ಪತ್ನಿ, ಪುತ್ರಿಗೆ ಥಳಿಸಿ ಮನೆಯಿಂದ ಹೊರದಬ್ಬಿದ; ಹಣ ಕೊಟ್ಟವರ ಜೊತೆ ಮಲಗುವಂತೆ ಮಗಳಿಗೆ ಕಿರುಕುಳ

ಬೆಂಗಳೂರು ಉತ್ತರ ತಾಲೂಕಿನ ಮಾದವಾರ(Madavara) ಗ್ರಾಮದಲ್ಲಿ ಕುಡಿದ ಅಮಲಿನಲ್ಲಿ ಪತ್ನಿ ಹಾಗೂ ಪುತ್ರಿಗೆ ಥಳಿಸಿ ಮನೆಯಿಂದ ಹೊರದಬ್ಬಿ ಬೀಗ ಹಾಕಿಕೊಂಡು ಪರಾರಿಯಾದ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಬೀಗ ಹೊಡೆದು ತಾಯಿ ಹಾಗೂ ಮಗಳನ್ನು ಮನೆಗೆ ಬಿಟ್ಟಿದ್ದಾರೆ.

ಪತ್ನಿ, ಪುತ್ರಿಗೆ ಥಳಿಸಿ ಮನೆಯಿಂದ ಹೊರದಬ್ಬಿದ; ಹಣ ಕೊಟ್ಟವರ ಜೊತೆ ಮಲಗುವಂತೆ ಮಗಳಿಗೆ ಕಿರುಕುಳ
ಆರೋಪಿ ಪತಿ ಪ್ರಸನ್ನ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 06, 2024 | 6:00 PM

ಬೆಂಗಳೂರು, ಜೂ.06: ಕುಡಿದ ಅಮಲಿನಲ್ಲಿ ಪತ್ನಿ ಹಾಗೂ ಪುತ್ರಿಗೆ ಥಳಿಸಿ ಮನೆಯಿಂದ ಹೊರದಬ್ಬಿ ಬೀಗ ಹಾಕಿಕೊಂಡು ಪರಾರಿಯಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದವಾರ(Madavara) ಗ್ರಾಮದಲ್ಲಿ ನಡೆದಿದೆ. ಈ ಹಿನ್ನಲೆ ತಾಯಿ ವಿಜಯಲಕ್ಷ್ಮೀ ಜೊತೆ ಮಗಳು ಮನೆ ಮುಂದೆ ಗೋಳಾಡುತ್ತಿದ್ದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಬೀಗ ಒಡೆದು ತಾಯಿ ಹಾಗೂ ಮಗಳನ್ನು ಮನೆಗೆ ಬಿಟ್ಟಿದ್ದಾರೆ. ಜೊತೆಗೆ ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ಪತಿ ಪ್ರಸನ್ನಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಹಣ ಕೊಟ್ಟವರ ಜೊತೆ ಮಲಗುವಂತೆ ಮಗಳಿಗೆ ಕಿರುಕುಳ

ಕಳೆದ ಎರಡು ವರ್ಷದಿಂದ ಕುಡುಕ ಪತಿ ಪ್ರಸನ್ನ ವಿಪರೀತ ಕಾಟ ಕೊಡುತ್ತಿದ್ದಾನಂತೆ. ಇತ್ತ 18 ವರ್ಷದ ಮಗಳಿಗೂ ದಿನನಿತ್ಯ ತೊಂದರೆ ನೀಡುತ್ತಿದ್ದು, ಕಾಲೇಜಿಗೂ ಹೋಗದಂತೆ ತಡೆದು ಹಣ ಕೊಟ್ಟವರ ಜೊತೆ ಮಲಗುವಂತೆಯೂ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಸಧ್ಯ ಪ್ರಕರಣ ದಾಖಲಿಸಿದ ಪೊಲೀಸರು, ಬೀಗ ಹೊಡೆದು ತಾಯಿ ಹಾಗೂ ಮಗಳನ್ನ ಮನೆಗೆ ಬಿಟ್ಟಿದ್ದಾರೆ. ತಂದೆಯೇ ಮಗಳ ಬದುಕಿಗೆ ವಿಲನ್​ ಆಗಿದ್ದು, ನಿಜಕ್ಕೂ ದುರಂತ.

ಇದನ್ನೂ ಓದಿ:ಕೆಐಎಡಿಬಿಯಿಂದ ಪರಿಹಾರ ನೀಡದೆ ಕಿರುಕುಳ ಆರೋಪ; ವಿಷ ಕುಡಿದು ರೈತ ಆತ್ಮಹತ್ಯೆಗೆ ಯತ್ನ

ಮುಸುಕುಧಾರಿ ಚಡ್ಡಿ ಗ್ಯಾಂಗ್​ನಿಂದ ಮನೆಯಲ್ಲಿ ಕಳ್ಳತನಕ್ಕೆ ಯತ್ನ

ಕೋಲಾರ: ಮುಸುಕುಧಾರಿ ಚಡ್ಡಿ ಗ್ಯಾಂಗ್​ನಿಂದ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್​ನ ಸ್ವರ್ಣ ನಗರ್​ನಲ್ಲಿ ನಡೆದಿದೆ. ಪ್ರಸನ್ನ ರೆಡ್ಡಿ ಎಂಬುವರ ಮನೆಯಲ್ಲಿ ಮನೆಯ ಕಿಟಕಿ ರಾಡ್ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಜೊತೆಗೆ ಚಡ್ಡಿ ಗ್ಯಾಂಗ್ ಕಳ್ಳರ ಚಲನವಲನ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಕುರಿತು ಮನೆಯ ಮಾಲೀಕರು ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Thu, 6 June 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!