Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ, ಪುತ್ರಿಗೆ ಥಳಿಸಿ ಮನೆಯಿಂದ ಹೊರದಬ್ಬಿದ; ಹಣ ಕೊಟ್ಟವರ ಜೊತೆ ಮಲಗುವಂತೆ ಮಗಳಿಗೆ ಕಿರುಕುಳ

ಬೆಂಗಳೂರು ಉತ್ತರ ತಾಲೂಕಿನ ಮಾದವಾರ(Madavara) ಗ್ರಾಮದಲ್ಲಿ ಕುಡಿದ ಅಮಲಿನಲ್ಲಿ ಪತ್ನಿ ಹಾಗೂ ಪುತ್ರಿಗೆ ಥಳಿಸಿ ಮನೆಯಿಂದ ಹೊರದಬ್ಬಿ ಬೀಗ ಹಾಕಿಕೊಂಡು ಪರಾರಿಯಾದ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಬೀಗ ಹೊಡೆದು ತಾಯಿ ಹಾಗೂ ಮಗಳನ್ನು ಮನೆಗೆ ಬಿಟ್ಟಿದ್ದಾರೆ.

ಪತ್ನಿ, ಪುತ್ರಿಗೆ ಥಳಿಸಿ ಮನೆಯಿಂದ ಹೊರದಬ್ಬಿದ; ಹಣ ಕೊಟ್ಟವರ ಜೊತೆ ಮಲಗುವಂತೆ ಮಗಳಿಗೆ ಕಿರುಕುಳ
ಆರೋಪಿ ಪತಿ ಪ್ರಸನ್ನ
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 06, 2024 | 6:00 PM

ಬೆಂಗಳೂರು, ಜೂ.06: ಕುಡಿದ ಅಮಲಿನಲ್ಲಿ ಪತ್ನಿ ಹಾಗೂ ಪುತ್ರಿಗೆ ಥಳಿಸಿ ಮನೆಯಿಂದ ಹೊರದಬ್ಬಿ ಬೀಗ ಹಾಕಿಕೊಂಡು ಪರಾರಿಯಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದವಾರ(Madavara) ಗ್ರಾಮದಲ್ಲಿ ನಡೆದಿದೆ. ಈ ಹಿನ್ನಲೆ ತಾಯಿ ವಿಜಯಲಕ್ಷ್ಮೀ ಜೊತೆ ಮಗಳು ಮನೆ ಮುಂದೆ ಗೋಳಾಡುತ್ತಿದ್ದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಬೀಗ ಒಡೆದು ತಾಯಿ ಹಾಗೂ ಮಗಳನ್ನು ಮನೆಗೆ ಬಿಟ್ಟಿದ್ದಾರೆ. ಜೊತೆಗೆ ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ಪತಿ ಪ್ರಸನ್ನಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಹಣ ಕೊಟ್ಟವರ ಜೊತೆ ಮಲಗುವಂತೆ ಮಗಳಿಗೆ ಕಿರುಕುಳ

ಕಳೆದ ಎರಡು ವರ್ಷದಿಂದ ಕುಡುಕ ಪತಿ ಪ್ರಸನ್ನ ವಿಪರೀತ ಕಾಟ ಕೊಡುತ್ತಿದ್ದಾನಂತೆ. ಇತ್ತ 18 ವರ್ಷದ ಮಗಳಿಗೂ ದಿನನಿತ್ಯ ತೊಂದರೆ ನೀಡುತ್ತಿದ್ದು, ಕಾಲೇಜಿಗೂ ಹೋಗದಂತೆ ತಡೆದು ಹಣ ಕೊಟ್ಟವರ ಜೊತೆ ಮಲಗುವಂತೆಯೂ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಸಧ್ಯ ಪ್ರಕರಣ ದಾಖಲಿಸಿದ ಪೊಲೀಸರು, ಬೀಗ ಹೊಡೆದು ತಾಯಿ ಹಾಗೂ ಮಗಳನ್ನ ಮನೆಗೆ ಬಿಟ್ಟಿದ್ದಾರೆ. ತಂದೆಯೇ ಮಗಳ ಬದುಕಿಗೆ ವಿಲನ್​ ಆಗಿದ್ದು, ನಿಜಕ್ಕೂ ದುರಂತ.

ಇದನ್ನೂ ಓದಿ:ಕೆಐಎಡಿಬಿಯಿಂದ ಪರಿಹಾರ ನೀಡದೆ ಕಿರುಕುಳ ಆರೋಪ; ವಿಷ ಕುಡಿದು ರೈತ ಆತ್ಮಹತ್ಯೆಗೆ ಯತ್ನ

ಮುಸುಕುಧಾರಿ ಚಡ್ಡಿ ಗ್ಯಾಂಗ್​ನಿಂದ ಮನೆಯಲ್ಲಿ ಕಳ್ಳತನಕ್ಕೆ ಯತ್ನ

ಕೋಲಾರ: ಮುಸುಕುಧಾರಿ ಚಡ್ಡಿ ಗ್ಯಾಂಗ್​ನಿಂದ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್​ನ ಸ್ವರ್ಣ ನಗರ್​ನಲ್ಲಿ ನಡೆದಿದೆ. ಪ್ರಸನ್ನ ರೆಡ್ಡಿ ಎಂಬುವರ ಮನೆಯಲ್ಲಿ ಮನೆಯ ಕಿಟಕಿ ರಾಡ್ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಜೊತೆಗೆ ಚಡ್ಡಿ ಗ್ಯಾಂಗ್ ಕಳ್ಳರ ಚಲನವಲನ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಕುರಿತು ಮನೆಯ ಮಾಲೀಕರು ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Thu, 6 June 24

ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ