AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಪಿ ಕಾರಿನಲ್ಲಿದ್ದ ಇ-ತಂತ್ರಾಂಶದ ಸಹಿಗೆ ಬಳಸುವ DSC ಕೀ ಕಳ್ಳನ: ದೂರು ದಾಖಲು

ಇತ್ತೀಚೆಗೆ ಕಳ್ಳರ ಹಾವಳಿ ಹೆಚ್ಚಾಗಿದ್ದು, ಅದು ಎಷ್ಟರ ಮಟ್ಟಿಗೆ ಅಂದರೆ, ಪೊಲೀಸರನ್ನು ಬಿಡದ ಮಟ್ಟಕ್ಕೆ ಬಂದು ತಲುಪಿದೆ. ಹೌದು ಡಿಸಿಪಿ ಕಾರಿನಲ್ಲಿದ್ದ ಡಿಎಸ್​ಸಿ(Digital Signature Certicate) ಕೀಯನ್ನೇ ಕಳ್ಳ ಎಗರಿಸಿದ ಘಟನೆ ಉಪ್ಪಾರಪೇಟೆ ಬಳಿ ಇರುವ ಬಿಬಿಎಂಪಿ ಕಚೇರಿ ಬಳಿ ನಡೆದಿದೆ.

ಡಿಸಿಪಿ ಕಾರಿನಲ್ಲಿದ್ದ ಇ-ತಂತ್ರಾಂಶದ ಸಹಿಗೆ ಬಳಸುವ DSC ಕೀ ಕಳ್ಳನ: ದೂರು ದಾಖಲು
ಪ್ರಾತಿನಿಧಿಕ ಚಿತ್ರ
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 28, 2023 | 7:40 AM

Share

ಬೆಂಗಳೂರು: ಇತ್ತೀಚೆಗೆ ಕಳ್ಳರ ಹಾವಳಿ ಹೆಚ್ಚಾಗಿದ್ದು, ಅದು ಎಷ್ಟರ ಮಟ್ಟಿಗೆ ಅಂದರೆ, ಪೊಲೀಸರನ್ನು ಬಿಡದ ಮಟ್ಟಕ್ಕೆ ಬಂದು ತಲುಪಿದೆ. ಹೌದು ಡಿಸಿಪಿ ಕಾರಿನಲ್ಲಿದ್ದ ಡಿಎಸ್​ಸಿ(Digital Signature Certicate) ಕೀಯನ್ನೇ ಕಳ್ಳ ಎಗರಿಸಿದ ಘಟನೆ ಉಪ್ಪಾರಪೇಟೆ ಬಳಿ ಇರುವ ಬಿಬಿಎಂಪಿ ಕಚೇರಿ ಬಳಿ ನಡೆದಿದೆ. ಪಶ್ಚಿಮ ವಿಭಾಗದ ಸಂಚಾರಿ ಡಿಸಿಪಿ ಆಗಿರುವ ಡಾ. ಸುಮನ್ ಪನ್ನೇಕರ್ ಅವರು ಬಿಬಿಎಂಪಿ ಕಚೇರಿ ಬಳಿ ತಮ್ಮ ಕಾರನ್ನು ನಿಲ್ಲಿಸಿ, ಇ- ತಂತ್ರಾಂಶದ ಸಹಿಗೆ ಬಳಸುವ ಡಿಎಸ್​ಸಿ ಕೀಯನ್ನ ಕಾರಿನ ಸೀಟ್ ಮೇಲೆ ಬಿಟ್ಟು, ಕಾರು ಲಾಕ್ ಮಾಡುವುದನ್ನ ಮರೆತು ಕಚೇರಿಗೆ ಹೋಗಿದ್ದಾರೆ. ಈ ವೇಳೆ ಚಾಲಾಕಿ ಕಳ್ಳ ತನ್ನ ಕೈ ಚಳಕ ತೋರಿಸಿದ್ದಾನೆ.

ಪೊಲೀಸ್​ ಠಾಣೆಗೆ ದೂರು

ಈ ಡಿಎಸ್​ಸಿ ಕೀಯನ್ನು ಇ- ತಂತ್ರಾಂಶದ ಸಹಿಗೆ ಬಳಸಲಾಗುತ್ತದೆ. ಇದನ್ನು ಕಾರಿನಲ್ಲಿ ಇಟ್ಟು ಮರೆತು ಬಂದಿರುವುದು ಗೊತ್ತಾಗಿ, ಮತ್ತೆ ಕಾರಿನ ಬಳಿ ಬಂದಾಗ ಕಳ್ಳತನವಾಗಿರುವುದು ಬಯಲಾಗಿದೆ. ಕೂಡಲೇ ಡಿಸಿಪಿ ಡಾ. ಸುಮನ್ ಪನ್ನೇಕರ್ ಅವರು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇಷ್ಟು ದಿನ ಸಾರ್ವಜನಿಕರನ್ನ ಮಾತ್ರ ದೋಚುತ್ತಿದ್ದ ಕಳ್ಳರು ಇದೀಗ ಪೊಲೀಸರನ್ನು ಬಿಡದ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ:Gadag News: ಹಗಲು ಕೆಇಬಿಯಲ್ಲಿ ದಿನಗೂಲಿ ಕೆಲಸ; ರಾತ್ರಿ ರೈತರ ಜಮೀನುಗಳಲ್ಲಿ ವಿದ್ಯುತ್ ತಂತಿ ಕಳ್ಳತನ; ಮೂವರ ಬಂಧನ

ಆದಾಯ ತೆರಿಗೆ ಅಧಿಕಾರಿ ಮನೆಯಲ್ಲಿ ಕಳ್ಳತನ

ಹೌದು ಹೈದರಾಬಾದ್​ನಲ್ಲಿ ನಿವೃತ್ತ ಆದಾಯ ತೆರಿಗೆ ಇಲಾಖೆಯ ಕಮಿಷನರ್ ಸ್ಯಾಮ್ಯುಯೆಲ್ ಎಂಬುವವರು ಮನೆಯಲ್ಲಿ ಕಳ್ಳ ಕೈಚಳಕ ತೋರಿಸಿದ್ದ. ಇನ್ನು ಈ ಕಳ್ಳತನದ ಹಿಂದೆ ಪೊಲೀಸ್ ಅಧಿಕಾರಿಯ ಕೈವಾಡವಿದೆಯೆಂದು ಸ್ವತಃ ಕಳ್ಳ ಹೇಳಿದ್ದ. ಹೌದುನಿವೃತ್ತ ಕಮಿಷನರ್ ಸ್ಯಾಮ್ಯುಯೆಲ್ ಜಮೀನು ಖರೀದಿಸಲು ಮುಂದಾಗಿದ್ದು, ಈ ವೇಳೆ ಸುರೇಂದರ್ ಎಂಬ ವ್ಯಕ್ತಿ ಪರಿಚಯವಾಗಿತ್ತು. ಹಾಗಾಗಿ ಸುರೇಂದರ್ ಆಗಾಗ್ಗೆ ಸ್ಯಾಮ್ಯುಯೆಲ್ ಮನೆಗೆ ಬರುತ್ತಿದ್ದ. ಇತ್ತೀಚೆಗೆ ಮನೆಗೆ ಬಂದಿದ್ದ ಸುರೇಂದರ್ ಟಿಫಿನ್ ಹಾಗೂ ಎಳೆನೀರು ತಂದಿದ್ದ. ಆದರೆ, ಆ ತೆಂಗಿನಕಾಯಿಯ ನೀರಿಗೆ ಮದ್ದು ಬೆರೆಸಿದ್ದ. ಎಳನೀರು ಕುಡಿದ ತಕ್ಷಣ ಸ್ಯಾಮುಯೆಲ್ ಪ್ರಜ್ಞೆ ತಪ್ಪಿಬಿದ್ದಿದ್ದ. ಈ ಸಂದರ್ಭದಲ್ಲಿ ಸುರೇಂದರ್ ಇದೇ ಅವಕಾಶ ಬಳಸಿಕೊಂಡು ಮನೆಯಲ್ಲಿನ 5 ಲಕ್ಷ ನಗದು ಹಾಗೂ 30 ತೊಲೆ ಚಿನ್ನಾಭರಣ ದೋಚಿ ಪರಾರಿಯಾಗಿದ್ದ. ಇತನನ್ನ ಬಂಧಿಸಿ ವಿಚಾರಣೆ ನಡೆಸಿದ ಬಳಿಕ ಇದರಲ್ಲಿ ಪೊಲೀಸ್​ ಅಧಿಕಾರಿಯ ಪಾಲು ಇದೆಯೆಂದು ಬಾಯ್ಬಿಟ್ಟಿದ್ದ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ