AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಪಿ ಕಾರಿನಲ್ಲಿದ್ದ ಇ-ತಂತ್ರಾಂಶದ ಸಹಿಗೆ ಬಳಸುವ DSC ಕೀ ಕಳ್ಳನ: ದೂರು ದಾಖಲು

ಇತ್ತೀಚೆಗೆ ಕಳ್ಳರ ಹಾವಳಿ ಹೆಚ್ಚಾಗಿದ್ದು, ಅದು ಎಷ್ಟರ ಮಟ್ಟಿಗೆ ಅಂದರೆ, ಪೊಲೀಸರನ್ನು ಬಿಡದ ಮಟ್ಟಕ್ಕೆ ಬಂದು ತಲುಪಿದೆ. ಹೌದು ಡಿಸಿಪಿ ಕಾರಿನಲ್ಲಿದ್ದ ಡಿಎಸ್​ಸಿ(Digital Signature Certicate) ಕೀಯನ್ನೇ ಕಳ್ಳ ಎಗರಿಸಿದ ಘಟನೆ ಉಪ್ಪಾರಪೇಟೆ ಬಳಿ ಇರುವ ಬಿಬಿಎಂಪಿ ಕಚೇರಿ ಬಳಿ ನಡೆದಿದೆ.

ಡಿಸಿಪಿ ಕಾರಿನಲ್ಲಿದ್ದ ಇ-ತಂತ್ರಾಂಶದ ಸಹಿಗೆ ಬಳಸುವ DSC ಕೀ ಕಳ್ಳನ: ದೂರು ದಾಖಲು
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on: Jun 28, 2023 | 7:40 AM

Share

ಬೆಂಗಳೂರು: ಇತ್ತೀಚೆಗೆ ಕಳ್ಳರ ಹಾವಳಿ ಹೆಚ್ಚಾಗಿದ್ದು, ಅದು ಎಷ್ಟರ ಮಟ್ಟಿಗೆ ಅಂದರೆ, ಪೊಲೀಸರನ್ನು ಬಿಡದ ಮಟ್ಟಕ್ಕೆ ಬಂದು ತಲುಪಿದೆ. ಹೌದು ಡಿಸಿಪಿ ಕಾರಿನಲ್ಲಿದ್ದ ಡಿಎಸ್​ಸಿ(Digital Signature Certicate) ಕೀಯನ್ನೇ ಕಳ್ಳ ಎಗರಿಸಿದ ಘಟನೆ ಉಪ್ಪಾರಪೇಟೆ ಬಳಿ ಇರುವ ಬಿಬಿಎಂಪಿ ಕಚೇರಿ ಬಳಿ ನಡೆದಿದೆ. ಪಶ್ಚಿಮ ವಿಭಾಗದ ಸಂಚಾರಿ ಡಿಸಿಪಿ ಆಗಿರುವ ಡಾ. ಸುಮನ್ ಪನ್ನೇಕರ್ ಅವರು ಬಿಬಿಎಂಪಿ ಕಚೇರಿ ಬಳಿ ತಮ್ಮ ಕಾರನ್ನು ನಿಲ್ಲಿಸಿ, ಇ- ತಂತ್ರಾಂಶದ ಸಹಿಗೆ ಬಳಸುವ ಡಿಎಸ್​ಸಿ ಕೀಯನ್ನ ಕಾರಿನ ಸೀಟ್ ಮೇಲೆ ಬಿಟ್ಟು, ಕಾರು ಲಾಕ್ ಮಾಡುವುದನ್ನ ಮರೆತು ಕಚೇರಿಗೆ ಹೋಗಿದ್ದಾರೆ. ಈ ವೇಳೆ ಚಾಲಾಕಿ ಕಳ್ಳ ತನ್ನ ಕೈ ಚಳಕ ತೋರಿಸಿದ್ದಾನೆ.

ಪೊಲೀಸ್​ ಠಾಣೆಗೆ ದೂರು

ಈ ಡಿಎಸ್​ಸಿ ಕೀಯನ್ನು ಇ- ತಂತ್ರಾಂಶದ ಸಹಿಗೆ ಬಳಸಲಾಗುತ್ತದೆ. ಇದನ್ನು ಕಾರಿನಲ್ಲಿ ಇಟ್ಟು ಮರೆತು ಬಂದಿರುವುದು ಗೊತ್ತಾಗಿ, ಮತ್ತೆ ಕಾರಿನ ಬಳಿ ಬಂದಾಗ ಕಳ್ಳತನವಾಗಿರುವುದು ಬಯಲಾಗಿದೆ. ಕೂಡಲೇ ಡಿಸಿಪಿ ಡಾ. ಸುಮನ್ ಪನ್ನೇಕರ್ ಅವರು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇಷ್ಟು ದಿನ ಸಾರ್ವಜನಿಕರನ್ನ ಮಾತ್ರ ದೋಚುತ್ತಿದ್ದ ಕಳ್ಳರು ಇದೀಗ ಪೊಲೀಸರನ್ನು ಬಿಡದ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ:Gadag News: ಹಗಲು ಕೆಇಬಿಯಲ್ಲಿ ದಿನಗೂಲಿ ಕೆಲಸ; ರಾತ್ರಿ ರೈತರ ಜಮೀನುಗಳಲ್ಲಿ ವಿದ್ಯುತ್ ತಂತಿ ಕಳ್ಳತನ; ಮೂವರ ಬಂಧನ

ಆದಾಯ ತೆರಿಗೆ ಅಧಿಕಾರಿ ಮನೆಯಲ್ಲಿ ಕಳ್ಳತನ

ಹೌದು ಹೈದರಾಬಾದ್​ನಲ್ಲಿ ನಿವೃತ್ತ ಆದಾಯ ತೆರಿಗೆ ಇಲಾಖೆಯ ಕಮಿಷನರ್ ಸ್ಯಾಮ್ಯುಯೆಲ್ ಎಂಬುವವರು ಮನೆಯಲ್ಲಿ ಕಳ್ಳ ಕೈಚಳಕ ತೋರಿಸಿದ್ದ. ಇನ್ನು ಈ ಕಳ್ಳತನದ ಹಿಂದೆ ಪೊಲೀಸ್ ಅಧಿಕಾರಿಯ ಕೈವಾಡವಿದೆಯೆಂದು ಸ್ವತಃ ಕಳ್ಳ ಹೇಳಿದ್ದ. ಹೌದುನಿವೃತ್ತ ಕಮಿಷನರ್ ಸ್ಯಾಮ್ಯುಯೆಲ್ ಜಮೀನು ಖರೀದಿಸಲು ಮುಂದಾಗಿದ್ದು, ಈ ವೇಳೆ ಸುರೇಂದರ್ ಎಂಬ ವ್ಯಕ್ತಿ ಪರಿಚಯವಾಗಿತ್ತು. ಹಾಗಾಗಿ ಸುರೇಂದರ್ ಆಗಾಗ್ಗೆ ಸ್ಯಾಮ್ಯುಯೆಲ್ ಮನೆಗೆ ಬರುತ್ತಿದ್ದ. ಇತ್ತೀಚೆಗೆ ಮನೆಗೆ ಬಂದಿದ್ದ ಸುರೇಂದರ್ ಟಿಫಿನ್ ಹಾಗೂ ಎಳೆನೀರು ತಂದಿದ್ದ. ಆದರೆ, ಆ ತೆಂಗಿನಕಾಯಿಯ ನೀರಿಗೆ ಮದ್ದು ಬೆರೆಸಿದ್ದ. ಎಳನೀರು ಕುಡಿದ ತಕ್ಷಣ ಸ್ಯಾಮುಯೆಲ್ ಪ್ರಜ್ಞೆ ತಪ್ಪಿಬಿದ್ದಿದ್ದ. ಈ ಸಂದರ್ಭದಲ್ಲಿ ಸುರೇಂದರ್ ಇದೇ ಅವಕಾಶ ಬಳಸಿಕೊಂಡು ಮನೆಯಲ್ಲಿನ 5 ಲಕ್ಷ ನಗದು ಹಾಗೂ 30 ತೊಲೆ ಚಿನ್ನಾಭರಣ ದೋಚಿ ಪರಾರಿಯಾಗಿದ್ದ. ಇತನನ್ನ ಬಂಧಿಸಿ ವಿಚಾರಣೆ ನಡೆಸಿದ ಬಳಿಕ ಇದರಲ್ಲಿ ಪೊಲೀಸ್​ ಅಧಿಕಾರಿಯ ಪಾಲು ಇದೆಯೆಂದು ಬಾಯ್ಬಿಟ್ಟಿದ್ದ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ