AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ರಮ್ಮಿ ಗೀಳು; ಸಾಲ ತೀರಿಸಲಾಗದೇ ವಿಡಿಯೋ ಮಾಡಿ ಮನೆಬಿಟ್ಟು ಹೋದ ಬ್ಯಾಂಕ್ ಉದ್ಯೋಗಿ

ಆನ್​ಲೈನ್​ ಗೇಮ್​ ವ್ಯಾಮೋಹಕ್ಕೆ ಸಿಲುಕಿ ಅದೆಷ್ಟೋ ಜನರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಅದರಂತೆ ಇದೀಗ ಬೆಂಗಳೂರಿನ ಮುದ್ದಿನಪಾಳ್ಯ(Muddinapalya)ದ ಬ್ಯಾಂಕ್ ಉದ್ಯೋಗಿಯೊಬ್ಬರು ಆನ್​ಲೈನ್ ರಮ್ಮಿ ಗೀಳಿಗೆ ಬಿದ್ದು 20 ಲಕ್ಷ ಕಳೆದುಕೊಂಡು, ಸಾಲ ತೀರಿಸಲಾಗದೆ ಮನೆಬಿಟ್ಟು ಹೋಗಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಆನ್​ಲೈನ್ ರಮ್ಮಿ ಗೀಳು; ಸಾಲ ತೀರಿಸಲಾಗದೇ ವಿಡಿಯೋ ಮಾಡಿ ಮನೆಬಿಟ್ಟು ಹೋದ ಬ್ಯಾಂಕ್ ಉದ್ಯೋಗಿ
ಆನ್​ಲೈನ್ ರಮ್ಮಿ ಗೀಳು
Shivaprasad B
| Edited By: |

Updated on:Oct 11, 2024 | 7:31 PM

Share

ಬೆಂಗಳೂರು, ಅ.11: ಆನ್​ಲೈನ್ ರಮ್ಮಿ ಗೀಳಿಗೆ ಬಿದ್ದು 20 ಲಕ್ಷ ಕಳೆದುಕೊಂಡ ಬ್ಯಾಂಕ್ ಉದ್ಯೋಗಿಯೊಬ್ಬರು ಸಾಲ ತೀರಿಸಲಾಗದೇ ಮನೆಬಿಟ್ಟು ಹೋದ ಘಟನೆ ಬೆಂಗಳೂರಿನ ಮುದ್ದಿನಪಾಳ್ಯ(Muddinapalya)ದಲ್ಲಿ ನಡೆದಿದೆ. ಭರತ್, ನಾಪತ್ತೆಯಾದವನು. ಇತ ಆನ್​ಲೈನ್ ರಮ್ಮಿ ಆಡಲು ಬ್ಯಾಂಕ್​ನಿಂದ 20 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರು. ಇಎಮ್​ಐ(EMI) ಕಟ್ಟಲು ಸಾಧ್ಯವಾಗುತ್ತಿಲ್ಲವೆಂದು ವಿಡಿಯೋ ಮಾಡಿ ನಾಪತ್ತೆಯಾಗಿದ್ದಾರೆ.

ವಿಡಿಯೋದಲ್ಲಿ ಏನಿದೆ?

ಹೌದು, ಸೆಲ್ಪೀ ವಿಡಿಯೋ ಮಾಡಿರುವ ಭರತ್​ ‘ನಾನು ಜೀವನದಲ್ಲಿ ಸೋತಿದ್ದೇನೆ. ನನ್ನನ್ನು ಹುಡುಕಬೇಡಿ. ನಾನು ಮನೆಬಿಟ್ಟು ಹೋಗುತ್ತಿದ್ದೇನೆಂದು ವಿಡಿಯೋ ಮಾಡಿ, ಮೊಬೈಲ್ ಮನೆಯಲ್ಲೇ ಬಿಟ್ಟು ಭರತ್ ತೆರಳಿದ್ದಾನೆ. ಸದ್ಯ ಭರತ್ ಪತ್ನಿ ಚೈತ್ರಾ ಎಂಬುವವರು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ದೂರು ನೀಡಿದ್ದು, ಹೇಗಾದರೂ ನನ್ನ ಗಂಡನನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ: ಆನ್​ಲೈನ್​ ಗೇಮ್​ ವ್ಯಾಮೋಹಕ್ಕೆ ಸಿಲುಕಿ ಯುವಕ ಆತ್ಮಹತ್ಯೆಗೆ ಶರಣು

ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಶಿವಮೊಗ್ಗ: ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ತಾಲೂಕಿನ ಮುದುವಾಲದಲ್ಲಿ ಬುಧವಾರ(ಅ.09) ಚಿನ್ನಿಕಟ್ಟೆ ಗ್ರಾಮದ ಇಕ್ಬಾಲ್ (40) ಎಂಬುವವರು ಮಳೆಯಿಂದಾಗಿ ರಭಸವಾಗಿ ಹರಿಯುತ್ತಿದ್ದ ಕೊಂಡಜ್ಜಿ ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿಕೊಂಡು ಹೋಗಿದ್ದರು. ಮೃತದೇಹಕ್ಕಾಗಿ ಹಳ್ಳದಲ್ಲಿ ಶೋಧ ಕಾರ್ಯ ನಡೆಸಿದ್ದ ಅಗ್ನಿಶಾಮಕ ಸಿಬ್ಬಂದಿಗೆ, ಇದೀಗ ಮೂರು ದಿನದ ಬಳಿಕ ಹಳ್ಳದ ಒಂದು ಕಿ.ಮೀ. ದೂರದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:16 pm, Fri, 11 October 24

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ