AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಂದ ದಾಳಿ; 1 ಕೋಟಿಗೂ ಅಧಿಕ ಮೌಲ್ಯದ ಪ್ಲಾಸ್ಟಿಕ್ ಕವರ್ ವಶಕ್ಕೆ

ಪ್ಲಾಸ್ಟಿಕ್ ಕವರ್ ಗೋದಾಮಿನ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಇಂದು(ಗುರುವಾರ) ವರ್ತೂರು(Varthur) ಸಮೀಪದ ಮತ್ಸಸಂದ್ರದಲ್ಲಿರುವ ಪ್ಲಾಸ್ಟಿಕ್ ಕವರ್ ಗೋದಾಮಿನ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಸಂಗ್ರಹಿಸಿದ್ದ 1 ಕೋಟಿಗೂ ಅಧಿಕ ಮೌಲ್ಯದ ಪ್ಲಾಸ್ಟಿಕ್(Plastic) ಕವರ್​ನ್ನು ವಶಕ್ಕೆ ಪಡೆಯಲಾಗಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಂದ ದಾಳಿ; 1 ಕೋಟಿಗೂ ಅಧಿಕ ಮೌಲ್ಯದ ಪ್ಲಾಸ್ಟಿಕ್ ಕವರ್ ವಶಕ್ಕೆ
1 ಕೋಟಿಗೂ ಅಧಿಕ ಮೌಲ್ಯದ ಪ್ಲಾಸ್ಟಿಕ್ ಕವರ್ ವಶಕ್ಕೆ
Shivaprasad B
| Edited By: |

Updated on: Jun 27, 2024 | 6:17 PM

Share

ಬೆಂಗಳೂರು, ಜೂ.27: ಬೆಂಗಳೂರಿನ ವರ್ತೂರು(Varthur) ಸಮೀಪದ ಮತ್ಸಸಂದ್ರದಲ್ಲಿರುವ ಪ್ಲಾಸ್ಟಿಕ್ ಕವರ್ ಗೋದಾಮಿನ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಸಂಗ್ರಹಿಸಿದ್ದ 1 ಕೋಟಿಗೂ ಅಧಿಕ ಮೌಲ್ಯದ ಪ್ಲಾಸ್ಟಿಕ್(Plastic) ಕವರ್​ನ್ನು ವಶಕ್ಕೆ ಪಡೆಯಲಾಗಿದೆ. ಜಿ.ಆರ್.ಬಾಬು ಎಂಬುವವರ ದೂರಿನ ಮೇರೆಗೆ ಈ ದಾಳಿ ನಡೆಸಲಾಗಿದೆ.  ಇನ್ನು ಇದು ಬಾಬುತ್ ಮಾಲೀಕತ್ವದ ಪ್ಲಾಸ್ಟಿಕ್ ಕವರ್ ಗೋದಾಮು ಆಗಿದ್ದು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಬಾಲಚಂದ್ರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಜನವರಿ ತಿಂಗಳಲ್ಲೂ ಅಧಿಕಾರಿಗಳು ದಾಳಿ ನಡೆಸಿದ್ದರು.

ಇನ್ನು ಇತ್ತೀಚೆಗಷ್ಟೇ ಶಿರಾ ನಗರಸಭೆ ಅಧಿಕಾರಿಗಳು ಸೇರಿಕೊಂಡು ನಗರದ ಸಂತೆಪೇಟೆಯ ಗೋದಾಮುವೊಂದರ ಮೇಲೆ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ನಿಷೇಧಿತ ಪ್ಲಾಸ್ಟಿಕ್​ನ್ನು ವಶಪಡಿಸಿಕೊಂಡಿದ್ದರು. ನಗರಸಭೆ ಆಯುಕ್ತ ರುದ್ರೇಶ್‌  ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿ, ಅಂದಾಜು 100 ಕೆಜಿಯಷ್ಟು ನಿಷೇಧಿತ ಪ್ಲಾಸ್ಟಿಕ್‌ ಚೀಲಗಳನ್ನು ವಶಪಡಿಸಿಕೊಂಡಿದ್ದರು.

ಇದನ್ನೂ ಓದಿ:ನಿಮಗೇ ಗೊತ್ತಿಲ್ಲದಂತೆ ಈ ಆಹಾರಗಳ ಮೂಲಕ ಪ್ಲಾಸ್ಟಿಕ್ ಸೇವಿಸುತ್ತೀರಿ!

ಈ ಸಂದರ್ಭದಲ್ಲಿ ನಗರಸಭೆ ಆಯುಕ್ತ ರುದ್ರೇಶ್ ಮಾತನಾಡಿ, ಪಟ್ಟಣ, ನಗರ ವ್ಯಾಪ್ತಿಗೆ ಬರುವ

ಇನ್ನು ಈಗಾಗಲೇ ನಗರಸಭೆ ಕಡೆಯಿಂದ ನಿಷೇಧಿತ ಪ್ಲಾಸ್ಟಿಕ್‌ ಮಾರಾಟ ಮಾಡದಂತೆ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡುವುದರ ಜತೆಗೆ ದ್ವನಿವರ್ಧಕಗಳಲ್ಲಿ ಕೂಡ ಪ್ರಚಾರ ಮಾಡಲಾಗಿದ್ದು, ಎಲ್ಲ ಅಂಗಡಿ-ಮುಂಗಟ್ಟು ವ್ಯಾಪಾರಿಗಳಿಗೆ, ಹೋಟೆಲ್‌ ಮಾಲೀಕರಿಗೆ, ರಸ್ತೆ ಬದಿ ವ್ಯಾಪಾರಿಗಳು ಸೇರಿದಂತೆ ಜವಳಿ ಅಂಗಡಿ ಮಾಲೀಕರಿಗೂ ಕೂಡಾ ನಿಷೇಧಿತ ಪ್ಲಾಸ್ಟಿಕ್‌ ಕವರ್‌ ಬಳಸದಂತೆ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ. ಈ ನಡುವೆ ವರ್ತೂರಿನಲ್ಲಿ ಅಕ್ರಮವಾಗಿ 1 ಕೋಟಿಗೂ ಅಧಿಕ ಪ್ಲಾಸ್ಟಿಕ್​ ಸಂಗ್ರಹಿಸಿಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್