AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಐ ಅಧಿಕಾರಿಗಳು ಎಂದು ಹೇಳಿ ಅಪಾರ್ಟ್ಮೆಂಟ್​ಗೆ ನುಗ್ಗಿ ದರೋಡೆ; ಕೃತ್ಯ ನಡೆದ 12 ಗಂಟೆಯಲ್ಲಿ ಆರೋಪಿಗಳ ಬಂಧನ

ಬೆಂಗಳೂರು ನಗರದ ಸೋಲದೇವನಹಳ್ಳಿ(Soladevanahalli ) ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್​ಗೆ ನುಗ್ಗಿ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಹನ್ನೆರಡು ಗಂಟೆ ಒಳಗಡೆ ಪೊಲೀಸರು, ಆರೋಪಿಗಳನ್ನ ಚೇಸ್ ಮಾಡಿ ತಮಿಳುನಾಡಿನ ಧರ್ಮಪುರಿಯಲ್ಲಿ ಹಿಡಿದಿದ್ದಾರೆ.

ಸಿಬಿಐ ಅಧಿಕಾರಿಗಳು ಎಂದು ಹೇಳಿ ಅಪಾರ್ಟ್ಮೆಂಟ್​ಗೆ ನುಗ್ಗಿ ದರೋಡೆ; ಕೃತ್ಯ ನಡೆದ 12 ಗಂಟೆಯಲ್ಲಿ ಆರೋಪಿಗಳ ಬಂಧನ
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: May 30, 2024 | 5:19 PM

Share

ಬೆಂಗಳೂರು, ಮೇ.30: ಸಿಬಿಐ(CBI) ಅಧಿಕಾರಿಗಳು ಎಂದು ಹೇಳಿ ರಾತ್ರಿ ನಗರದ ಸೋಲದೇವನಹಳ್ಳಿ(Soladevanahalli ) ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್​ಗೆ ನುಗ್ಗಿ ದರೋಡೆ ಮಾಡಿದ್ದರು. ಕೃತ್ಯ ನಡೆದ ಹನ್ನೆರಡು ಗಂಟೆ ಒಳಗಡೆ ಆರೋಪಿಗಳನ್ನ ಚೇಸ್ ಮಾಡಿ ಪೊಲೀಸರು ಹಿಡಿದಿದ್ದಾರೆ. ನಿನ್ನೆ(ಮೇ.29) ರಾತ್ರಿ ಸೆಕ್ಯೂರಿಟಿಗೆ ಸಿಬಿಐ ಪೊಲೀಸರು ಎಂದು ಹೇಳಿ ಅಪಾರ್ಟ್ಮೆಂಟ್​ಗೆ ನಾಲ್ವರು ನುಗ್ಗಿದ್ದಾರೆ. ನಂತರ ಆಚಾರ್ಯ ಕಾಲೇಜು ವಿದ್ಯಾರ್ಥಿಗಳು ವಾಸ ಮಾಡುವ ಫ್ಲಾಟ್​ಗೆ ಹೋಗಿ, ಫ್ಲಾಟ್​ನಲ್ಲಿದ್ದವರಿಗೆ ಲಾಠಿಯಿಂದ ಹಲ್ಲೆ ನಡೆಸಿ, ಲಾಕಪ್ ಮತ್ತು ಗನ್ ತೋರಿಸಿ ಗಾಂಜಾ ಮಾರಾಟ ಮಾಡ್ತಿದ್ದಿರಾ ಎಂದು ಹೇಳಿ ಬೆದರಿಸಿದ್ದಾರೆ.

ಫ್ಲಾಟ್​ನಲ್ಲಿದ್ದ ಯುವಕರಿಗೆ ಹಲ್ಲೆ ಮಾಡಿ 90 ಸಾವಿರ ಹಣ ದರೋಡೆ

ಹೌದು, ಫ್ಲಾಟ್​ನಲ್ಲಿದ್ದ ಯುವಕರಿಗೆ ಹಲ್ಲೆ ಮಾಡಿ ತೊಂಬತ್ತು ಸಾವಿರ ಹಣ ದೋಚಿದ್ದಾರೆ. ಕೂಡಲೇ ಘಟನೆ ಬಳಿಕ ಹಲ್ಲೆಗೆ ಒಳಗಾದವರು ಸೋಲದೇವನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಕಾರ್ಯಚರಣೆ ನಡೆಸಿದ ಪೊಲೀಸರಿಗೆ ತಮಿಳುನಾಡಿನ ಕಡೆ ಆರೋಪಿಗಳು ಎಸ್ಕೇಪ್ ಆಗ್ತಿದ್ದ ಮಾಹಿತಿ ದೊರೆಯುತ್ತದೆ. ಈ ಹಿನ್ನಲೆ ಚೇಸ್ ಮಾಡಿ ತಮಿಳುನಾಡಿನ ಧರ್ಮಪುರಿಯಲ್ಲಿ ಆರೋಪಿಗಳನ್ನು ಪೊಲೀಸರು ಲಾಕ್ ಮಾಡಿದ್ದಾರೆ.

ಇದನ್ನೂ ಓದಿ:ಬೀದರ್: ಸಿನಿಮೀಯ ರೀತಿಯಲ್ಲಿ ಎಟಿಎಂ ದರೋಡೆ ಮಾಡಿದ್ದ ಗ್ಯಾಂಗ್​ ಅಂದರ್​; ಮೂವರು ಅರೆಸ್ಟ್, ನಾಲ್ವರು ಪರಾರಿ

ನಾಲ್ವರು ಅರೆಸ್ಟ್​

ಒಂದು ಐ 20 ಮತ್ತು ಮಹೇಂದ್ರ XUV 300 ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದ ಟೀಮ್, ಬಂಧಿತ ಆರೋಪಿಗಳಿಂದ CBIT ಹೆಸರಿನ ನಾಲ್ಕು ಐಡಿ ಕಾರ್ಡ್, ಒಂದು ಏರ್ ಗನ್ , ಏರ್ ಗನ್ ಗೆ ಬಳಸುವ ನೂರಕ್ಕು ಹೆಚ್ಚು ಬುಲೆಟ್ಸ್, ಪೊಲೀಸರು ಬಳಸುವ ಹ್ಯಾಂಡ್ ಕಾಫ್, ಲಾಠಿ, ಹಿರಿಯ ಪೊಲೀಸ್ ಅಧಿಕಾರಿಗಳು ಬಳಸುವ ಪೊಲೀಸ್ ಬ್ಯಾಟನ್​​ನನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಕೇರಳ ಮೂಲದ ಪ್ರಮೋದ್, ಅನಂತ ಕೃಷ್ಣ, ದೀಪಲ್ ಮತ್ತು ಆದರ್ಶ್ ಎಂಬುವವರನ್ನು ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?