ನಾಲ್ವರು ಹೆಂಡಿರ ಮುದ್ದಿನ ಗಂಡ! ನಾಲ್ಕನೇ ಪತ್ನಿಗಾಗಿ 3ನೇ ಪತ್ನಿಯ ಚಿನ್ನ ಕದ್ದವನಿಗೆ ಮಗನಿಂದಲೇ ಬಿತ್ತು ಗೂಸಾ

ಚಿತ್ರ ವಿಚಿತ್ರ ಅಪರಾಧ ಪ್ರಕರಣಗಳು ಆಗಾಗ ವರದಿಯಾಗುತ್ತಿರುವುದು ಸಾಮಾನ್ಯ. ಆದರೆ, ನೆಲಮಂಗಲದಲ್ಲೊಂದು ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ಕಾನೂನು ಬಾಹಿರವಾಗಿ ನಾಲ್ಕು ಮದುವೆಯಾಗಿ ನಾಲ್ಕನೇ ಪತ್ನಿಗೆ ಕೊಡಲೆಂದು ಮೂರನೇ ಪತ್ನಿಯ ಚಿನ್ನ ಕದ್ದು ಕೊನೆಗೆ ಮಗನಿಂದಲೇ ಏಟು ತಿಂದಿದ್ದಾನೆ. ಈ ಬಗ್ಗೆ ‘ಟಿವಿ9’ ಎಕ್ಸ್​ಕ್ಲೂಸಿವ್ ವರದಿ ಇಲ್ಲಿದೆ.

Follow us
| Updated By: ಗಣಪತಿ ಶರ್ಮ

Updated on:Jun 21, 2024 | 1:16 PM

ನೆಲಮಂಗಲ, ಜೂನ್ 21: ಅಬ್ಬಬ್ಬಾ ಎಂದರೆ ವ್ಯಕ್ತಿಯೊಬ್ಬ ಎಷ್ಟು ಮದುವೆಯಾಗಬಹುದು? ಒಂದು, ಎರಡು… ಅಲ್ಲ ಮೂರು? ಅಲ್ಲವೇ ಅಲ್ಲ. ಇಲ್ಲೊಬ್ಬ ವ್ಯಕ್ತಿ ಕಾನೂನುಬಾಹಿರವಾಗಿ ನಾಲ್ಕು (Marriage) ಮದುವೆಯಾಗಿದ್ದಾನೆ. ನಾಲ್ವರು ಹೆಂಡತಿಯರಿಗೂ ಮಕ್ಕಳನ್ನೂ ಕರುಣಿಸಿದ್ದಾನೆ. ಅಷ್ಟೇ ಏಕೆ, ನಾಲ್ಕನೇ ಹೆಂಡತಿಗೆ ಕೊಡಲೆಂದು ಮೂರನೇ ಹೆಂಡತಿಯ ಚಿನ್ನ ಕದ್ದು (Gold Theft) ಇದೀಗ ಆಕೆಯಿಂದ ಪಡೆದ ಮಗನಿಂದಲೇ ಏಟು ತಿಂದಿದ್ದಾನೆ. ಈ ಘಟನೆ ನಡೆದಿರುವುದು ಬೆಂಗಳೂರು ಉತ್ತರ ತಾಲೂಕಿನ ದೊಡ್ಡಬಿದರಕಲ್ಲು ಗ್ರಾಮದಲ್ಲಿ.

ದೊಡ್ಡಬಿದರಕಲ್ಲು ಗ್ರಾಮದ ಭಕ್ತವತ್ಸಲ ಎಂಬ ವ್ಯಕ್ತಿಗೆ ನಾಲ್ಕು ಮದುವೆಯಾಗಿದೆ. ಮೊದಲ ಪತ್ನಿ ಕವಿತ, ಎರಡನೇ ಪತ್ನಿ ಸಾವಿತ್ರಿ, ಮೂರನೇ ಪತ್ನಿ ನಾಗರತ್ನಮ್ಮ. ನಾಲ್ಕನೇ ಪತ್ನಿಯ ಹೆಸರು ಪದ್ಮಾವತಿ. ಈ ಭಕ್ತವತ್ಸಲ ತನ್ನ 3ನೇ ಪತ್ನಿ ನಾಗರತ್ನಮ್ಮ ಮನೆಯಲ್ಲಿದ್ದ 50 ಗ್ರಾಂಗೂ ಹೆಚ್ಚು ಚಿನ್ನಾಭರಣ ಕದ್ದು ನಾಲ್ಕನೇ ಪತ್ನಿ ಪದ್ಮಾವತಿಗೆ ಕೊಟ್ಟಿದ್ದಾನೆ. ಈ ವಿಚಾರ ಮೂರನೇ ಪತ್ನಿಯ ಮಗ 18 ವರ್ಷದ ಜೀವನ್​ಗೆ ಗೊತ್ತಾಗಿದೆ. ಇದರಿಂದ ಸಿಟ್ಟಾದ ಜೀವನ್ ಸೀದಾ ಪದ್ಮಾವತಿ ಮನೆಗೆ ತೆರಳಿದ್ದಾನೆ. ಈ ವೇಳೆ ಅಲ್ಲೇ ಮಲಗಿದ್ದ ಭಕ್ತವತ್ಸಲ ಮೇಲೆ ದಾಳಿ ನಡೆಸಿದ್ದಾನೆ.

ಇದನ್ನೂ ಓದಿ: ಅತ್ತಿಗೆ ಮೇಲಿನ ಕೋಪಕ್ಕೆ 3 ವರ್ಷದ ಮಗುವಿನ ಕತ್ತು ಸೀಳಿ ಕೊಲೆ: ಸತ್ಯ ಬಾಯ್ಬಿಟ್ಟ ಆರೋಪಿ

ಸರ್ಕಾರಿ ನೌಕರ ಭಕ್ತವತ್ಸಲನಿಗಾಗಿ ಪತ್ನಿಯರ ಫೈಟ್

ನಾಲ್ಕು ಮದುವೆಯಾಗಿರುವ ಭಕ್ತವತ್ಸಲ ‘ಕೃಷ್ಣ ಭಾಗ್ಯ ಜಲ ನಿಗಮ’ದಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದಾನೆ. ಈಗಾಗಲೇ ಮದುವೆಯಾಗಿರುವ ಯಾರೊಬ್ಬರಿಗೂ ವಿಚ್ಛೇದನ ಕೊಡದೇ ನಾಲ್ಕು ಮದುವೆಯಾಗಿದ್ದಾನೆ. ಈ ನಾಲ್ವರು ಪತ್ನಿಯರಿಂದ ಒಟ್ಟಾಗಿ ಆತನಿಗೆ 6 ಮಕ್ಕಳಿದ್ದಾರೆ.

ನಾಲ್ಕನೇ ಪತ್ನಿ ಪದ್ಮಾವತಿ ಜತೆ ಭಕ್ತವತ್ಸಲ

ಸದ್ಯ ಮೂರನೇ ಪತ್ನಿ ನಾಗರತ್ನಮ್ಮ ಹಾಗೇ ನಾಲ್ಕನೇ ಪತ್ನಿ ಪದ್ಮಾವತಿ ಇಬ್ಬರೂ ಕೂಡ ಗಂಡ ಬೇಕು ಎಂದು ಪಟ್ಟುಹಿಡಿದಿದ್ದಾರೆ. ಘಟನೆ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:47 pm, Fri, 21 June 24

ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ