ಸಿಗಲ್ಲ, ಇಂಧನ ಇಲಾಖೆಯಿಂದ ಮಹತ್ವದ ಸೂಚನೆ
ಉಚಿತ ವಿದ್ಯುತ್
TV9 Web
| Edited By: |

Updated on: Jul 02, 2023 | 12:26 PM

Share

ಬೆಂಗಳೂರು: ಜುಲೈ 01ರಿಂದ ಗೃಹಜ್ಯೋತಿ ಯೋಜನೆ(Gruha Jyothi Scheme) ಅಧಿಕೃತವಾಗಿ ಆರಂಭವಾಗಿದೆ. ಈ ನಿಟ್ಟಿನಲ್ಲಿ ಜುಲೈ 25 ರೊಳಗೆ ಅರ್ಜಿ ಸಲ್ಲಿಸಲು ಇಂಧನ‌ ಇಲಾಖೆ ಸೂಚನೆ ನೀಡಿದೆ. ಗೃಹಜ್ಯೋತಿಗೆ ಅರ್ಜಿ ಹಾಕುವುದು ತಡವಾದ್ರೆ 200 ಯುನಿಟ್ ಉಚಿತ ವಿದ್ಯುತ್ ಸಿಗುವುದಿಲ್ಲ. ಜುಲೈ 25 ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ ಜುಲೈ ತಿಂಗಳಿಗೆ ಉಚಿತ ವಿದ್ಯುತ್ ಪಡೆಯಲು ಸಾಧ್ಯವಾಗುತ್ತದೆ ಎಂದು ಇಂಧನ ಇಲಾಖೆ ಸೂಚನೆ ನೀಡಿದೆ.

ಕಾಂಗ್ರೆಸ್​ ಸರ್ಕಾರದ ಮಹತ್ವದ ಸ್ಕೀಮ್ ಆದಾ ಗೃಹಜ್ಯೋತಿ ಸ್ಕೀಮ್ ಗೆ ಅರ್ಜಿ ಸಲ್ಲಿಕೆ ಬರದಿಂದ ಸಾಗುತ್ತಿದೆ.‌ ಮತ್ತೊಂದೆಡೆ ಗೃಹಜ್ಯೋತಿ 200 ಯುನಿಟ್ ಕೌಂಟಿಂಗ್ ಜುಲೈ 01ರಿಂದ ಆರಂಭವಾಗಿದೆ. ಗೃಹಜ್ಯೋತಿಗೆ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಉಚಿತ ವಿದ್ಯುತ್ ಸಿಗಲಿದೆ.‌ ಜುಲೈ ತಿಂಗಳ ಬಿಲ್‌ ಬರುವ ಮುನ್ನ ಅರ್ಜಿ ಸಲ್ಲಿಸಬೇಕು.‌ ಇಲ್ಲದಿದ್ರೆ ಕರೆಂಟ್‌ಗೆ ಬಿಲ್ ಹಣವನ್ನ ಕಟ್ಟಲೇಬೇಕಾಗುತ್ತದೆ.

ಇದನ್ನೂ ಓದಿ: Gruha jyothi scheme: ಸಿದ್ದರಾಮಯ್ಯ ಸರ್ಕಾರದ ಉಚಿತ ವಿದ್ಯುತ್ ಬಿಲ್ ಲೆಕ್ಕಾಚಾರ ಹೇಗಿರುತ್ತೆ?

ಗೃಹಜ್ಯೋತಿಗೆ ಅರ್ಜಿ ಹಾಕುವುದು ತಡವಾದ್ರೆ 200 ಯುನಿಟ್ ಉಚಿತ ವಿದ್ಯುತ್ ಸಿಗುವುದಿಲ್ಲ. ಜುಲೈ 25 ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ ಜುಲೈ ತಿಂಗಳಿಗೆ ಉಚಿತ ವಿದ್ಯುತ್ ಪಡೆಯಲು ಸಾಧ್ಯವಾಗುತ್ತದೆ. ಅದೇ ರೀತಿ ಆಗಸ್ಟ್ 25 ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ, ಆ ತಿಂಗಳಿಗೆ ಮಾಸಿಕ ಬಳಕೆಯು ಸರಾಸರಿ 200 ಯೂನಿಟ್‌ಗಳಿಗಿಂತ ಕಡಿಮೆಯಿದ್ದಲ್ಲಿ ವಿದ್ಯುತ್ ಉಚಿತವಾಗಿ ಪಡೆಯಬಹುದು. ಮೀಟರ್ ರೀಡಿಂಗ್ ಪ್ರತಿ ತಿಂಗಳ 25ನೇ ತಾರೀಖಿನಿಂದ ಮುಂದಿನ ತಿಂಗಳ 25ನೇ ತಾರೀಖಿನವರೆಗೆ ನಡೆಯುತ್ತದೆ. ಹೀಗಾಗಿ ಗೃಹಜ್ಯೋತಿ 25 ರೊಳಗೆ ಅರ್ಜಿ ಸಲ್ಲಿಸಲು ಇಂಧನ‌ ಇಲಾಖೆ ಸೂಚನೆ ನೀಡಿದೆ.

ಸರ್ಕಾರದ ನಿಗಧಿ ಮಾಡಿರುವ 200 ಯುನಿಟ್​ನಲ್ಲಿ 187 ಯುನಿಟ್ ವರೆಗೂ ಫ್ರೀ ಇರಲಿದೆ.‌ ಇದರ ಜೊತೆಗೆ ಸರಾಸರಿ ಆದಾರದ ಮೇಲೆ 10 % ವಿದ್ಯುತ್ ಬಳಕೆಗೆ ಅವಕಾಶ ಇದೆ.‌ ಆದ್ರೆ ಸರಾಸರಿಯನ್ನ ಮೀರಿ 200 ಯುನಿಟ್ ಮೇಲೆ ಒಂದೇ ಒಂದು ಯುನಿಟ್ ಜಾಸ್ತಿ‌ ಬಳಕೆ ಮಾಡಿದ್ರೆ, ಹೆಚ್ಚುವರಿ ಬಳಸಿದ ವಿದ್ಯುತ್‌ಗೆ ಬಿಲ್‌ ಪಾವತಿಸಬೇಕಾಗುತ್ತದೆ.‌ ಗೃಹಜ್ಯೋತಿಗೆ ಬೆಂಗಳೂರು ಒನ್ , ಕರ್ನಾಟಕ ಒನ್ , ಗ್ರಾಮ‌ಒನ್ ಗಳಲ್ಲಿ ಅರ್ಜಿ ನೋಂದಣಿ ಮಾಡಲಾಗುತ್ತಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ