AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮ, ಮಗನನ್ನ ಅಪಹರಿಸಿ ಕಿರುಕುಳ; ಇಬ್ಬರು ರೌಡಿಶೀಟರ್​ಗಳು ಸೇರಿ 9 ಆರೋಪಿಗಳ ಬಂಧನ

ಇತ್ತೀಚೆಗೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದ್ದು, ಇದೀಗ ಅಮ್ಮ, ಮಗನನ್ನು ಅಪಹರಿಸಿ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ಚಂದ್ರಾಲೇಔಟ್​​ ಪೊಲೀಸರು(Chandra Layout Police) ಇಬ್ಬರು ರೌಡಿಶೀಟರ್​ಗಳು ಸೇರಿ 9 ಆರೋಪಿಗಳನ್ನು ಬಂಧಿಸಿದ್ದಾರೆ.

ಅಮ್ಮ, ಮಗನನ್ನ ಅಪಹರಿಸಿ ಕಿರುಕುಳ; ಇಬ್ಬರು ರೌಡಿಶೀಟರ್​ಗಳು ಸೇರಿ 9 ಆರೋಪಿಗಳ ಬಂಧನ
ಅಮ್ಮ, ಮಗನನ್ನ ಅಪಹರಿಸಿ ಕಿರುಕುಳ; ಇಬ್ಬರು ರೌಡಿಶೀಟರ್​ಗಳು ಸೇರಿ 9 ಆರೋಪಿಗಳ ಬಂಧನ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Aug 18, 2024 | 9:51 PM

Share

ಬೆಂಗಳೂರು, ಆ.18: ಅಮ್ಮ, ಮಗನನ್ನು ಅಪಹರಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರಿನ ಚಂದ್ರಾಲೇಔಟ್​​ ಪೊಲೀಸರು(Chandra Layout Police) ಇಬ್ಬರು ರೌಡಿಶೀಟರ್​ಗಳು ಸೇರಿ 9 ಆರೋಪಿಗಳನ್ನು ಬಂಧಿಸಿದ್ದಾರೆ. ಆ.13 ರಂದು ಇಬ್ಬರನ್ನು ಕಿಡ್ನಾಪ್ ಮಾಡಿದ್ದ ರೌಡಿಶೀಟರ್ಸ್​ ಜೋಸೇಫ್ ಮತ್ತು ಶ್ರೀನಿವಾಸ್ ಅಲಿಯಾಸ್​ ಪಾಗಲ್ ಸೀನಾ, ನಂತರ ಪರಿಚಯಸ್ಥ ಪ್ರತಾಪ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಇರಿಸಿ ದೈಹಿಕ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಕಿಡ್ನ್ಯಾಪ್​ಗೆ ಕಾರಣವೇನು?

ವರುಣ್​ ಮತ್ತು ಆತನ ತಾಯಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು. ವರುಣ್ ಹಾಗೂ ಆತನ ತಾಯಿ ಇಬ್ಬರು ಸೇರಿ ಕಳ್ಳತನ ಮಾಡಿರುವ ವಿಚಾರ ಆರೋಪಿಗಳಿಗೆ ತಿಳಿದಿತ್ತು. ಹೀಗಾಗಿ ಈ ಆರೋಪಿಗಳು, ಕಳ್ಳತನ ಮಾಡಿರುವ 2 ಲಕ್ಷ ರೂ. ಹಣ ನೀಡುವಂತೆ ಅಮ್ಮ, ಮಗನಿಗೆ ಬೆದರಿಕೆ ಹಾಕಿದ್ದಾರೆ. ಆದರೂ ಹಣ ನೀಡದಿದ್ದಕ್ಕೆ ಕೋಪಗೊಂಡ ಬಂಧಿತ ಆರೋಪಿಗಳು ತಾಯಿ, ಮಗನನ್ನು ಅಪಹರಿಸಿ, ಮಹಿಳೆಯೊಬ್ಬರ ಮನೆಯಲ್ಲಿ ಕೂಡಿಹಾಕಿ ಕಿರುಕುಳ ನೀಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಅಶ್ಲೀಲ ಮೆಸೇಜ್​ ಮಾಡಿ ಕಿರುಕುಳ ಆರೋಪ; ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣು

ಪ್ರಕರಣ ಸಂಬಂಧ 9 ಆರೋಪಿಗಳ ಬಂಧನ

ಬಳಿಕ ಇಬ್ಬರ ಬಳಿ ಹಣ ಇಲ್ಲ ಎಂದು ಗೊತ್ತಾದಾಗ ಬಿಟ್ಟು ಕಳಿಸಿದ್ದಾರೆ. ನಂತರ ಮಹಿಳೆ ಚಂದ್ರಲೇಔಟ್ ಠಾಣೆಗೆ ದೂರು ನೀಡಿದರು. ಪ್ರಕರಣ ಸಂಬಂಧ ಜೋಸೆಫ್ (ರೌಡಿ ಶೀಟರ್), ಶ್ರೀನಿವಾಸ್ @ ಪಾಗಲ್ ಸೀನಾ (ರೌಡಿ ಶೀಟರ್), ಸೌಮ್ಯಾ, ಪ್ರತಾಪ್, ಜತಿನ್, ವಿಘ್ನೇಶ್, ಸೈಯದ್ ಶಹಬುದ್ದೀನ್, ಸ್ವಾತಿ, ಮಾದೇಶ ಸೇರಿ 9 ಆರೋಪಿಗಳನ್ನು ಬಂಧಿಸಲಾಗಿದೆ. ಶಹಬುದ್ದೀನ್ ಮತ್ತು ವಿಘ್ನೇಶ್ ವಿರುದ್ಧ ಈ ಹಿಂದೆ ಹಲ್ಲೆ ಪ್ರಕರಣಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ