AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ವರು ಹೆಂಡಿರ ಮುದ್ದಿನ ಗಂಡ! ನಾಲ್ಕನೇ ಪತ್ನಿಗಾಗಿ 3ನೇ ಪತ್ನಿಯ ಚಿನ್ನ ಕದ್ದವನಿಗೆ ಮಗನಿಂದಲೇ ಬಿತ್ತು ಗೂಸಾ

ಚಿತ್ರ ವಿಚಿತ್ರ ಅಪರಾಧ ಪ್ರಕರಣಗಳು ಆಗಾಗ ವರದಿಯಾಗುತ್ತಿರುವುದು ಸಾಮಾನ್ಯ. ಆದರೆ, ನೆಲಮಂಗಲದಲ್ಲೊಂದು ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ಕಾನೂನು ಬಾಹಿರವಾಗಿ ನಾಲ್ಕು ಮದುವೆಯಾಗಿ ನಾಲ್ಕನೇ ಪತ್ನಿಗೆ ಕೊಡಲೆಂದು ಮೂರನೇ ಪತ್ನಿಯ ಚಿನ್ನ ಕದ್ದು ಕೊನೆಗೆ ಮಗನಿಂದಲೇ ಏಟು ತಿಂದಿದ್ದಾನೆ. ಈ ಬಗ್ಗೆ ‘ಟಿವಿ9’ ಎಕ್ಸ್​ಕ್ಲೂಸಿವ್ ವರದಿ ಇಲ್ಲಿದೆ.

ಬಿ ಮೂರ್ತಿ, ನೆಲಮಂಗಲ
| Edited By: |

Updated on:Jun 21, 2024 | 1:16 PM

Share

ನೆಲಮಂಗಲ, ಜೂನ್ 21: ಅಬ್ಬಬ್ಬಾ ಎಂದರೆ ವ್ಯಕ್ತಿಯೊಬ್ಬ ಎಷ್ಟು ಮದುವೆಯಾಗಬಹುದು? ಒಂದು, ಎರಡು… ಅಲ್ಲ ಮೂರು? ಅಲ್ಲವೇ ಅಲ್ಲ. ಇಲ್ಲೊಬ್ಬ ವ್ಯಕ್ತಿ ಕಾನೂನುಬಾಹಿರವಾಗಿ ನಾಲ್ಕು (Marriage) ಮದುವೆಯಾಗಿದ್ದಾನೆ. ನಾಲ್ವರು ಹೆಂಡತಿಯರಿಗೂ ಮಕ್ಕಳನ್ನೂ ಕರುಣಿಸಿದ್ದಾನೆ. ಅಷ್ಟೇ ಏಕೆ, ನಾಲ್ಕನೇ ಹೆಂಡತಿಗೆ ಕೊಡಲೆಂದು ಮೂರನೇ ಹೆಂಡತಿಯ ಚಿನ್ನ ಕದ್ದು (Gold Theft) ಇದೀಗ ಆಕೆಯಿಂದ ಪಡೆದ ಮಗನಿಂದಲೇ ಏಟು ತಿಂದಿದ್ದಾನೆ. ಈ ಘಟನೆ ನಡೆದಿರುವುದು ಬೆಂಗಳೂರು ಉತ್ತರ ತಾಲೂಕಿನ ದೊಡ್ಡಬಿದರಕಲ್ಲು ಗ್ರಾಮದಲ್ಲಿ.

ದೊಡ್ಡಬಿದರಕಲ್ಲು ಗ್ರಾಮದ ಭಕ್ತವತ್ಸಲ ಎಂಬ ವ್ಯಕ್ತಿಗೆ ನಾಲ್ಕು ಮದುವೆಯಾಗಿದೆ. ಮೊದಲ ಪತ್ನಿ ಕವಿತ, ಎರಡನೇ ಪತ್ನಿ ಸಾವಿತ್ರಿ, ಮೂರನೇ ಪತ್ನಿ ನಾಗರತ್ನಮ್ಮ. ನಾಲ್ಕನೇ ಪತ್ನಿಯ ಹೆಸರು ಪದ್ಮಾವತಿ. ಈ ಭಕ್ತವತ್ಸಲ ತನ್ನ 3ನೇ ಪತ್ನಿ ನಾಗರತ್ನಮ್ಮ ಮನೆಯಲ್ಲಿದ್ದ 50 ಗ್ರಾಂಗೂ ಹೆಚ್ಚು ಚಿನ್ನಾಭರಣ ಕದ್ದು ನಾಲ್ಕನೇ ಪತ್ನಿ ಪದ್ಮಾವತಿಗೆ ಕೊಟ್ಟಿದ್ದಾನೆ. ಈ ವಿಚಾರ ಮೂರನೇ ಪತ್ನಿಯ ಮಗ 18 ವರ್ಷದ ಜೀವನ್​ಗೆ ಗೊತ್ತಾಗಿದೆ. ಇದರಿಂದ ಸಿಟ್ಟಾದ ಜೀವನ್ ಸೀದಾ ಪದ್ಮಾವತಿ ಮನೆಗೆ ತೆರಳಿದ್ದಾನೆ. ಈ ವೇಳೆ ಅಲ್ಲೇ ಮಲಗಿದ್ದ ಭಕ್ತವತ್ಸಲ ಮೇಲೆ ದಾಳಿ ನಡೆಸಿದ್ದಾನೆ.

ಇದನ್ನೂ ಓದಿ: ಅತ್ತಿಗೆ ಮೇಲಿನ ಕೋಪಕ್ಕೆ 3 ವರ್ಷದ ಮಗುವಿನ ಕತ್ತು ಸೀಳಿ ಕೊಲೆ: ಸತ್ಯ ಬಾಯ್ಬಿಟ್ಟ ಆರೋಪಿ

ಸರ್ಕಾರಿ ನೌಕರ ಭಕ್ತವತ್ಸಲನಿಗಾಗಿ ಪತ್ನಿಯರ ಫೈಟ್

ನಾಲ್ಕು ಮದುವೆಯಾಗಿರುವ ಭಕ್ತವತ್ಸಲ ‘ಕೃಷ್ಣ ಭಾಗ್ಯ ಜಲ ನಿಗಮ’ದಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದಾನೆ. ಈಗಾಗಲೇ ಮದುವೆಯಾಗಿರುವ ಯಾರೊಬ್ಬರಿಗೂ ವಿಚ್ಛೇದನ ಕೊಡದೇ ನಾಲ್ಕು ಮದುವೆಯಾಗಿದ್ದಾನೆ. ಈ ನಾಲ್ವರು ಪತ್ನಿಯರಿಂದ ಒಟ್ಟಾಗಿ ಆತನಿಗೆ 6 ಮಕ್ಕಳಿದ್ದಾರೆ.

ನಾಲ್ಕನೇ ಪತ್ನಿ ಪದ್ಮಾವತಿ ಜತೆ ಭಕ್ತವತ್ಸಲ

ಸದ್ಯ ಮೂರನೇ ಪತ್ನಿ ನಾಗರತ್ನಮ್ಮ ಹಾಗೇ ನಾಲ್ಕನೇ ಪತ್ನಿ ಪದ್ಮಾವತಿ ಇಬ್ಬರೂ ಕೂಡ ಗಂಡ ಬೇಕು ಎಂದು ಪಟ್ಟುಹಿಡಿದಿದ್ದಾರೆ. ಘಟನೆ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:47 pm, Fri, 21 June 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ