AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 2021ರಲ್ಲಿ ರಸ್ತೆ ಗುಂಡಿಗಳಿಗೆ ಬಲಿಯಾದ ಜೀವಗಳೆಷ್ಟು ಗೊತ್ತಾ? ಹೈಕೋರ್ಟ್ ಬಿಬಿಎಂಪಿಗೆ ಕೊಟ್ಟ ಸೂಚನೆ ಇಲ್ಲಿದೆ

ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬಹುತೇಕ ರಸ್ತೆಗಳು ತೀರಾ ಹದಗೆಟ್ಟಿವೆ. ಗುಣಮಟ್ಟವಿಲ್ಲದ ರಸ್ತೆಗಳಿಂದ ಜೀವಹಾನಿಯ ಜೊತೆಗೆ ಆರೋಗ್ಯ ಮತ್ತು ಆರ್ಥಿಕ ನಷ್ಟಗಳು ಸಂಭವಿಸುತ್ತಿವೆ.

ಬೆಂಗಳೂರು: 2021ರಲ್ಲಿ ರಸ್ತೆ ಗುಂಡಿಗಳಿಗೆ ಬಲಿಯಾದ ಜೀವಗಳೆಷ್ಟು ಗೊತ್ತಾ? ಹೈಕೋರ್ಟ್ ಬಿಬಿಎಂಪಿಗೆ ಕೊಟ್ಟ ಸೂಚನೆ ಇಲ್ಲಿದೆ
ರಸ್ತೆ ಗುಂಡಿಗಳು (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Feb 07, 2022 | 12:52 PM

Share

ಬೆಂಗಳೂರು: ಕಳೆದ ವರ್ಷ ಡಿಸೆಂಬರ್ ಅಂತ್ಯದವರೆಗೂ ಬೆಂಗಳೂರಿನಲ್ಲಿ ಸುರಿದ ಮಳೆಯಿಂದ (Rain) ರಸ್ತೆ ಗುಂಡಿಗಳ (Pothole) ಸಂಖ್ಯೆ ಹೆಚ್ಚಳವಾಗಿದ್ದು, ನಗರದಲ್ಲಿ ರಸ್ತೆ ಗುಂಡಿಗಳಿಂದ ಜೀವ ಬಲಿಯಾಗುತ್ತಿದೆ. ರಸ್ತೆ ಗುಂಡಿಗಳಿಂದ ಏಳು ಮಂದಿ ದ್ವಿಚಕ್ರ ವಾಹನ ಸವಾರರು ಪ್ರಾಣ ಕಳೆದುಕೊಂಡಿದ್ದಾರೆ. 2020ಕ್ಕೆ ಹೋಲಿಕೆ ಮಾಡಿದರೆ 2021ರಲ್ಲಿ ರಸ್ತೆ ಗುಂಡಿಗೆ ಬಲಿಯಾದವರ ಸಂಖ್ಯೆ ದ್ವಿಗುಣವಾಗಿದೆ. 2020 ರಲ್ಲಿ 3 ಜನರ ಪ್ರಾಣ ಹೋಗಿತ್ತು. ಆದರೆ 2021ರಲ್ಲಿ 7 ಜನರ ಉಸಿರು ನಿಲ್ಲಿಸಿದೆ.

ಈ ಬಗ್ಗೆ ಹೈಕೋರ್ಟ್ನಲ್ಲಿ ವಿಚಾರಣೆ ನಡೆದಿದ್ದು, ಬಿಬಿಎಂಪಿಗೆ ಖಡಕ್ ಆದೇಶ ನೀಡಿತ್ತು. ಗುಂಡಿ ಮುಚ್ಚಲು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ವಿವರ ನೀಡುವಂತೆ ಸೂಚನೆಯನ್ನೂ ನೀಡಿತ್ತು. ಬೆಂಗಳೂರಿನಲ್ಲಿರುವ ಗುಂಡಿಗಳನ್ನು ಮುಚ್ಚಲು ಏನು ಕ್ರಮ ತೆಗೆದುಕೊಂಡಿದ್ದೀರಿ? ಇದಕ್ಕೆ ಶಾಶ್ವತ ಪರಿಹಾರವಾಗಿ ಉತ್ತಮ ತಂತ್ರಜ್ಞಾನ ಬಳಕೆ ಮಾಡಬಹುದಲ್ಲವೇ ಎಂಬ ಪ್ರಶ್ನೆ ಹೈಕೋರ್ಟ್ ಕೇಳಿತ್ತು. ಆದರೆ ಈ ಪ್ರಶ್ನೆಗೆ ಬಿಬಿಎಂಪಿ ಸಮರ್ಪಕವಾದ ಉತ್ತರವನ್ನೇ ನೀಡಿಲ್ಲ.

ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬಹುತೇಕ ರಸ್ತೆಗಳು ತೀರಾ ಹದಗೆಟ್ಟಿವೆ. ಗುಣಮಟ್ಟವಿಲ್ಲದ ರಸ್ತೆಗಳಿಂದ ಜೀವಹಾನಿಯ ಜೊತೆಗೆ ಆರೋಗ್ಯ ಮತ್ತು ಆರ್ಥಿಕ ನಷ್ಟಗಳು ಸಂಭವಿಸುತ್ತಿವೆ. ಬೆಂಗಳೂರಿನ ಎಂಟು ವಲಯದಲ್ಲಿ ಗುಂಡಿಗಳಿರುವ ರಸ್ತೆಗಳ ಸಂಖ್ಯೆ ಹೀಗಿದೆ.

* ಪೂರ್ವ ವಲಯದಲ್ಲಿ -3,078. * ಪಶ್ಚಿಮ ವಲಯದಲ್ಲಿ -2,295. * ದಕ್ಷಿಣ ವಲಯದಲ್ಲಿ – 931. * ಬೊಮ್ಮನಹಳ್ಳಿ ವಲಯದಲ್ಲಿ -1,025. * ದಾಸರಹಳ್ಳಿ ವಲಯದಲ್ಲಿ – 576. * ಮಹಾದೇವಪುರ ವಲಯದಲ್ಲಿ – 625. * ಆರ್​ಆರ್​ ನಗರ ವಲಯದಲ್ಲಿ – 2,792. * ಯಲಹಂಕ ವಲಯದಲ್ಲಿ – 363.

ಒಟ್ಟು ಎಂಟು ವಲಯಗಳಲ್ಲಿ 11,685 ಗುಂಡಿ ಬಿದ್ದ ರಸ್ತೆಗಳಿವೆ. ಈ ಪೈಕಿ 9,927 ಗುಂಡಿ ಬಿದ್ದ ರಸ್ತೆಗಳ ಮೇಲೆ ಬಿಬಿಎಂಪಿ ಕ್ರಮ ಕೈಗೊಂಡಿದೆ. ಉಳಿದ 1,758 ರಸ್ತೆಗಳಲ್ಲಿ ಗುಂಡಿಗಳನ್ನ ಮುಚ್ಚಬೇಕು.

ಇದನ್ನೂ ಓದಿ

RBI MPC Meet: ಆರ್​ಬಿಐ ಹಣಕಾಸು ಸಮಿತಿ ಸಭೆ ಫೆಬ್ರವರಿ 8ರಿಂದ 10ಕ್ಕೆ ಮರು ನಿಗದಿ

ಉತ್ತರ ಕನ್ನಡ: ನಾಯಿಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವೈರಸ್; ಶ್ವಾನಪ್ರಿಯರು ಕಂಗಾಲು

Published On - 12:48 pm, Mon, 7 February 22

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು