ಬೆಂಗಳೂರಿನಲ್ಲಿ ಈ ವಾರವೂ ತರಕಾರಿ, ಹಣ್ಣುಗಳ ಬೆಲೆ ಏರಿಕೆ, ಯಾವುದಕ್ಕೆ ಎಷ್ಟಿದೆ ದರ? ಇಲ್ಲಿದೆ ವಿವರ

Bangalore vegetable prices; ಬೆಂಗಳೂರಿನಲ್ಲಿ ತರಕಾರಿ ದರ ಮತ್ತೆ ದುಬಾರಿಯಾಗಿದೆ. ಕಳೆದ ವಾರಕ್ಕೆ ಹೋಲಿಸಿದರೆ ಇದೀಗ ಮತ್ತಷ್ಟು ತುಟ್ಟಿಯಾಗಿದೆ. ಬೀನ್ಸ್ ಹಾಗೂ ಬಟಾಣಿ ಬೆಲೆಯಂತೂ ದಾಖಲೆ ಬರೆಯುತ್ತಿವೆ. ಜತೆಗೆ ಹಣ್ಣುಗಳ ಬೆಲೆಯೂ ಏರಿಕೆಯಾಗಿದೆ. ಯಾವ ತರಕಾರಿಗೆ ಎಷ್ಟಿದೆ ಬೆಲೆ? ಯಾವ ಹಣ್ಣಿಗೆ ಎಷ್ಟಿದೆ ದರ ಎಂಬ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ಈ ವಾರವೂ ತರಕಾರಿ, ಹಣ್ಣುಗಳ ಬೆಲೆ ಏರಿಕೆ, ಯಾವುದಕ್ಕೆ ಎಷ್ಟಿದೆ ದರ? ಇಲ್ಲಿದೆ ವಿವರ
ಬೆಂಗಳೂರಿನಲ್ಲಿ ಈ ವಾರವೂ ತರಕಾರಿ, ಹಣ್ಣುಗಳ ಬೆಲೆ ಏರಿಕೆ
Follow us
| Updated By: ಗಣಪತಿ ಶರ್ಮ

Updated on:May 14, 2024 | 12:38 PM

ಬೆಂಗಳೂರು, ಮೇ 14: ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ (Bengaluru Rains) ನಿಜ. ಆದರೆ, ಅದಕ್ಕೂ ಮುನ್ನ ಬಿಸಿಲಿನ ಪ್ರಮಾಣ ಸಿಕ್ಕಾಪಟ್ಟೆ ಜಾಸ್ತಿಯಾಗಿತ್ತು.‌ ಇದರ ಪರಿಣಾಮ ಈ ವಾರ ಕೂಡ ತರಕಾರಿಗಳ‌ ಬೆಲೆ‌ (Vegetable Price) ಏರಿಕೆಯಾಗಿದ್ದು,‌ ಕಳೆದ ವಾರಕ್ಕೆ‌‌ ಹೋಲಿಕೆ‌ ಮಾಡಿದರೆ ಹೆಚ್ಚು ದುಬಾರಿಯಾಗಿದೆ. ಕಳೆದ ವಾರಕ್ಕೆ ಹೋಲಿಕೆ‌ ಮಾಡಿದರೆ ಪ್ರತಿ ತರಕಾರಿ ದರ ಕೆಜಿಗೆ ಸುಮಾರು 20 ರೂಪಾಯಿಯಷ್ಟು ಏರಿಕೆಯಾಗಿದೆ.

ಬಿಸಿಲಿನ ಪ್ರಮಾಣ ಹೆಚ್ಚಾಗಿದ್ದರಿಂದ ತರಕಾರಿಗಳ ಪೂರೈಕೆ ಕಡಿಮೆಯಾಗಿದೆ. ಹೀಗಾಗಿ ಬರುವ ಅಲ್ಪ ತರಕಾರಿಗಳಿಗೆ ವ್ಯಾಪಾರಿಗಳು ಹೆಚ್ಚಿನ ಬೆಲೆ ನಿಗದಿ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಸರಿಯಾಗಿ ಮಳೆಯಾಗದಿದ್ದರೆ ತರಕಾರಿಗಳ‌ ಬೆಲೆ‌ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.‌

ಯಾವ ತರಕಾರಿಗೆ ಎಷ್ಟಿದೆ ದರ?

ತರಕಾರಿ – ಬೆಲೆ (ಕೆಜಿಗೆ ರೂ.ಗಳಲ್ಲಿ)

  • ಕ್ಯಾರೇಟ್ – 95
  • ಬೀನ್ಸ್ – 220
  • ನವಿಲುಕೋಸು – 80
  • ಬದನೆಕಾಯಿ –  70
  • ದಪ್ಪ ಮೆಣಸಿನಕಾಯಿ – 80
  • ಬಟಾಣಿ – 200
  • ಬೆಂಡೆಕಾಯಿ – 80
  • ಟೊಮೆಟೋ – 35
  • ಆಲೂಗೆಡ್ಡೆ- 49
  • ಹಾಗಲಕಾಯಿ – 80
  • ಸೋರೆಕಾಯಿ – 52
  • ಬೆಳ್ಳುಳ್ಳಿ – 320
  • ಶುಂಠಿ – 195
  • ಪಡವಲಕಾಯಿ – 47
  • ಗೋರಿಕಾಯಿ – 64
  • ಹಸಿರುಮೆಣಸಿಕಾಯಿ – 110
  • ಬಿಟ್ರೋಟ್ – 46
  • ಈರುಳ್ಳಿ – 40 ಕೆಜಿಗೆ

ಇದು ಸೋಮವಾರ ಮಾರಾಟವಾದ ತರಕಾರಿಗಳ ಬೆಲೆ‌. ಕಳೆದ ವಾರ ಸೌತೆಕಾಯಿ ಹಾಗೂ ನಿಂಬೆಹಣ್ಣು‌ ಬೆಲೆ ಏರಿಕೆಯಾಗಿತ್ತು.‌ ಬೇರೆ ತರಕಾರಿಗಳ ಬೆಲೆ 60 ರೂ. ಒಳಗೆಯೇ ಇತ್ತು. ಆದರೆ ಈ ವಾರ ಬೀನ್ಸ್, ಕ್ಯಾರೇಟ್, ಬದನೆಕಾಯಿ, ಹಸಿರುಮೆಣಸಿನಕಾಯಿ, ಟೋಮಾಟೋ, ಬಟಾಣಿ, ಬೆಳ್ಳುಳ್ಳಿ ಸತತವಾಗಿ ಏರಿಕೆಯಾಗುತ್ತಿದೆ. ಸದ್ಯ ಒಂದು ವಾರದಿಂದ ಮಳೆಯಾಗುತ್ತಿದೆ. ಮಳೆ ಬಂದರೆ ಟೋಮೆಟೋ ಹಾಗೂ ಈರುಳ್ಳಿ ಬೆಲೆ ಏರಿಕೆಯಾಗುತ್ತದೆ. ಮಳೆ ಬಂದಿಲ್ಲ ಅಂದರೆ ತರಕಾರಿಗಳ ಬೆಲೆ‌ ಏರಿಕೆಯಾಗುತ್ತೆ. ಮುಂದಿನವಾರ ತರಕಾರಿಗಳ ಬೆಲೆ ಕೊಂಚ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ವ್ಯಾಪಾರಸ್ಥರು ಹೇಳಿದ್ದಾರೆ.

ಬೀನ್ಸ್ ಬೆಲೆ ಅಂತೂ 200 ರೂ. ಗಡಿದಾಟಿದೆ. ಈ ಮಧ್ಯೆ ಸೌತೆಕಾಯಿ ಹಾಗೂ ಬಿಂಬೆಹಣ್ಣಿನ ಬೆಲೆ ಕೂಡ ತುಂಬಾ ಜಾಸ್ತಿಯಾಗಿದೆ.

ಹಣ್ಣುಗಳೂ ದುಬಾರಿ

ತರಕಾರಿಗಳ‌ ಬೆಲೆ ಅಷ್ಟೇ ಅಲ್ಲದೆ ಹಣ್ಣುಗಳ ಬೆಲೆ ಕೂಡ ಈ ವಾರ ಏರಿಕೆಯಾಗಿದೆ. ಜನರಿಂದ ಹಣ್ಣುಗಳಿಗೆ ಹೆಚ್ಚು ಬೇಡಿಕೆ ಬರುತ್ತಿರುವ ಬೆನ್ನಲ್ಲೇ, ದರ ದುಬಾರಿಯಾಗಿದೆ.

ಹಣ್ಣುಗಳ ದರ ಕೆಜಿಗೆ ರೂ.ಗಳಲ್ಲಿ

  • ಸಪೋಟ- 60 – 70
  • ಸೇಬು – 100 – 200
  • ಮಾವಿನ ಹಣ್ಣು – 100 – 150
  • ಕಿತ್ತಳೆ ಹಣ್ಣು – 100 – 180
  • ದ್ರಾಕ್ಷಿ – 60 – 80
  • ಮರಸೇಬು – 190 – 200
  • ದಾಳಿಂಬೆ – 100 – 150
  • ಕಲ್ಲಂಗಡಿ – 40 – 50
  • ಬಾಳೆಹಣ್ಣು – 30 – 40
  • ಅನಾನಸ್ – 80 – 80
  • ಆಸ್ಟ್ರೇಲಿಯಾ ಗ್ರೇಪ್ಸ್ – 200 – 150

ಇದನ್ನೂ ಓದಿ: ಮಂಗಳೂರು, ಉಡುಪಿಯಲ್ಲಿ 60 ರೂ. ತಲುಪಿದ ಎಳನೀರು ದರ: ಪೂರೈಕೆ ಕೊರತೆಯಿಂದ ವ್ಯಾಪಾರಿಗಳು ಕಂಗಾಲು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:16 am, Tue, 14 May 24

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ