AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ರೇಯಸಿಗಾಗಿ ಮನೆಗಳ್ಳತನ ಮಾಡುತ್ತಿದ್ದ ಅಸಾಮಿ ಅರೆಸ್ಟ್

ಇತ್ತೀಚೆಗೆ ಮನೆಗಳ್ಳತನ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಅದರಂತೆ ಇಲ್ಲೊಬ್ಬ ಅಸಾಮಿ, ಪ್ರೇಯಸಿಯನ್ನು ಪ್ರವಾಸಿ ತಾಣಗಳಿಗೆ ಸುತ್ತಾಡಿಸಲು ಮನೆ ಕಳ್ಳತನ ಇಳಿದಿದ್ದ. ಇದೀಗ 23 ಮನೆಗಳವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಜಿಗಣಿ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಬೆಂಗಳೂರು: ಪ್ರೇಯಸಿಗಾಗಿ ಮನೆಗಳ್ಳತನ ಮಾಡುತ್ತಿದ್ದ ಅಸಾಮಿ ಅರೆಸ್ಟ್
ಲಕ್ಷ್ಮಣ್ ಅಲಿಯಾಸ್​ ಗುನ್ನಿ ಬಂಧಿತ ಆರೋಪಿ
ರಾಮು, ಆನೇಕಲ್​
| Edited By: |

Updated on:Sep 05, 2024 | 4:33 PM

Share

ಬೆಂಗಳೂರು, ಸೆ.05: ಪ್ರೇಯಸಿಗಾಗಿ ಮನೆಗಳ್ಳತನ ಮಾಡುತ್ತಿದ್ದ ಖತರ್ನಾಕ್​ ಖದೀಮನನ್ನ ಜಿಗಣಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸರ್ಜಾಪುರದ ಚಿಕ್ಕದಾಸರಹಳ್ಳಿ(Chikkadasarahalli) ನಿವಾಸಿ ಲಕ್ಷ್ಮಣ್ ಅಲಿಯಾಸ್​ ಗುನ್ನಿ ಬಂಧಿತ ಆರೋಪಿ. ಇತನಿಂದ 8 ಲಕ್ಷ ರೂಪಾಯಿ ಮೌಲ್ಯದ 101 ಗ್ರಾಂ ಚಿನ್ನಾಭರಣವನ್ನು ಜಫ್ತಿ ಮಾಡಲಾಗಿದೆ. ಕೈಯಲ್ಲಿ ಕೆಲಸವಿಲ್ಲದಿದ್ದರು ಶೋಕಿ ಜೀವನ ರೂಡಿಸಿಕೊಂಡಿದ್ದ ಲಕ್ಷ್ಮಣ್, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಪ್ರೇಯಸಿಯನ್ನು ಪ್ರವಾಸಿ ತಾಣಗಳಿಗೆ ಸುತ್ತಾಡಿಸಲು ಮನೆಗಳಿಗೆ ಕನ್ನ

ಹೌದು, ಶೋಕಿ ಜೀವನ ರೂಢಿಸಿಕೊಂಡಿದ್ದ ಆಸಾಮಿ, ಪ್ರೇಯಸಿಯನ್ನು ಪ್ರವಾಸಿ ತಾಣಗಳಿಗೆ ಸುತ್ತಾಡಿಸಲು ಮನೆಗಳಿಗೆ ಕನ್ನ ಹಾಕುತ್ತಿದ್ದ. ಅದರಂತೆ ಜಿಗಣಿಯ ಗೋಪಾಲಸ್ವಾಮಿ ಎಂಬುವವರ ಮನೆಗೆ ಬೆಳ್ಳಂಬೆಳಗ್ಗೆ ಬಾಗಿಲು ಮುರಿದು ನುಗ್ಗಿ, ನಗನಾಣ್ಯವನ್ನು ದೋಚಿ ಪರಾರಿಯಾಗಿದ್ದ. ಹೀಗೆ ಜಿಗಣಿ, ಬನ್ನೇರುಘಟ್ಟ, ಅತ್ತಿಬೆಲೆ, ಸೂರ್ಯನಗರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಇತನ ಮೇಲೆ ಕೇಸ್ ದಾಖಲಾಗಿತ್ತು. 23 ಮನೆಗಳವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ, ಹಲವು ಬಾರಿ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿ ಬಂದಿದ್ದ. ಇದೀಗ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಪೊಲೀಸರು ಕಳುಹಿಸಿದ್ದಾರೆ.

ಇದನ್ನೂ ಓದಿ:ಒಂದೇ ಗ್ರಾಮದಲ್ಲಿ ಸರಣಿ ಮನೆಗಳ್ಳತನಕ್ಕೆ ಬೆಚ್ಚಿಬಿದ್ದ ಜನತೆ; ಗ್ರಾಮದ ಸುತ್ತಲೂ ಕೊಲಿಡಿದು ನಿಂತ ಯುವಕರು

ಲಕ್ಷಾಂತರ ಮೌಲ್ಯದ ಕುರಿಗಳ ಕಳ್ಳತನ

ಕೋಲಾರ: ಮಾಲೂರಿನ ತಾಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೊಟ್ಟಿಗೆಯಲ್ಲಿದ್ದ ಲಕ್ಷಾಂತರ ಮೌಲ್ಯದ 11 ಕುರಿಗಳು ಕಳ್ಳತನವಾಗಿದೆ. ನಾರಾಯಣಪ್ಪ ಎಂಬುವರಿಗೆ ಸೇರಿದ ಕುರಿಗಳು ಇದಾಗಿದ್ದು, ಕಣ್ಣೀರು ಹಾಕುತ್ತಿದ್ದಾರೆ. ಇನ್ನು ತಿಂಗಳ ಹಿಂದೆ ಪಕ್ಕದ ಗ್ರಾಮದಲ್ಲಿ ಕೂಡ ಕಳ್ಳತನವಾಗಿತ್ತು. ಆದರೂ ಪೊಲೀಸರು ಎಚ್ಚೆತ್ತುಕೊಳ್ಳಲಿಲ್ಲ. ಜೊತೆಗೆ ರಾತ್ರಿ ಪಾಳಿ ಪೊಲೀಸರ ಗಸ್ತು ತಿರುಗುವುದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದು, ಈ ಘಟನೆ ಮಾಸ್ತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:29 pm, Thu, 5 September 24

ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು!
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ವಿಶ್ವಕಪ್​ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಸೌರಭ್
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​
ನೆರವಿಗಾಗಿ ಕರೆ ಮಾಡಿದ್ದ ಮಹಿಳೆ ಮೇಲೆ ಪೊಲೀಸಪ್ಪ ಗರಂ: ವಿಡಿಯೋ ವೈರಲ್​​