AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಣಕ್ಕಾಗಿ ಸಾಕು ಮಕ್ಕಳಿಂದಲೇ ಮಹಿಳೆ ಕೊಲೆಗೆ ಯತ್ನ

ಬೆಂಗಳೂರಿನ(Bengaluru) ಆರ್​ಎಂಸಿ ಯಾರ್ಡ್ ಮಾರ್ಕೆಟ್​ನಲ್ಲಿ ಹಣಕ್ಕಾಗಿ ಸಾಕು ಮಕ್ಕಳಿಂದಲೇ ಮಹಿಳೆ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಬಳಿಕ ಮನೆಯಲ್ಲಿದ್ದ 6 ಲಕ್ಷ ನಗದು, ಚಿನ್ನ ದರೋಡೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಈ ಕುರಿತು ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೆಂಗಳೂರಿನಲ್ಲಿ ಹಣಕ್ಕಾಗಿ ಸಾಕು ಮಕ್ಕಳಿಂದಲೇ ಮಹಿಳೆ ಕೊಲೆಗೆ ಯತ್ನ
ಆರೋಪಿಗಳು, ಹಲ್ಲೆಗೊಳಗಾದ ಅಣ್ಣಮ್ಮ
Jagadisha B
| Edited By: |

Updated on:Mar 29, 2024 | 3:59 PM

Share

ಬೆಂಗಳೂರು, ಮಾ.29: ಹಣಕ್ಕಾಗಿ ಸಾಕು ಮಕ್ಕಳಿಂದಲೇ ಮಹಿಳೆ ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರಿನ(Bengaluru) ಆರ್​ಎಂಸಿ ಯಾರ್ಡ್ ಮಾರ್ಕೆಟ್​ನಲ್ಲಿ ನಡೆದಿದೆ. ಅಣ್ಣಮ್ಮ (56) ಚಾಕು ಇರಿತಕ್ಕೊಳಗಾದ ಮಹಿಳೆ. ತನ್ನ ಅಕ್ಕನ ಮಕ್ಕಳಾದ ಸುಮಿತ್ರಾ ಹಾಗೂ ಮುನಿರಾಜು ಎಂಬುವವರನ್ನ ಇವರು ಸಾಕಿಕೊಂಡಿದ್ದರು. ಆರೋಪಿ ಮುನಿರಾಜು ಆರ್​ಎಂಸಿ ಯಾರ್ಡ್​ನಲ್ಲಿ ಕೆಲಸ ಮಾಡಿಕೊಂಡಿದ್ದ. ಆದರೆ, ಇಲ್ಲಿ ಸಂಬಳ ಕೊಡುತ್ತಿಲ್ಲ, ಕೊಡಿಸಿ ಎಂದು ಸುಮಿತ್ರಾ ಹಾಗೂ ಮುನಿರಾಜು ಅಣ್ಣಮ್ಮನನ್ನು  ಕರೆದೊಯ್ದಿದ್ದರು. ಈ ವೇಳೆ ಅಣ್ಣಮ್ಮಗೆ ಚಾಕು ಇರಿದಿರುವ ಮುನಿರಾಜು, ಬಳಿಕ ಮನೆಯಲ್ಲಿದ್ದ 6 ಲಕ್ಷ ನಗದು, ಚಿನ್ನ ದರೋಡೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಈ ಕುರಿತು ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೈಕ್​ಗೆ ಲಾರಿ ಡಿಕ್ಕಿ, ಅರಣ್ಯ ಇಲಾಖೆ ಸಿಬ್ಬಂದಿ ರಾಕೇಶ್(28) ಸಾವು

ಬೆಂಗಳೂರು ಗ್ರಾಮಾಂತರ: ಆನೇಕಲ್​ ಪಟ್ಟಣದ ಮಿರ್ಜಾ ರಸ್ತೆಯಲ್ಲಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಅರಣ್ಯ ಇಲಾಖೆ ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ರಾಕೇಶ್(28) ಮೃತ ರ್ದುದೈವಿ. ಮತ್ತೋರ್ವ ಅರಣ್ಯ ಇಲಾಖೆ ಸಿಬ್ಬಂದಿ ವಿನಯ್​ಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನು ಇವರು ಚಿರತೆ ಕಾರ್ಯಪಡೆಯಲ್ಲಿ ಕೆಲಸ ಮಾಡ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿಯಾಗಿದ್ದು, ಎಟಿಎಂಗೆ ಹೋಗಿ ಬರುವುದಾಗಿ ಬೈಕ್​​ನಲ್ಲಿ ತೆರಳಿದ್ದ ವೇಳೆ ಅಪಘಾತ ನಡೆದಿದೆ. ಈ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಅಕ್ರಮ ಮಣ್ಣು ಸಾಗಿಟ ಬಗ್ಗೆ ಪ್ರಶ್ನಿಸಿದ್ದಕ್ಕೆ ತಹಶೀಲ್ದಾರ್​ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನ: ದೂರು ದಾಖಲು

ಧಾರವಾಡದಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಹಣ ಪತ್ತೆ

ಧಾರವಾಡ: ಕೃಷಿ ವಿಶ್ವ ವಿದ್ಯಾಲಯ ಬಳಿಯ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.70 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಅಥಣಿಯಿಂದ ಧಾರವಾಡಕ್ಕೆ ಬೊಲೆರೊ ವಾಹನದಲ್ಲಿ ಹಣ ಸಾಗಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದ್ದು, ಈ ಕುರಿತು ಹಣ ಜಪ್ತಿ ಮಾಡಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Fri, 29 March 24

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ