Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ; ಆನೆ ದಂತ ಚೋರರ ಬಂಧನ

ಅರಣ್ಯ ಅಧಿಕಾರಿಗಳು ಇಂದು(ಶನಿವಾರ) ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಬೆಂಗಳೂರಿನ ರಾಜನುಕುಂಟೆ ಏರ್ಪೋಟ್ ರಸ್ತೆ ಸಾದರಹಳ್ಳಿ ಬಳಿ ಇಬ್ಬರು ಆನೆ ದಂತ ಚೋರರನ್ನು ಬಂಧಿಸಿದ್ದಾರೆ. ಬಂಧಿತರಿಂದ ಬೆಲೆ ಬಾಳುವ 8.5 ಮತ್ತು 9 ಕೆ.ಜಿ ಎರಡು ಆನೆ ದಂತವನ್ನು ಜಪ್ತಿ ಮಾಡಲಾಗಿದ್ದು, ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು: ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ; ಆನೆ ದಂತ ಚೋರರ ಬಂಧನ
ಬೆಂಗಳೂರಿನಲ್ಲಿ ಆನೆ ದಂತ ಚೋರರ ಬಂಧನ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Aug 17, 2024 | 7:04 PM

ಬೆಂಗಳೂರು, ಆ.17: ಅರಣ್ಯ ಇಲಾಖೆ(Forest Department)ಯ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿ ಇಬ್ಬರು ಆನೆ ದಂತ ಚೋರರನ್ನು ಬಂಧಿಸಿದ್ದಾರೆ. ರಾಜನುಕುಂಟೆ ಏರ್ಪೋಟ್ ರಸ್ತೆ ಸಾದರಹಳ್ಳಿ(Sadarahalli) ಬಳಿ ಆರೋಪಿಗಳಾದ ಮೋಹನ್, ಆನಂದ್ ಹಾಗೂ ವಿನೋದ್​ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಬೆಲೆ ಬಾಳುವ 8.5 ಮತ್ತು 9 ಕೆ.ಜಿ ಎರಡು ಆನೆ ದಂತವನ್ನು ಜೊತೆಗೆ ಕೃತ್ಯಕ್ಕೆ ಬಳಸಲಾದ ಕಾರೊಂದನ್ನು ವಶಕ್ಕೆ ಪಡೆಯಲಾಗಿದೆ.

ಘಟನೆ ವಿವರ

ಇಂದು(ಶನಿವಾರ) ಬೆಳಗ್ಗೆ 10 ಗಂಟೆಯ ಸುಮಾರಿಗೆ ಬೆಂಗಳೂರಿಗೆ KA-53-D-9181 ವಾಹನ ಸಂಖ್ಯೆಯ ಕಾರೊಂದರಲ್ಲಿ ಅತ್ಯಂತ ಬೆಲೆ-ಬಾಳುವ ಎರಡು ಆನೆಯ ದಂತಗಳನ್ನು ಮಾರಾಟಕ್ಕಾಗಿ ತೆಗೆದುಕೊಂಡು ಹೋಗುತ್ತಿರುವ ಕುರಿತು ಬೆಂಗಳೂರು ನಗರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಖಚಿತ ಮಾಹಿತಿ ಬರುತ್ತದೆ. ಕೂಡಲೇ ಕಾರ್ಯಪ್ರವೃತ್ತರಾಗಿ, ಬೆಂಗಳೂರು ಮತ್ತು ಯಲಹಂಕ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿಕೊಂಡು ಕಾಯುತ್ತಿದ್ದ ಸಮಯದಲ್ಲಿ ಬೆಂಗಳೂರು ವಲಯ ವ್ಯಾಪ್ತಿಯಲ್ಲಿ ವಾಹನವನ್ನ ತಡೆದು, ಪರೀಕ್ಷಿಸಲಾಗುತ್ತದೆ. ಈ ವೇಳೆ ವಾಹನದಲ್ಲಿ ಎರಡು ಆನೆ ದಂತಗಳು ಕಂಡುಬರುತ್ತವೆ. ಕೂಡಲೇ ಕೃತ್ಯದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳಾದ ಮೋಹನ್​, ಆನಂದ್​ ಹಾಗೂ ವಿನೋದ್​ ಎಂಬುವವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಪೊಲೀಸರಿಗೆ ಸವಾಲ್ ಹಾಕಿ ಕಳ್ಳತನ ಮಾಡುತ್ತಿದ್ದವ ಅರೆಸ್ಟ್: ಕಾಡಿನ ಬಂಡೆ ಕೆಳಗೆ ಚಿನ್ನಾಭರಣ ಹೂತಿಟ್ಟಿದ್ದ ಚಿನ್ನ ವಶಕ್ಕೆ

ವರಮಹಾಲಕ್ಷ್ಮಿ ಹಬ್ಬದ ದಿನ ರಾತ್ರಿಯೇ ದೇವಿ ಗುಡಿಗೆ ಕನ್ನ

ಕೊಡಗು: ವರಮಹಾಲಕ್ಷ್ಮಿ ಹಬ್ಬದ ದಿನ ರಾತ್ರಿಯೇ ದೇವಿ ಗುಡಿಗೆ ಕಳ್ಳತನ ಮಾಡಿದ್ದಾರೆ. ಮಡಿಕೇರಿಯ ಕೋಟೆ ಮಾರಿಯಮ್ಮ ದೇವಾಲಯದ ಬಾಗಿಲು ಮುರಿದು ಒಳನುಗ್ಗಿದ ಚೋರರು, ದೇವಸ್ಥಾನವು ಸಿಸಿ ಕ್ಯಾಮರ ತಿರುಗಿಸಿ, ಮೂರು ಲಕ್ಷ ರೂ. ಗೂ ಅಧಿಕ ಮೌಲ್ಯದ ದೇವರ ಕೀರಿಟ, ಚಿನ್ನಾಭರಣ, ಭಂಡಾರ ಹೊತ್ತೊಯ್ದಿದ್ದಾರೆ. ಸ್ಥಳಕ್ಕೆ ಮಡಿಕೇರಿ ನಗರ ಠಾಣೆ ಪೊಲೀಸರು, ಬೆರಳಚ್ಚು, ಶ್ವಾನದಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:58 pm, Sat, 17 August 24

‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್