AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ 18 ಟೈಪ್ಸ್​​​​​ ಸೈಬರ್​​ ಕ್ರೈಂ​​​ ಮೂಲಕ 470 ಕೋಟಿ ರೂ. ವಂಚನೆ: ಕಮಿಷನರ್​​ ದಯಾನಂದ್​ ಮಾಹಿತಿ

ಬೆಂಗಳೂರು ನಗರದಲ್ಲಿ ನಡೆದ ಸೈಬರ್​ ಕ್ರೈಮ್​ ಮಾದರಿ, ತೆಗೆದುಕೊಂಡ ಕ್ರಮಗಳ ಬಗ್ಗೆ ಬೆಂಗಳೂರು ನಗರ ಕಮಿಷನರ್ ದಯಾನಂದ್ ಟಿವಿ9 ಡಿಜಿಟಲ್​​​ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರಲ್ಲಿ 18 ಟೈಪ್ಸ್​​​​​ ಸೈಬರ್​​ ಕ್ರೈಂ​​​ ಮೂಲಕ 470 ಕೋಟಿ ರೂ. ವಂಚನೆ: ಕಮಿಷನರ್​​ ದಯಾನಂದ್​ ಮಾಹಿತಿ
ಕಮಿಷನರ್ ದಯಾನಂದ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 10, 2023 | 1:01 PM

Share

ಬೆಂಗಳೂರು ಅ.10: ಇತ್ತೀಚಿಗೆ ಬೆಂಗಳೂರು ಪೊಲೀಸರು ಅತಿದೊಡ್ಡ ಸೈಬರ್​​ ಕ್ರೈಮ್ (Cyber Crime)​​ ಜಾಲವೊಂದನ್ನು ಭೇದಿಸಿದ್ದರು. ಈ ಜಾಲದಲ್ಲಿ ಸಿಕ್ಕಿಬಿದ್ದ ಆರೋಪಿಗಳು ಹೂಡಿಕೆ ಹೆಸರಿನಲ್ಲಿ ಜನರಿಗೆ ಬರೋಬ್ಬರಿ 854 ಕೋಟಿ ರೂ. ವಂಚಿಸಿದ್ದರು. ರಾಜ್ಯ ರಾಜಧಾನಿಯಲ್ಲಿನ ಸೈಬರ್​​ ವಂಚಕರ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ. ಇದುವರೆಗೆ ನಗರದಲ್ಲಿ ನಡೆದ ಸೈಬರ್​ ಕ್ರೈಮ್​ ಮಾದರಿ, ತೆಗೆದುಕೊಂಡ ಕ್ರಮಗಳ ಬಗ್ಗೆ ಬೆಂಗಳೂರು ನಗರ ಕಮಿಷನರ್ ದಯಾನಂದ್ (Commissioner Dayanand) ಟಿವಿ9 ಡಿಜಿಟಲ್​​​ಗೆ ಮಾಹಿತಿ ನೀಡಿದ್ದಾರೆ.

ಈಗಾಗಲೇ ನಗರ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸೈಬರ್ ಕ್ರೈಮ್ ದೂರುಗಳನ್ನು ದಾಖಲು ಮಾಡಲಾಗುತ್ತಿದೆ. ಇಲ್ಲಿಯವರೆಗೆ 18 ಮಾದರಿಯಲ್ಲಿ ಸೈಬರ್ ಕ್ರೈಮ್ ಆಗಿವೆ. ಈ ಪೈಕಿ 12,615 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 470 ಕೋಟಿ ರೂ. ಹಣ ವಂಚನೆ ಮಾಡಲಾಗಿದೆ. ಇದರಲ್ಲಿ 201 ಕೋಟಿ ರೂ. ಹಣವನ್ನು ಅರೋಪಿಗಳ ಅಕೌಂಟ್​ನಲ್ಲಿ ಫ್ರೀಜ್ ಮಾಡಲಾಗಿದೆ. 27 ಕೋಟಿ ರೂ. ಹಣವನ್ನು ಕಳೆದುಕೊಂಡವರಿಗೆ ವಾಪಸ್ಸು ನೀಡಲಾಗಿದೆ. ಆಧಾರ್ ಬಯೋಮೆಟ್ರಿಕ್​​ಗಳನ್ನು ಬಳಸಿ ಚೀಟಿಂಗ್ ಮಾಡಲಾಗಿದೆ. ಸಾರ್ವಜನಿಕರು ಹೆಚ್ಚಾಗಿ ಗಮನ ಹರಿಸಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ದಾಖಲಾದ ಪ್ರಕರಣಗಳಲ್ಲಿ ಸೈಬರ್ ಕ್ರೈಂ ಶೇ.20ರಷ್ಟಿದೆ: ಎಂ ಎ ಸಲೀಂ

ಇನ್ನು ಪೊಲೀಸ್ ಕಮಿಷನರ್ ಕಚೇರಿ ಹತ್ತಿರದಲ್ಲಿ ಬಸ್ ಸ್ಟಾಂಡ್ ಕಳ್ಳತನವಾಗಿದ್ದ ಪ್ರಕರಣ ಪತ್ತೆ ಹಚ್ಚಲಾಗಿದೆ. ಬಸ್ ಶೆಲ್ಟರ್ ಕಳ್ಳತನ ಅಥವಾ ಮಿಸ್ ಆಗಿರಲಿಲ್ಲ. ಬಿಬಿಎಂಪಿ ಅಧಿಕಾರಿಗಳು ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ತೆರವು ಮಾಡಿದ್ದಾರೆ. ಆದರೆ ಬಸ್ ಶೆಲ್ಟರ್ ಹಾಕಲು ಕೆಲಸ ಮಾಡುತ್ತಿದ್ದ ಸೈನ್ ಪೋಸ್ಟ್ ಕಂಪನಿಯವರು ಬಸ್ ಶೆಲ್ಟರ್ ಕಳ್ಳತನ ಆಗಿದೆ ಎಂದು ದೂರು ನೀಡಿದ್ದರು. ದೂರಿನ ಅನ್ವಯ ಕೇಸ್ ದಾಖಲು ಮಾಡಲಾಗಿತ್ತು. ನಾವು ತನಿಖೆ ನಡೆಸುತ್ತಿರುವ ವೇಳೆ ಪರಿಶೀಲನೆ ವೇಳೆ ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾಮಗಾರಿ ಕಳಪೆ ಎಂದು ನೋಟಿಸ್ ನೀಡಿದ್ದಾರೆ. ಆದಾದ ಬಳಿಕ ಬಿಬಿಎಂಪಿ ಅಧಿಕಾರಿಗಳು ಬಸ್ ನಿಲ್ದಾಣವನ್ನು ತೆರವು ಮಾಡಿದರು ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Tue, 10 October 23

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!