AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಐ ಅಧಿಕಾರಿಗಳು ಎಂದು ಹೇಳಿ ಅಪಾರ್ಟ್ಮೆಂಟ್​ಗೆ ನುಗ್ಗಿ ದರೋಡೆ; ಕೃತ್ಯ ನಡೆದ 12 ಗಂಟೆಯಲ್ಲಿ ಆರೋಪಿಗಳ ಬಂಧನ

ಬೆಂಗಳೂರು ನಗರದ ಸೋಲದೇವನಹಳ್ಳಿ(Soladevanahalli ) ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್​ಗೆ ನುಗ್ಗಿ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಹನ್ನೆರಡು ಗಂಟೆ ಒಳಗಡೆ ಪೊಲೀಸರು, ಆರೋಪಿಗಳನ್ನ ಚೇಸ್ ಮಾಡಿ ತಮಿಳುನಾಡಿನ ಧರ್ಮಪುರಿಯಲ್ಲಿ ಹಿಡಿದಿದ್ದಾರೆ.

ಸಿಬಿಐ ಅಧಿಕಾರಿಗಳು ಎಂದು ಹೇಳಿ ಅಪಾರ್ಟ್ಮೆಂಟ್​ಗೆ ನುಗ್ಗಿ ದರೋಡೆ; ಕೃತ್ಯ ನಡೆದ 12 ಗಂಟೆಯಲ್ಲಿ ಆರೋಪಿಗಳ ಬಂಧನ
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: May 30, 2024 | 5:19 PM

Share

ಬೆಂಗಳೂರು, ಮೇ.30: ಸಿಬಿಐ(CBI) ಅಧಿಕಾರಿಗಳು ಎಂದು ಹೇಳಿ ರಾತ್ರಿ ನಗರದ ಸೋಲದೇವನಹಳ್ಳಿ(Soladevanahalli ) ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್​ಗೆ ನುಗ್ಗಿ ದರೋಡೆ ಮಾಡಿದ್ದರು. ಕೃತ್ಯ ನಡೆದ ಹನ್ನೆರಡು ಗಂಟೆ ಒಳಗಡೆ ಆರೋಪಿಗಳನ್ನ ಚೇಸ್ ಮಾಡಿ ಪೊಲೀಸರು ಹಿಡಿದಿದ್ದಾರೆ. ನಿನ್ನೆ(ಮೇ.29) ರಾತ್ರಿ ಸೆಕ್ಯೂರಿಟಿಗೆ ಸಿಬಿಐ ಪೊಲೀಸರು ಎಂದು ಹೇಳಿ ಅಪಾರ್ಟ್ಮೆಂಟ್​ಗೆ ನಾಲ್ವರು ನುಗ್ಗಿದ್ದಾರೆ. ನಂತರ ಆಚಾರ್ಯ ಕಾಲೇಜು ವಿದ್ಯಾರ್ಥಿಗಳು ವಾಸ ಮಾಡುವ ಫ್ಲಾಟ್​ಗೆ ಹೋಗಿ, ಫ್ಲಾಟ್​ನಲ್ಲಿದ್ದವರಿಗೆ ಲಾಠಿಯಿಂದ ಹಲ್ಲೆ ನಡೆಸಿ, ಲಾಕಪ್ ಮತ್ತು ಗನ್ ತೋರಿಸಿ ಗಾಂಜಾ ಮಾರಾಟ ಮಾಡ್ತಿದ್ದಿರಾ ಎಂದು ಹೇಳಿ ಬೆದರಿಸಿದ್ದಾರೆ.

ಫ್ಲಾಟ್​ನಲ್ಲಿದ್ದ ಯುವಕರಿಗೆ ಹಲ್ಲೆ ಮಾಡಿ 90 ಸಾವಿರ ಹಣ ದರೋಡೆ

ಹೌದು, ಫ್ಲಾಟ್​ನಲ್ಲಿದ್ದ ಯುವಕರಿಗೆ ಹಲ್ಲೆ ಮಾಡಿ ತೊಂಬತ್ತು ಸಾವಿರ ಹಣ ದೋಚಿದ್ದಾರೆ. ಕೂಡಲೇ ಘಟನೆ ಬಳಿಕ ಹಲ್ಲೆಗೆ ಒಳಗಾದವರು ಸೋಲದೇವನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಕಾರ್ಯಚರಣೆ ನಡೆಸಿದ ಪೊಲೀಸರಿಗೆ ತಮಿಳುನಾಡಿನ ಕಡೆ ಆರೋಪಿಗಳು ಎಸ್ಕೇಪ್ ಆಗ್ತಿದ್ದ ಮಾಹಿತಿ ದೊರೆಯುತ್ತದೆ. ಈ ಹಿನ್ನಲೆ ಚೇಸ್ ಮಾಡಿ ತಮಿಳುನಾಡಿನ ಧರ್ಮಪುರಿಯಲ್ಲಿ ಆರೋಪಿಗಳನ್ನು ಪೊಲೀಸರು ಲಾಕ್ ಮಾಡಿದ್ದಾರೆ.

ಇದನ್ನೂ ಓದಿ:ಬೀದರ್: ಸಿನಿಮೀಯ ರೀತಿಯಲ್ಲಿ ಎಟಿಎಂ ದರೋಡೆ ಮಾಡಿದ್ದ ಗ್ಯಾಂಗ್​ ಅಂದರ್​; ಮೂವರು ಅರೆಸ್ಟ್, ನಾಲ್ವರು ಪರಾರಿ

ನಾಲ್ವರು ಅರೆಸ್ಟ್​

ಒಂದು ಐ 20 ಮತ್ತು ಮಹೇಂದ್ರ XUV 300 ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದ ಟೀಮ್, ಬಂಧಿತ ಆರೋಪಿಗಳಿಂದ CBIT ಹೆಸರಿನ ನಾಲ್ಕು ಐಡಿ ಕಾರ್ಡ್, ಒಂದು ಏರ್ ಗನ್ , ಏರ್ ಗನ್ ಗೆ ಬಳಸುವ ನೂರಕ್ಕು ಹೆಚ್ಚು ಬುಲೆಟ್ಸ್, ಪೊಲೀಸರು ಬಳಸುವ ಹ್ಯಾಂಡ್ ಕಾಫ್, ಲಾಠಿ, ಹಿರಿಯ ಪೊಲೀಸ್ ಅಧಿಕಾರಿಗಳು ಬಳಸುವ ಪೊಲೀಸ್ ಬ್ಯಾಟನ್​​ನನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಕೇರಳ ಮೂಲದ ಪ್ರಮೋದ್, ಅನಂತ ಕೃಷ್ಣ, ದೀಪಲ್ ಮತ್ತು ಆದರ್ಶ್ ಎಂಬುವವರನ್ನು ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್