AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಪರಿಚಿತನ ಬಳಿ ಕ್ವಾಟರ್ ಎಣ್ಣೆ ಆಸೆಗೆ ಬಿದ್ದು ಆಟೋ ಕಳ್ಕೊಂಡ ಚಾಲಕ; ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಬೆಂಗಳೂರಿನ ದಾಸರಹಳ್ಳಿಯ 8ನೇ ಮೈಲು ಬಳಿಯಿರುವ ಅಟೋಸ್ಟಾಂಡ್​ಗೆ ಹಳೆಯ ಆಟೋದಲ್ಲಿ ಬಂದಿದ್ದ ಅಪರಿಚಿತನೊಬ್ಬ, ಆತ್ಮೀಯವಾಗಿ ಮಾತನಾಡಿ ಮತ್ತೋರ್ವ ಆಟೋ ಚಾಲಕನಿಗೆ ಎಣ್ಣೆ ಕುಡಿಸಿ, ತನ್ನ ಹಳೆಯ ಆಟೋವನ್ನು ಬಿಟ್ಟು, ಹೊಸ ಆಟೋವನ್ನು ಕದ್ದು ಪರಾರಿಯಾದ ಘಟನೆ ನಡೆದಿದೆ.

ಬೆಂಗಳೂರು: ಅಪರಿಚಿತನ ಬಳಿ ಕ್ವಾಟರ್ ಎಣ್ಣೆ ಆಸೆಗೆ ಬಿದ್ದು ಆಟೋ ಕಳ್ಕೊಂಡ ಚಾಲಕ; ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಆಟೋ ಕಳ್ಳತನ ಮಾಡಿದ ಆರೋಪಿ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Aug 18, 2023 | 2:34 PM

Share

ಬೆಂಗಳೂರು, ಆ.18: ಕಣ್ಣು ಮುಚ್ಚಿ ತೆಗೆಯುವಷ್ಟರಲ್ಲಿ ನಮ್ಮ ಬಳಿಯಿರುವ ಮೊಬೈಲ್​, ಪರ್ಸ್​ ಇತ್ಯಾದಿ ವಸ್ತುಗಳು ಮಾಯವಾಗುತ್ತದೆ. ಅದರಂತೆ ಇದೀಗ ಕ್ವಾಟರ್ ಎಣ್ಣೆಗಾಗಿ ತನ್ನ ಹೊಸ ಆಟೋ (Auto) ವನ್ನು ಕಳೆದುಕೊಂಡ ಘಟನೆ ಬೆಂಗಳೂರಿನ(Bengaluru) ದಾಸರಹಳ್ಳಿ(Dasarahalli)ಯ 8ನೇ ಮೈಲಿ ಅಟೋಸ್ಟಾಂಡ್​ನಲ್ಲಿ ನಡೆದಿದೆ. ವಿಜಯ್ ಕುಮಾರ್ ಆಟೋ ಕಳೆದುಕೊಂಡವರು. ನಿನ್ನೆ(ಆ.17) ಮಟ ಮಟ ಮಧ್ಯಾಹ್ನದ ವೇಳೆ ಹಳೆಯ ಅಟೋದಲ್ಲಿ ಬಂದಿದ್ದ ಅಪರಿಚಿತ ಚಾಲಕನೊಬ್ಬ, ಹಾಯ್ ಎಂದುಕೊಂಡು ಆತ್ಮೀಯವಾಗಿ ಈ ಸ್ಟ್ಯಾಂಡ್​ನಲ್ಲಿ ಎಷ್ಟು ಕಲೆಕ್ಷನ್ ಆಗುತ್ತೆ ಅಂದುಕೊಂಡು ಪರಿಚಯಸ್ಥನ ತರ ನಟನೆ ಮಾಡಿ, ಆಟೋವನ್ನೇ ಕದ್ದುಕೊಂಡು ಹೋದ ಘಟನೆ ನಡೆದಿದೆ.

ಎಣ್ಣೆ ಕುಡಿಸಿ, ಆಟೋ ಕದ್ದ ಖದೀಮ

ಹೌದು, ಆತ್ಮೀಯವಾಗಿ ಮಾತನಾಡುತ್ತ, ಬಾ ಗುರು ಎಣ್ಣೆ ಹೊಡೆಯೋಣವೆಂದು ಪಕ್ಕದಲ್ಲೇ ಇದ್ದ ಮೂನ್ ಲೈಟ್ ಬಾರ್​ಗೆ ಕರೆದುಕೊಂಡು ಹೋಗಿದ್ದಾನೆ. ನಂತರ ಆತನ ದುಡ್ಡಲ್ಲೇ ಕ್ವಾಟರ್​ ಎಣ್ಣೆಯನ್ನು ಕುಡಿಸಿದ್ದಾನೆ. ಬಳಿಕ ಎಣ್ಣೆ ಕುಡಿದು ಹೊಸ ಅಟೋದಲ್ಲಿ ಮಲಗಬಾರದೆಂದು ವಿಜಯ್ ಕುಮಾರ್ ಅವರು ಅರೋಪಿ ತಂದಿದ್ದ ಹಳೆಯ ಅಟೋದಲ್ಲಿ ಮಲಗಿದ್ದಾರೆ. ಅಷ್ಟೇ, ಮಲಗಿ ಎದ್ದೇಳುವಷ್ಟರಲ್ಲಿ ಆತನ ಹಳೆಯ ಅಟೋ ಬಿಟ್ಟು ಹೊಸ ಆಟೋದಲ್ಲಿ ಪರಾರಿಯಾಗಿದ್ದಾನೆ.

ಇದನ್ನೂ ಓದಿ:Mysore police: ಐಶಾರಾಮಿ ಕಾರು, ಶ್ರೀಮಂತರ ಮನೆಯೇ ಇವನ ಟಾರ್ಗೆಟ್: 56 ಕಳ್ಳತನ ಮಾಡಿದ್ದರೂ ಪೊಲೀಸರಿಗೆ ಮಾತ್ರ ಸಿಕ್ಕಿರಲಿಲ್ಲ- ಕೊನೆಗೂ ಅಂದರ್​

ಆಟೋ ಕದ್ದು ಪರಾರಿಯಾಗುವ ದೃಶ್ಯ ಸಿಸಿಕ್ಯಾಮಾರದಲ್ಲಿ ಸೆರೆ

ಇನ್ನು ಅಟೋದಲ್ಲಿದ್ದ 25ಸಾವಿರ ಬೆಲೆಬಾಳುವ ಮೊಬೈಲ್ ಜೊತೆ ಆಟೋವನ್ನು ಎತ್ತಿಕೊಂಡು ಪರಾರಿಯಾಗಿದ್ದಾನೆ. ಇತ್ತ ಹಳೆಯ ಅಟೋ ಸುದ್ದಗುಂಟೆಪಾಳ್ಯದಲ್ಲಿ ಕದ್ದಿರುವುದು ಎಂದು ಪೊಲೀಸರು ಜಪ್ತಿ ಮಾಡಿದ್ದಾರೆ. ಇತ್ತ ಅಪರಿಚಿತನ ಬಳಿ ಕ್ವಾಟರ್ ಎಣ್ಣೆಯ ಆಸೆಗೆ ಬಿದ್ದು ಆಟೋ ಕಳಕೊಂಡಿದ್ದಾನೆ. ಇನ್ನು ಅಟೋ ಕದ್ದು ಪರಾರಿಯಾಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ಪೀಣ್ಯಾ ಪೊಲೀಸ್ ಠಾಣೆಯಲ್ಲಿ IPC 1860 ರೀತ್ಯಾ 379ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್