AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ 18 ಟೈಪ್ಸ್​​​​​ ಸೈಬರ್​​ ಕ್ರೈಂ​​​ ಮೂಲಕ 470 ಕೋಟಿ ರೂ. ವಂಚನೆ: ಕಮಿಷನರ್​​ ದಯಾನಂದ್​ ಮಾಹಿತಿ

ಬೆಂಗಳೂರು ನಗರದಲ್ಲಿ ನಡೆದ ಸೈಬರ್​ ಕ್ರೈಮ್​ ಮಾದರಿ, ತೆಗೆದುಕೊಂಡ ಕ್ರಮಗಳ ಬಗ್ಗೆ ಬೆಂಗಳೂರು ನಗರ ಕಮಿಷನರ್ ದಯಾನಂದ್ ಟಿವಿ9 ಡಿಜಿಟಲ್​​​ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರಲ್ಲಿ 18 ಟೈಪ್ಸ್​​​​​ ಸೈಬರ್​​ ಕ್ರೈಂ​​​ ಮೂಲಕ 470 ಕೋಟಿ ರೂ. ವಂಚನೆ: ಕಮಿಷನರ್​​ ದಯಾನಂದ್​ ಮಾಹಿತಿ
ಕಮಿಷನರ್ ದಯಾನಂದ್
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on:Oct 10, 2023 | 1:01 PM

ಬೆಂಗಳೂರು ಅ.10: ಇತ್ತೀಚಿಗೆ ಬೆಂಗಳೂರು ಪೊಲೀಸರು ಅತಿದೊಡ್ಡ ಸೈಬರ್​​ ಕ್ರೈಮ್ (Cyber Crime)​​ ಜಾಲವೊಂದನ್ನು ಭೇದಿಸಿದ್ದರು. ಈ ಜಾಲದಲ್ಲಿ ಸಿಕ್ಕಿಬಿದ್ದ ಆರೋಪಿಗಳು ಹೂಡಿಕೆ ಹೆಸರಿನಲ್ಲಿ ಜನರಿಗೆ ಬರೋಬ್ಬರಿ 854 ಕೋಟಿ ರೂ. ವಂಚಿಸಿದ್ದರು. ರಾಜ್ಯ ರಾಜಧಾನಿಯಲ್ಲಿನ ಸೈಬರ್​​ ವಂಚಕರ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ. ಇದುವರೆಗೆ ನಗರದಲ್ಲಿ ನಡೆದ ಸೈಬರ್​ ಕ್ರೈಮ್​ ಮಾದರಿ, ತೆಗೆದುಕೊಂಡ ಕ್ರಮಗಳ ಬಗ್ಗೆ ಬೆಂಗಳೂರು ನಗರ ಕಮಿಷನರ್ ದಯಾನಂದ್ (Commissioner Dayanand) ಟಿವಿ9 ಡಿಜಿಟಲ್​​​ಗೆ ಮಾಹಿತಿ ನೀಡಿದ್ದಾರೆ.

ಈಗಾಗಲೇ ನಗರ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸೈಬರ್ ಕ್ರೈಮ್ ದೂರುಗಳನ್ನು ದಾಖಲು ಮಾಡಲಾಗುತ್ತಿದೆ. ಇಲ್ಲಿಯವರೆಗೆ 18 ಮಾದರಿಯಲ್ಲಿ ಸೈಬರ್ ಕ್ರೈಮ್ ಆಗಿವೆ. ಈ ಪೈಕಿ 12,615 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 470 ಕೋಟಿ ರೂ. ಹಣ ವಂಚನೆ ಮಾಡಲಾಗಿದೆ. ಇದರಲ್ಲಿ 201 ಕೋಟಿ ರೂ. ಹಣವನ್ನು ಅರೋಪಿಗಳ ಅಕೌಂಟ್​ನಲ್ಲಿ ಫ್ರೀಜ್ ಮಾಡಲಾಗಿದೆ. 27 ಕೋಟಿ ರೂ. ಹಣವನ್ನು ಕಳೆದುಕೊಂಡವರಿಗೆ ವಾಪಸ್ಸು ನೀಡಲಾಗಿದೆ. ಆಧಾರ್ ಬಯೋಮೆಟ್ರಿಕ್​​ಗಳನ್ನು ಬಳಸಿ ಚೀಟಿಂಗ್ ಮಾಡಲಾಗಿದೆ. ಸಾರ್ವಜನಿಕರು ಹೆಚ್ಚಾಗಿ ಗಮನ ಹರಿಸಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ದಾಖಲಾದ ಪ್ರಕರಣಗಳಲ್ಲಿ ಸೈಬರ್ ಕ್ರೈಂ ಶೇ.20ರಷ್ಟಿದೆ: ಎಂ ಎ ಸಲೀಂ

ಇನ್ನು ಪೊಲೀಸ್ ಕಮಿಷನರ್ ಕಚೇರಿ ಹತ್ತಿರದಲ್ಲಿ ಬಸ್ ಸ್ಟಾಂಡ್ ಕಳ್ಳತನವಾಗಿದ್ದ ಪ್ರಕರಣ ಪತ್ತೆ ಹಚ್ಚಲಾಗಿದೆ. ಬಸ್ ಶೆಲ್ಟರ್ ಕಳ್ಳತನ ಅಥವಾ ಮಿಸ್ ಆಗಿರಲಿಲ್ಲ. ಬಿಬಿಎಂಪಿ ಅಧಿಕಾರಿಗಳು ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ತೆರವು ಮಾಡಿದ್ದಾರೆ. ಆದರೆ ಬಸ್ ಶೆಲ್ಟರ್ ಹಾಕಲು ಕೆಲಸ ಮಾಡುತ್ತಿದ್ದ ಸೈನ್ ಪೋಸ್ಟ್ ಕಂಪನಿಯವರು ಬಸ್ ಶೆಲ್ಟರ್ ಕಳ್ಳತನ ಆಗಿದೆ ಎಂದು ದೂರು ನೀಡಿದ್ದರು. ದೂರಿನ ಅನ್ವಯ ಕೇಸ್ ದಾಖಲು ಮಾಡಲಾಗಿತ್ತು. ನಾವು ತನಿಖೆ ನಡೆಸುತ್ತಿರುವ ವೇಳೆ ಪರಿಶೀಲನೆ ವೇಳೆ ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾಮಗಾರಿ ಕಳಪೆ ಎಂದು ನೋಟಿಸ್ ನೀಡಿದ್ದಾರೆ. ಆದಾದ ಬಳಿಕ ಬಿಬಿಎಂಪಿ ಅಧಿಕಾರಿಗಳು ಬಸ್ ನಿಲ್ದಾಣವನ್ನು ತೆರವು ಮಾಡಿದರು ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Tue, 10 October 23

ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?