AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮ, ಮಗನನ್ನ ಅಪಹರಿಸಿ ಕಿರುಕುಳ; ಇಬ್ಬರು ರೌಡಿಶೀಟರ್​ಗಳು ಸೇರಿ 9 ಆರೋಪಿಗಳ ಬಂಧನ

ಇತ್ತೀಚೆಗೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದ್ದು, ಇದೀಗ ಅಮ್ಮ, ಮಗನನ್ನು ಅಪಹರಿಸಿ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ಚಂದ್ರಾಲೇಔಟ್​​ ಪೊಲೀಸರು(Chandra Layout Police) ಇಬ್ಬರು ರೌಡಿಶೀಟರ್​ಗಳು ಸೇರಿ 9 ಆರೋಪಿಗಳನ್ನು ಬಂಧಿಸಿದ್ದಾರೆ.

ಅಮ್ಮ, ಮಗನನ್ನ ಅಪಹರಿಸಿ ಕಿರುಕುಳ; ಇಬ್ಬರು ರೌಡಿಶೀಟರ್​ಗಳು ಸೇರಿ 9 ಆರೋಪಿಗಳ ಬಂಧನ
ಅಮ್ಮ, ಮಗನನ್ನ ಅಪಹರಿಸಿ ಕಿರುಕುಳ; ಇಬ್ಬರು ರೌಡಿಶೀಟರ್​ಗಳು ಸೇರಿ 9 ಆರೋಪಿಗಳ ಬಂಧನ
ಕಿರಣ್ ಹನುಮಂತ್​ ಮಾದಾರ್
|

Updated on: Aug 18, 2024 | 9:51 PM

Share

ಬೆಂಗಳೂರು, ಆ.18: ಅಮ್ಮ, ಮಗನನ್ನು ಅಪಹರಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರಿನ ಚಂದ್ರಾಲೇಔಟ್​​ ಪೊಲೀಸರು(Chandra Layout Police) ಇಬ್ಬರು ರೌಡಿಶೀಟರ್​ಗಳು ಸೇರಿ 9 ಆರೋಪಿಗಳನ್ನು ಬಂಧಿಸಿದ್ದಾರೆ. ಆ.13 ರಂದು ಇಬ್ಬರನ್ನು ಕಿಡ್ನಾಪ್ ಮಾಡಿದ್ದ ರೌಡಿಶೀಟರ್ಸ್​ ಜೋಸೇಫ್ ಮತ್ತು ಶ್ರೀನಿವಾಸ್ ಅಲಿಯಾಸ್​ ಪಾಗಲ್ ಸೀನಾ, ನಂತರ ಪರಿಚಯಸ್ಥ ಪ್ರತಾಪ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಇರಿಸಿ ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಕಿಡ್ನ್ಯಾಪ್​ಗೆ ಕಾರಣವೇನು?

ವರುಣ್​ ಮತ್ತು ಆತನ ತಾಯಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು. ವರುಣ್ ಹಾಗೂ ಆತನ ತಾಯಿ ಇಬ್ಬರು ಸೇರಿ ಕಳ್ಳತನ ಮಾಡಿರುವ ವಿಚಾರ ಆರೋಪಿಗಳಿಗೆ ತಿಳಿದಿತ್ತು. ಹೀಗಾಗಿ ಈ ಆರೋಪಿಗಳು, ಕಳ್ಳತನ ಮಾಡಿರುವ 2 ಲಕ್ಷ ರೂ. ಹಣ ನೀಡುವಂತೆ ಅಮ್ಮ, ಮಗನಿಗೆ ಬೆದರಿಕೆ ಹಾಕಿದ್ದಾರೆ. ಆದರೂ ಹಣ ನೀಡದಿದ್ದಕ್ಕೆ ಕೋಪಗೊಂಡ ಬಂಧಿತ ಆರೋಪಿಗಳು ತಾಯಿ, ಮಗನನ್ನು ಅಪಹರಿಸಿ, ಮಹಿಳೆಯೊಬ್ಬರ ಮನೆಯಲ್ಲಿ ಕೂಡಿಹಾಕಿ ಕಿರುಕುಳ ನೀಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಅಶ್ಲೀಲ ಮೆಸೇಜ್​ ಮಾಡಿ ಕಿರುಕುಳ ಆರೋಪ; ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣು

ಪ್ರಕರಣ ಸಂಬಂಧ 9 ಆರೋಪಿಗಳ ಬಂಧನ

ಬಳಿಕ ಇಬ್ಬರ ಬಳಿ ಹಣ ಇಲ್ಲ ಎಂದು ಗೊತ್ತಾದಾಗ ಬಿಟ್ಟು ಕಳಿಸಿದ್ದಾರೆ. ನಂತರ ಮಹಿಳೆ ಚಂದ್ರಲೇಔಟ್ ಠಾಣೆಗೆ ದೂರು ನೀಡಿದರು. ಪ್ರಕರಣ ಸಂಬಂಧ ಜೋಸೆಫ್ (ರೌಡಿ ಶೀಟರ್), ಶ್ರೀನಿವಾಸ್ @ ಪಾಗಲ್ ಸೀನಾ (ರೌಡಿ ಶೀಟರ್), ಸೌಮ್ಯಾ, ಪ್ರತಾಪ್, ಜತಿನ್, ವಿಘ್ನೇಶ್, ಸೈಯದ್ ಶಹಬುದ್ದೀನ್, ಸ್ವಾತಿ, ಮಾದೇಶ ಸೇರಿ 9 ಆರೋಪಿಗಳನ್ನು ಬಂಧಿಸಲಾಗಿದೆ. ಶಹಬುದ್ದೀನ್ ಮತ್ತು ವಿಘ್ನೇಶ್ ವಿರುದ್ಧ ಈ ಹಿಂದೆ ಹಲ್ಲೆ ಪ್ರಕರಣಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ