AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಇನ್ಮುಂದೆ ಎಲ್ಲೊಂದರಲ್ಲಿ ವಾಹನ ಪಾರ್ಕ್​ ಮಾಡಿದ್ರೆ ಶುಲ್ಕ..!

ಬೆಂಗಳೂರಿನ ರಸ್ತೆಗಳಲ್ಲಿ ಎಲ್ಲಂದರಲ್ಲಿ ಪಾರ್ಕಿಂಗ್​ ಮಾಡಿದರೆ ಶುಲ್ಕ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರಿನಲ್ಲಿ ಇನ್ಮುಂದೆ ಎಲ್ಲೊಂದರಲ್ಲಿ ವಾಹನ ಪಾರ್ಕ್​ ಮಾಡಿದ್ರೆ ಶುಲ್ಕ..!
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Oct 28, 2022 | 7:43 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಜನ ಸಂಖ್ಯೆ ಹೆಚ್ಚಾಗುತ್ತಿದ್ದು, ಜನ ಸಂಖ್ಯೆ ಜೊತೆ ಜೊತೆಗೆ ವಾಹನಗಳ ಸಂಖ್ಯೆನೂ ಹೆಚ್ಚಾಗಿದೆ. ಅಂಕಿ ಅಂಶಗಳ ಪ್ರಕಾರ ಬೆಂಗಳೂರಿನಲ್ಲಿ ಒಂದೂವರೆ ಕೋಟಿ ವಾಹನಗಳಿದ್ದು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ನಗರದಲ್ಲಿ ಒಂದು ಸಿಗ್ನಲ್ ದಾಟಬೇಕು ಅಂದ್ರೆ ಕನಿಷ್ಠ ಪಕ್ಷ ಮೂರು ನಿಮಿಷ ಬೇಕಾಗುತ್ತೆ. ವಾಹನಗಳ ಸಂಖ್ಯೆಗೆ ತಕ್ಕಂತೆ ಬೆಂಗಳೂರಿನ ರೋಡ್ ಇನ್ಫ್ರಾಟ್ಸಕ್ಚರ್ ಇಲ್ಲದೆ, ರಸ್ತೆಗಳ ಅಕ್ಕಪಕ್ಕದಲ್ಲಿ ಪಾರ್ಕಿಂಗ್ ಮಾಡುವ ಕಾರಣ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ.‌ ಜನ ಸರ್ಕಾರದ ಸಾರಿಗೆಯನ್ನು ಬಳಸಲು ಉತ್ತೇಜನ ನೀಡಲು, ಮತ್ತು ಖಾಸಗಿ ವಾಹನಗಳಿಗೆ ಕಡಿವಾಣ ಹಾಕಲು ನಗರ ಭೂ ಸಾರಿಗೆ ಇಲಾಖೆ ಪಾರ್ಕಿಂಗ್ ಪಾಲಿಸಿಯನ್ನು ಜಾರಿಗೆ ತರುತ್ತಿದೆ. ಬೆಂಗಳೂರಿನ 700 ರಸ್ತೆಗಳಲ್ಲಿ ಪಾರ್ಕಿಂಗ್​ಗೆ ಸ್ಥಳ ಗುರುತು ಮಾಡಿದ್ದು, ಈ ರಸ್ತೆಗಳಲ್ಲಿ ಪಾರ್ಕಿಂಗ್ ಮಾಡುವ ವಾಹನಗಳು ಶುಲ್ಕ ಕಟ್ಟಬೇಕಿದೆ.

ಬೆಂಗಳೂರಿನಲ್ಲಿ 700 ರಸ್ತೆಗಳಲ್ಲಿ ಪಾರ್ಕಿಂಗ್ ಗೆ ವ್ಯವಸ್ಥೆ

ಬಿಬಿಎಂಪಿ ವ್ಯಾಪ್ತಿಯ ಎಲ್ಲ ಎಂಟು ವಲಯಗಳಲ್ಲಿನ 700 ರಸ್ತೆಗಳಲ್ಲಿ ಹಣ ಪಾವತಿಸಿ ವಾಹನ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಯಲಹಂಕ ವಲಯದಲ್ಲಿ 60, ಬೊಮ್ಮನಹಳ್ಳಿ 58, ದಾಸರಹಳ್ಳಿ 104, ಮಹದೇವಪುರ 50, ಪೂರ್ವ 59, ರಾಜರಾಜೇಶ್ವರಿನಗರ 58, ದಕ್ಷಿಣ 197 ಮತ್ತು ಪಶ್ಚಿಮ 137 ರಸ್ತೆಗಳಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ಎ,ಬಿ,ಸಿ ಎಂದು ಮೂರು ಪಾರ್ಕಿಂಗ್ ವಲಯಗಳನ್ನಾಗಿ ಮಾಡಿದ್ದು ಎ ಜೋನ್​ನಲ್ಲಿ ಪಾರ್ಕ್ ಮಾಡುವ ಕಾರ್ ಹಾಗೂ ಬೈಕ್​ಗೆ ಗಂಟೆಗೆ ಇಂತಿಷ್ಟು ಎಂದು ದರ ನಿಗದಿ ಮಾಡಲಾಗಿದೆ.

ಪೇ ಆ್ಯಂಡ್ ಪಾರ್ಕ್ ಎಷ್ಟೆಷ್ಟು? (ಪ್ರತಿ ಗಂಟೆಗೆ)

ವರ್ಗ ದ್ವಿಚಕ್ರ ವಾಹನ ಕಾರುಗಳು
15 30
ಬಿ 10 20
ಸಿ 5 15

ಮುಂದಿನ ವಾರದಿಂದಲೇ ಪೇ ಆ್ಯಂಡ್ ರೂಲ್ಸ್ ಜಾರಿ..?

ಮುಂದಿನ ವಾರದಿಂದಲೇ ಬೆಂಗಳೂರಿನಲ್ಲಿ ಪಾರ್ಕಿಂಗ್ ಪಾಲಿಸಿ ಜಾರಿಗೆ ಬರುವ ಸಾಧ್ಯತೆ ಇದೆ. ರಸ್ತೆ ಪಕ್ಕದಲ್ಲಿ‌ ಫ್ರೀಯಾಗಿ ಪಾರ್ಕ್ ಮಾಡುವಂತಿಲ್ಲ. ಪಾರ್ಕಿಂಗ್ ಪಾಲಿಸಿ ಜಾರಿಗೆ ಬಂದರೆ ಜನ ಪಾರ್ಕಿಂಗ್ ಶುಲ್ಕಕ್ಕೆ ಹೆದರಿ ಸಾಮೂಹಿಕ ಸಾರಿಗೆ ಬಳಕೆ ಮಾಡುವ ಸಾಧ್ಯತೆಯಿದೆ. ಇದೆ ಕಾರಣಕ್ಕೆ ಈ ರೂಲ್ಸ್ ಜಾರಿಗೆ ತಂದಿದ್ದ ಮುಂದಿನ ದಿನಗಳಲ್ಲಿ ಮನೆ ಮುಂದೆ ವಾಹನಗಳನ್ನು ಪಾರ್ಕ್ ಮಾಡಬೇಕು ಅಂದ್ರು ಸಹ ಶುಲ್ಕ ಪಾವತಿಸಬೇಕಾದ ಸ್ಥಿತಿ ನಿರ್ಮಾಣ ಆಗಲಿದೆ.

ಸೈಕಲ್‌ಗಳಿಗೆ ರೂಲ್ಸ್ ಅನ್ವಯ ಆಗಲ್ಲ

ಮೋಟಾರುರಹಿತ ಸಾರಿಗೆಯನ್ನು ಉತ್ತೇಜಿಸಲು ವಾಹನ ನಿಲುಗಡೆ ತಾಣದಲ್ಲಿ ಬೈಸಿಕಲ್‌ಗಳಿಗೆ ಜಾಗ ಮೀಸಲಿಡಲಾಗುತ್ತದೆ. ಸೈಕಲ್‌ಗಳ ನಿಲುಗಡೆಗೆ ಯಾವುದೇ ಶುಲ್ಕ ಇರುವುದಿಲ್ಲ. ಸೈಕಲ್​​ಗಳಿಗೆ ಪ್ರತ್ಯೇಕ ಪಾರ್ಕಿಂಗ್​ ವ್ಯವಸ್ಥೆ ಮಾಡಲಾಗುತ್ತಿದೆ.

ವರದಿ- ಮುತ್ತಪ್ಪ ಲಮಾಣಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:15 pm, Fri, 28 October 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?