ಗಂಡನ ಕಾಟಕ್ಕೆ ಹೆಂಡ್ತಿ ಆತ್ಮಹತ್ಯೆ: ಡೆತ್​ನೋಟ್​ನಲ್ಲಿ ಪತಿಯ ಲವ್ವಿಡವ್ವಿ ಬಿಚ್ಚಿಟ್ಟಳು

ಆತ್ಮಹತ್ಯೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಅದರಂತೆ ಬೆಂಗಳೂರಿನ ಶೆಟ್ಟಿಹಳ್ಳಿ(Shettihalli)ಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ಪತಿಯ ಕಿರುಕುಳ ಹಿನ್ನಲೆ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಇದೀಗ ಪತಿ ಕಾಂತರಾಜ್‌ನನ್ನು ಬಾಗಲಗುಂಟೆ ಠಾಣೆಯ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಗಂಡನ ಕಾಟಕ್ಕೆ ಹೆಂಡ್ತಿ ಆತ್ಮಹತ್ಯೆ: ಡೆತ್​ನೋಟ್​ನಲ್ಲಿ ಪತಿಯ ಲವ್ವಿಡವ್ವಿ ಬಿಚ್ಚಿಟ್ಟಳು
ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ಆರೋಪಿ ಪತಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Jun 19, 2024 | 5:44 PM

ಬೆಂಗಳೂರು, ಜೂ.19: ಪತಿ ಅನೈತಿಕ ಸಂಬಂಧಕ್ಕೆ ಬೇಸತ್ತು ಬೆಂಗಳೂರಿನ ಶೆಟ್ಟಿಹಳ್ಳಿ(Shettihalli)ಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ಪತಿಯ ಕಿರುಕುಳ ಹಿನ್ನಲೆ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಲತಾ(30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇನ್ನು ಲತಾ ನೇಣಿಗೆ ಶರಣಾಗುವ ಮೊದಲು ಡೆತ್‌ನೋಟ್‌ನಲ್ಲಿ ಪತಿ ಕಾಂತರಾಜ್‌ ಸೇರಿ 8 ಜನರ ವಿರುದ್ಧ ಆರೋಪಿಸಿ ಬರೆದಿದ್ದಾಳೆ. ಈ ಹಿನ್ನಲೆ ಇದೀಗ ಪತಿ ಕಾಂತರಾಜು(33)ನನ್ನು ಪೊಲೀಸರು ಬಂಧಿಸಿದ್ದಾರೆ.

ಡೆತ್​ನೋಟ್​ನಲ್ಲಿ ಏನಿದೆ?

ಪತಿ ಕಾಂತರಾಜ್‌ ಸೇರಿ 8 ಜನರ ವಿರುದ್ಧ ಡೆತ್‌ನೋಟ್‌ನಲ್ಲಿ ಆರೋಪಿಸಿರುವ ಲತಾ, ‘ಕಾಂತರಾಜ್‌ ದಿವ್ಯಾ ಎಂಬುವವರ ಜತೆ ಅಕ್ರಮ ಸಂಬಂಧ ಹೊಂದಿದ್ದ. ಇದರಿಂದ ನನಗೆ ಕಿರುಕುಳ ನೀಡುತ್ತಿದ್ದ. ಈ ಹಿನ್ನಲೆ ಆತನ ಅನೈತಿಕ ಸಂಬಂಧಕ್ಕೆ ಬೇಸತ್ತು ನಾನು ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದು ಬರೆದಿಟ್ಟಿದ್ದಾರೆ. ಇದೀಗ ಪತಿ ಕಾಂತರಾಜ್‌ನನ್ನು ಬಾಗಲಗುಂಟೆ ಠಾಣೆಯ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ:ವ್ಯಕ್ತಿಯೊರ್ವನಿಗೆ ಪಿಎಸ್​​ಐ ನಿಂದ ಕಿರುಕುಳ ಆರೋಪ; ಮನನೊಂದು ಠಾಣೆ ಮುಂದೆಯೇ ಪೆಟ್ರೋಲ್​ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಹಿಂಬದಿಯಿಂದ ದ್ವಿಚಕ್ರ ವಾಹನದ ಮೇಲೆ‌ ಹರಿದ ಲಾರಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸರ್ಕಾರಿ ಆಸ್ವತ್ರೆ ಬಳಿ ಹಿಂಬದಿಯಿಂದ ದ್ವಿಚಕ್ರ ವಾಹನದ ಮೇಲೆ‌ ಟಿಪ್ಪರ್ ಲಾರಿ ಹರಿದು ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. ನಾಗಮಂಗಲ ಮೂಲದ ಅನಿತಾ( 29) ಮೃತ ದುರ್ದೈವಿ.
ಈಶಾ ಪೌಂಡೇಶನ್​ಗೆ ಎಂದು ಸ್ನೇಹಿತನ ಜೊತೆ ಮಹಿಳೆ‌ ಹೋಗುತ್ತಿದ್ದರು. ತಲೆ ಮೇಲೆ ಚಕ್ರ ಹರಿದ ಪರಿಣಾಮ ಮೆದುಳು ಹೊರ ಬಂದು ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ. ಅಪಘಾತದ ನಂತರ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ದೊಡ್ಡಬಳ್ಳಾಪುರ ನಗರ ಪೋಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:06 pm, Wed, 19 June 24

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us