AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮ, ಮಗನನ್ನ ಅಪಹರಿಸಿ ಕಿರುಕುಳ; ಇಬ್ಬರು ರೌಡಿಶೀಟರ್​ಗಳು ಸೇರಿ 9 ಆರೋಪಿಗಳ ಬಂಧನ

ಇತ್ತೀಚೆಗೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದ್ದು, ಇದೀಗ ಅಮ್ಮ, ಮಗನನ್ನು ಅಪಹರಿಸಿ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ಚಂದ್ರಾಲೇಔಟ್​​ ಪೊಲೀಸರು(Chandra Layout Police) ಇಬ್ಬರು ರೌಡಿಶೀಟರ್​ಗಳು ಸೇರಿ 9 ಆರೋಪಿಗಳನ್ನು ಬಂಧಿಸಿದ್ದಾರೆ.

ಅಮ್ಮ, ಮಗನನ್ನ ಅಪಹರಿಸಿ ಕಿರುಕುಳ; ಇಬ್ಬರು ರೌಡಿಶೀಟರ್​ಗಳು ಸೇರಿ 9 ಆರೋಪಿಗಳ ಬಂಧನ
ಅಮ್ಮ, ಮಗನನ್ನ ಅಪಹರಿಸಿ ಕಿರುಕುಳ; ಇಬ್ಬರು ರೌಡಿಶೀಟರ್​ಗಳು ಸೇರಿ 9 ಆರೋಪಿಗಳ ಬಂಧನ
ಕಿರಣ್ ಹನುಮಂತ್​ ಮಾದಾರ್
|

Updated on: Aug 18, 2024 | 9:51 PM

Share

ಬೆಂಗಳೂರು, ಆ.18: ಅಮ್ಮ, ಮಗನನ್ನು ಅಪಹರಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರಿನ ಚಂದ್ರಾಲೇಔಟ್​​ ಪೊಲೀಸರು(Chandra Layout Police) ಇಬ್ಬರು ರೌಡಿಶೀಟರ್​ಗಳು ಸೇರಿ 9 ಆರೋಪಿಗಳನ್ನು ಬಂಧಿಸಿದ್ದಾರೆ. ಆ.13 ರಂದು ಇಬ್ಬರನ್ನು ಕಿಡ್ನಾಪ್ ಮಾಡಿದ್ದ ರೌಡಿಶೀಟರ್ಸ್​ ಜೋಸೇಫ್ ಮತ್ತು ಶ್ರೀನಿವಾಸ್ ಅಲಿಯಾಸ್​ ಪಾಗಲ್ ಸೀನಾ, ನಂತರ ಪರಿಚಯಸ್ಥ ಪ್ರತಾಪ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಇರಿಸಿ ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಕಿಡ್ನ್ಯಾಪ್​ಗೆ ಕಾರಣವೇನು?

ವರುಣ್​ ಮತ್ತು ಆತನ ತಾಯಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು. ವರುಣ್ ಹಾಗೂ ಆತನ ತಾಯಿ ಇಬ್ಬರು ಸೇರಿ ಕಳ್ಳತನ ಮಾಡಿರುವ ವಿಚಾರ ಆರೋಪಿಗಳಿಗೆ ತಿಳಿದಿತ್ತು. ಹೀಗಾಗಿ ಈ ಆರೋಪಿಗಳು, ಕಳ್ಳತನ ಮಾಡಿರುವ 2 ಲಕ್ಷ ರೂ. ಹಣ ನೀಡುವಂತೆ ಅಮ್ಮ, ಮಗನಿಗೆ ಬೆದರಿಕೆ ಹಾಕಿದ್ದಾರೆ. ಆದರೂ ಹಣ ನೀಡದಿದ್ದಕ್ಕೆ ಕೋಪಗೊಂಡ ಬಂಧಿತ ಆರೋಪಿಗಳು ತಾಯಿ, ಮಗನನ್ನು ಅಪಹರಿಸಿ, ಮಹಿಳೆಯೊಬ್ಬರ ಮನೆಯಲ್ಲಿ ಕೂಡಿಹಾಕಿ ಕಿರುಕುಳ ನೀಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಅಶ್ಲೀಲ ಮೆಸೇಜ್​ ಮಾಡಿ ಕಿರುಕುಳ ಆರೋಪ; ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣು

ಪ್ರಕರಣ ಸಂಬಂಧ 9 ಆರೋಪಿಗಳ ಬಂಧನ

ಬಳಿಕ ಇಬ್ಬರ ಬಳಿ ಹಣ ಇಲ್ಲ ಎಂದು ಗೊತ್ತಾದಾಗ ಬಿಟ್ಟು ಕಳಿಸಿದ್ದಾರೆ. ನಂತರ ಮಹಿಳೆ ಚಂದ್ರಲೇಔಟ್ ಠಾಣೆಗೆ ದೂರು ನೀಡಿದರು. ಪ್ರಕರಣ ಸಂಬಂಧ ಜೋಸೆಫ್ (ರೌಡಿ ಶೀಟರ್), ಶ್ರೀನಿವಾಸ್ @ ಪಾಗಲ್ ಸೀನಾ (ರೌಡಿ ಶೀಟರ್), ಸೌಮ್ಯಾ, ಪ್ರತಾಪ್, ಜತಿನ್, ವಿಘ್ನೇಶ್, ಸೈಯದ್ ಶಹಬುದ್ದೀನ್, ಸ್ವಾತಿ, ಮಾದೇಶ ಸೇರಿ 9 ಆರೋಪಿಗಳನ್ನು ಬಂಧಿಸಲಾಗಿದೆ. ಶಹಬುದ್ದೀನ್ ಮತ್ತು ವಿಘ್ನೇಶ್ ವಿರುದ್ಧ ಈ ಹಿಂದೆ ಹಲ್ಲೆ ಪ್ರಕರಣಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ