ಬೆಂಗಳೂರಿನಲ್ಲಿ ಅ.17 ರವರೆಗೆ, ರಾಜ್ಯದ ಹಲವೆಡೆ ಮುಂದಿನ 7 ದಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ಬೆಂಗಳೂರಿ(Bengaluru)ನಲ್ಲಿ ಅ.17 ರವರೆಗೆ ಮಳೆ (Rain) ಅಲರ್ಟ್ ಘೋಷಿಸಲಾಗಿದ್ದು, ಇದರ ಬೆನ್ನಲ್ಲೇ ಇಂದು ಮಧ್ಯಾಹ್ನದಿಂದಲೇ ನಗರದ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ. ಜೊತೆಗೆ ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಅ.17 ರವರೆಗೆ, ರಾಜ್ಯದ ಹಲವೆಡೆ ಮುಂದಿನ 7 ದಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ
ಬೆಂಗಳೂರಿನಲ್ಲಿ ಅ.17 ರವರೆಗೆ, ರಾಜ್ಯದ ಹಲವೆಡೆ ಮುಂದಿನ 7 ದಿನ ಮಳೆ ಸಾಧ್ಯತೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 12, 2024 | 4:45 PM

ಬೆಂಗಳೂರು, ಅ.12: ರಾಜ್ಯ ರಾಜಧಾನಿ ಬೆಂಗಳೂರು(Bengaluru) ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ (Rain) ಅಲರ್ಟ್ ಘೋಷಿಸಲಾಗಿದ್ದು, ಇದರ ಬೆನ್ನಲ್ಲೇ ಮಧ್ಯಾಹ್ನದಿಂದಲೇ ನಗರದ ರಿಚ್​ಮಂಡ್​​ ವೃತ್ತ, ಶಾಂತಿನಗರ, ಆಡುಗೋಡಿ, K.R.ಮಾರ್ಕೆಟ್, ಕಾರ್ಪೊರೇಷನ್​ ಸರ್ಕಲ್​, ಮೆಜೆಸ್ಟಿಕ್​ ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ. ಜೊತೆಗೆ ಇಂದಿನಿಂದ ಅಕ್ಟೋಬರ್ 17ರ ವರೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ ಎಸ್ ಪಾಟೀಲ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಹವಾಮಾನ ಇಲಾಖೆ ತಜ್ಞ ಸಿಎಸ್ ಪಾಟೀಲ್, ‘ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದಿದ್ದಾರೆ. ಇನ್ನು ಹಾವೇರಿ 17 ಸೆ.ಮೀ, ಇಲಕಲ್ 7 ಸೆ.ಮೀ, ಶಿವಮೊಗ್ಗ 10 ಸೆ.ಮೀ ಮಳೆಯಾಗಿದೆ. ಪೂರ್ವ ಅರಬ್ಬೀ ಸಮುದ್ರ ತೀರದಲ್ಲಿ ತೀವ್ರವಾಗಿ ವಾಯುಭಾರ ಕುಸಿತವಾಗಿದ್ದು, 5.8 ಕಿ.ಮೀ ಎತ್ತರದ ವರೆಗೆ ಗಾಳಿ ಪರಿಚಲನೆ ಇದೆ. ಬಂಗಾಲ ಉಪಸಾಗರದ ಆಗ್ನೇಯ ಭಾಗದಲ್ಲೂ ಗಾಳಿಯ ಪರಿಚಲನೆ 5.8 ಎತ್ತರವಿದೆ. ಪರಿಣಾಮ ಅಕ್ಟೋಬರ್ 14ರಂದು ತೀವ್ರವಾಗಿ ವಾಯುಭಾರ ಕುಸಿತ ಸಾಧ್ಯತೆ ಇದೆ.

ಇದನ್ನೂ ಓದಿ:Karnataka Rains: ಕರ್ನಾಟಕದ ಈ 16 ಜಿಲ್ಲೆಗಳಲ್ಲಿ ಅ.15ರವರೆಗೆ ವಿಪರೀತ ಮಳೆ

ಈ ಹಿನ್ನಲೆ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅ. 15ರ ವರೆಗೆ ಹಲವು ಕಡೆ ಮಳೆ ಸಾಧ್ಯತೆಯಿದೆ. ಅ.16ರಂದು ಕರಾವಳಿಯಲ್ಲಿ 16 ರಿಂದ 18ರ ವರೆಗೆ ವ್ಯಾಪಕ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗಬಹುದು.

ಇಂದು ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಇವತ್ತಿನಿಂದ ಅಕ್ಟೋಬರ್ 17ರ ವರೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ ಎಸ್ ಪಾಟೀಲ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:43 pm, Sat, 12 October 24

ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
‘ಪ್ರಾಮಾಣಿಕತೆ ಇಲ್ಲದವರಿಗೆ ಪ್ರಾಯಶ್ಚಿತ ಇದ್ದೇ ಇರುತ್ತೆ’; ಸುದೀಪ್
‘ಪ್ರಾಮಾಣಿಕತೆ ಇಲ್ಲದವರಿಗೆ ಪ್ರಾಯಶ್ಚಿತ ಇದ್ದೇ ಇರುತ್ತೆ’; ಸುದೀಪ್
ಕುಮಾರಸ್ವಾಮಿ ಕೇಂದ್ರ ಸಚಿವರಾದರೂ ಹೆಚ್ಚು ಸಮಯ ಬೆಂಗಳೂರಲ್ಲಿ ಇರುತ್ತಾರೆ
ಕುಮಾರಸ್ವಾಮಿ ಕೇಂದ್ರ ಸಚಿವರಾದರೂ ಹೆಚ್ಚು ಸಮಯ ಬೆಂಗಳೂರಲ್ಲಿ ಇರುತ್ತಾರೆ
ನವರಾತ್ರಿ ವೇಷದಲ್ಲಿ ಕಾಡಿದ ರೇಣುಕಾಸ್ವಾಮಿ ಪ್ರೇತಾತ್ಮ! ವಿಡಿಯೋ ವೈರಲ್
ನವರಾತ್ರಿ ವೇಷದಲ್ಲಿ ಕಾಡಿದ ರೇಣುಕಾಸ್ವಾಮಿ ಪ್ರೇತಾತ್ಮ! ವಿಡಿಯೋ ವೈರಲ್
ವಿಜಯದಶಮಿ: ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
ವಿಜಯದಶಮಿ: ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
ಮೈಸೂರಿನ ಬಲರಾಮ್ ಮತ್ತು ಬೆಂಗಳೂರಿನ ನಾರಾಯಣ್ ನಡುವೆ ವಜ್ರಮುಷ್ಠಿ ಕಾಳಗ
ಮೈಸೂರಿನ ಬಲರಾಮ್ ಮತ್ತು ಬೆಂಗಳೂರಿನ ನಾರಾಯಣ್ ನಡುವೆ ವಜ್ರಮುಷ್ಠಿ ಕಾಳಗ
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು
ಮೈಸೂರು ದಸರಾ 2024: ಸಿಎಂ, ಡಿಸಿಎಂಗೆ ಪಂಚಲೋಹ ವಿಗ್ರಹ ಉಡುಗೊರೆ
ಮೈಸೂರು ದಸರಾ 2024: ಸಿಎಂ, ಡಿಸಿಎಂಗೆ ಪಂಚಲೋಹ ವಿಗ್ರಹ ಉಡುಗೊರೆ