Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಷನ್ ಬಜೆಟ್​​ನಲ್ಲಿ ಮಹಿಳೆಯರಿಗೆ, ಯುವಕರಿಗೆ ಹೆಚ್ಚಿನ ಆದ್ಯತೆ : ಸಿಎಂ ಬೊಮ್ಮಾಯಿ

ಈ ಬಾರಿಯ ಬಜೆಟ್​​ನಲ್ಲಿ ಜನ ಕಲ್ಯಾಣಕ್ಕೆ ಹೆಚ್ಚು ಆದ್ಯತೆ ನೀಡಲು ಚಿಂತನೆ ನಡೆಸಿದ್ದೇವೆ. ದುಡಿಯುವ ವರ್ಗಕ್ಕೆ ಹೆಚ್ಚು ಆದ್ಯತೆ ನೀಡಲು ಚಿಂತಿಸಿದ್ದೇವೆ. ಸ್ತ್ರೀಶಕ್ತಿ ಸ್ವಹಾಯ ಸಂಘಗಳಿಗೆ 5 ಲಕ್ಷ ರೂ. ಸಾಲ ನೀಡುವ ಯೋಚನೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಎಲೆಕ್ಷನ್ ಬಜೆಟ್​​ನಲ್ಲಿ ಮಹಿಳೆಯರಿಗೆ, ಯುವಕರಿಗೆ ಹೆಚ್ಚಿನ ಆದ್ಯತೆ : ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿImage Credit source: deccanherald.com
Follow us
TV9 Web
| Updated By: ವಿವೇಕ ಬಿರಾದಾರ

Updated on: Jan 14, 2023 | 1:15 PM

ಬೆಂಗಳೂರು: ಈ ಬಾರಿಯ ಬಜೆಟ್​​ನಲ್ಲಿ ಜನ ಕಲ್ಯಾಣಕ್ಕೆ ಹೆಚ್ಚು ಆದ್ಯತೆ ನೀಡಲು ಚಿಂತನೆ ನಡೆಸಿದ್ದೇವೆ. ದುಡಿಯುವ ವರ್ಗಕ್ಕೆ ಹೆಚ್ಚು ಆದ್ಯತೆ ನೀಡಲು ಚಿಂತಿಸಿದ್ದೇವೆ. ಸ್ತ್ರೀಶಕ್ತಿ ಸ್ವಹಾಯ ಸಂಘಗಳಿಗೆ 5 ಲಕ್ಷ ರೂ. ಸಾಲ ನೀಡುವ ಯೋಚನೆ ಇದೆ. ಈ ಬಾರಿಯ ಬಜೆಟ್​​ನಲ್ಲಿ ಮಹಿಳೆಯರು, ಯುವಕರಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜನವರಿ 17ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಸುತ್ತೇವೆ. ಬಜೆಟ್​​ ಅಧಿವೇಶನ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಿದ್ದೇವೆ. ಸಂಪುಟ ಸಭೆಯಲ್ಲಿ ಬಜೆಟ್​ ಅಧಿವೇಶನದ ದಿನಾಂಕ ನಿಗದಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೇಂದ್ರ ವಿತ್ತ ಸಚಿವರ ಜೊತೆ ಸಭೆ ನಡೆಸಲಾಗಿದೆ. ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಬೆಂಬಲ ನೀರಿಕ್ಷೆ ಮಾಡಿದ್ದೇವೆ. ಕೇಂದ್ರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬೆಂಬಲ ಸಿಗಲಿದೆ. ದುಡಿಯುವ ವರ್ಗಕ್ಕೆ ಸಹಾಯವಾಗುವ ಕೆಲಸ ಮಾಡುತ್ತೇವೆ. ಪ್ರತಿಯೊಂದು ಕುಟುಂಬಕ್ಕೆ ಮನೆ ಕೊಡಿಸುವ ಕಾರ್ಯಕ್ಕೆ ಹೆಣ್ಣು ಮಕ್ಕಳ ಹೆಸರಿನಲ್ಲಿ ಯೋಜನೆ ತರುತ್ತೇವೆ. ಸ್ತೀಶಕ್ತಿ, ಸ್ತ್ರೀ ಸಾಮರ್ಥ್ಯ ಯೋಜನೆ ತರುತ್ತೇವೆ. ವಿಶೇಷ ಯೋಜನೆ ಮಾಡುತ್ತೇವೆ ಎಂದರು.

ಇದನ್ನೂ ಓದಿ:  ನಾಲಿಗೆ ಹರಿ ಬಿಟ್ಟು ಮಾತನಾಡಿದರೆ ನಾಲಿಗೆ ಕತ್ತರಿಸುವ ಕೆಲಸವಾಗುತ್ತದೆ : ಯತ್ನಾಳ್​ಗೆ, ಮುರುಗೇಶ್ ನಿರಾಣಿ ಖಡಕ್ ಎಚ್ಚರಿಕೆ

ಕಾರ್ಯರೂಪಕ್ಕೆ ತರಲು ಆಗಲ್ಲ ಎಂಬುವುದು ಕಾಂಗ್ರೆಸ್​ಗೂ ಗೊತ್ತು

ಉಚಿತವಾಗಿ ವಿದ್ಯುತ್​ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿರುವ ವಿಚಾರವಾಗಿ ಮಾತನಾಡಿದ ಅವರು ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡುವುದಾಗಿ ಹೇಳಿದ್ದಾರೆ. ಎಲ್ಲ ವಿದ್ಯುತ್​ ಸರಬರಾಜು ನಿಗಮಗಳನ್ನು ಕಾಂಗ್ರೆಸ್​ ಸಾಲದ ಸುಳಿಗೆ ಸಿಲುಕಿಸಿತ್ತು. ಕಾರ್ಯರೂಪಕ್ಕೆ ತರಲು ಆಗಲ್ಲ ಎಂಬುದು ಕಾಂಗ್ರೆಸ್​ಗೂ ಗೊತ್ತು. ಕಾಂಗ್ರೆಸ್​ ನಾಯಕರು ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್​​ ಘೋಷಣೆ ಮಾಡಿದ ಯೋಜನೆಗೆ ಹಣದ ಕೊರತೆಯಾಗುತ್ತೆ ಎಂದು ಹೇಳಿದರು.

ಸದಾಶಿವ ಆಯೋಗ, ಕಾಂತರಾಜು ಆಯೋಗ ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಹಿಂದುಳಿದ ಆಯೋಗದ ಮಧ್ಯಂತರ ವರದಿಯನ್ನು ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಪ್ರವರ್ಗ 2 ಕ್ಕೆ ಸೇರಿಸಲು ಹೆಜ್ಜೆ ಇಟ್ಡಿದ್ದೇವೆ. ಹೆಚ್ಚಳ ಮಾಡುವುದಕ್ಕೆ ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದಲ್ಲಿ ಕೆಲವು ನಿಯಮಗಳಿವೆ. ಅದನ್ನು ಕೂಡ ಆದಷ್ಟು ಬೇಗ ಮಾಡಲಿದ್ದೇವೆ.

ಇದನ್ನೂ ಓದಿ:  ಏಳು ವರ್ಷಗಳೇ ಕಳೆದರೂ ಸರಿಯಾಗಿ ಸಿಮೆಂಟ್ ಕಲಿಸಿಲ್ಲ, ಕಾಮಗಾರಿ ಪೂರ್ಣಗೊಂಡಿಲ್ಲ -ಆದರೂ ಹಾಸ್ಟೆಲ್ ಉದ್ಘಾಟನೆ ಭಾಗ್ಯ!

ವೈಯಕ್ತಿಕ ನಿಂದನೆ ಸರಿಯಲ್ಲ,ಇದು ಕರ್ನಾಟಕದ ಸಂಸ್ಕೃತಿಯಲ್ಲ

ನಿರಾಣಿ ವಿರುದ್ದ ಯತ್ನಾಳ್ ಪಿಂಪ್ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಸಾರ್ವಜನಿಕ ಜೀವನದಲ್ಲಿ ಎಲ್ಲರೂ ಜನಮನ್ನಣೆ ಪಡೆದುಕೊಂಡು ಬಂದಿರೋದು. ವೈಯಕ್ತಿಕ ನಿಂದನೆ ಸರಿಯಲ್ಲ. ಇದು ಕರ್ನಾಟಕದ ಸಂಸ್ಕೃತಿಯಲ್ಲ. ಅವರು ಆ ರೀತಿ ಹೇಳಿಕೆ ನೀಡಿದರೇ ಅದು ಅವರ ಸಂಸ್ಕೃತಿ. ಪಂಚಮಸಾಲಿ ಸಮುದಾಯದ ಅಧ್ಯಕ್ಷರು ಕಾಶೆಪ್ಪನವರ್ ಒಬ್ಬರು ಶಾಸಕರಾಗಿದ್ದರು, ಅವರ ತಂದೆ ಮಂತ್ರಿಯಾಗಿದ್ದರು. ಅವರು ಯಾಕೆ ಮೀಸಲಾತಿ ಮಾಡಿಲ್ಲ. ವರದಿಯನ್ನು ತಿರಸ್ಕಾರ ಮಾಡಲಾಯಿತು. ಮೀಸಲಾತಿ ಮಾಡೋಕೆ ಬರಲ್ಲ ಎಂದು ಹೇಳಿದರು. ಆಗ ಯಾಕೆ ಬಾಯಿ ತೆಗೆಯಲಿಲ್ಲ, ಮಾತನಾಡಲಿಲ್ಲ. ಈಗ ಅವರಿಗೆ ಯಾವ ನೈತಿಕತೆ ಇದೆ. ಅವರ ಅಕ್ಕಪಕ್ಕ ಯಾರಿದ್ದಾರೆ ಎಂದು ಸ್ವಾಮೀಜಿ ನೋಡಬೇಕು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ