AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಫ್ರೀ ಕೋರ್ಸ್​​ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ; ಆಂಧ್ರಪ್ರದೇಶ ಮೂಲದ ಶ್ರೀನಿವಾಸಲು ಅರೆಸ್ಟ್

ಫ್ರೀ ಕೋರ್ಸ್​​ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಶ್ರೀನಿವಾಸಲುನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಫ್ರೀ ಕೋರ್ಸ್​​ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ; ಆಂಧ್ರಪ್ರದೇಶ ಮೂಲದ ಶ್ರೀನಿವಾಸಲು ಅರೆಸ್ಟ್
ಆರೋಪಿ ಶ್ರೀನಿವಾಸಲು
ಕಿರಣ್ ಹನುಮಂತ್​ ಮಾದಾರ್
|

Updated on: Jun 01, 2023 | 3:19 PM

Share

ಬೆಂಗಳೂರು: ಫ್ರೀ ಕೋರ್ಸ್​​ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ ಆಂಧ್ರಪ್ರದೇಶ(Andhra Pradesh) ಮೂಲದ ಶ್ರೀನಿವಾಸಲುನನ್ನು ಪೊಲೀಸರು ಬಂಧಿಸಿದ್ದಾರೆ. ಜಯನಗರ(Jayanagara)ದಲ್ಲಿ ಶಿಕ್ಷಣ ಸಂಸ್ಥೆಯನ್ನು ತೆರೆದಿದ್ದ ಅರೋಪಿ ಶ್ರೀನಿವಾಸಲು, ಡೇಟಾ ಸೈನ್ಸ್​​ ಅನಲೈಸ್ ಹೆಸರಿನಲ್ಲಿ ಕೋರ್ಸ್​ ತೆರೆದಿದ್ದು, ಶಿಕ್ಷಣ ಸಂಸ್ಥೆಗೆ ಸುಮಾರು 2,500 ವಿದ್ಯಾರ್ಥಿಗಳು ದಾಖಲಾಗಿದ್ದರು. ಮಕ್ಕಳ ದಾಖಲಾತಿ ಪಡೆದು ಪ್ರವೇಶ​ ಮಾಡಿಸಿಕೊಂಡಿದ್ದ ಆರೋಪಿ. ದಾಖಲಾತಿ ಬಳಸಿ ಬ್ಯಾಂಕ್​​ನಲ್ಲಿ ಲೋನ್ ಮಾಡಿ, ನಂತರ ವಿದ್ಯಾರ್ಥಿಗಳ ಖಾತೆಗೆ ಬರುತ್ತಿದ್ದ ಲೋನ್​ ಹಣ ಪಡೆದುಕೊಳ್ಳುತ್ತಿದ್ದ. ಇದೀಗ ಲೋನ್ ಕಟ್ಟದೆ ಬ್ಯಾಂಕ್​ಗಳಿಗೆ ಶ್ರೀನಿವಾಸಲು ವಂಚನೆ ಮಾಡಿದ್ದ ಆರೋಪದ ಮೇಲೆ ಅರೆಸ್ಟ್​ ಮಾಡಲಾಗಿದೆ.

ಶ್ರೀನಿವಾಸಲು ವಿರುದ್ಧ ಸುಮಾರು 46 ವಿದ್ಯಾರ್ಥಿಗಳು ದೂರು

ಹೌದು ಆತನ ಬಂಡವಾಳ ವಿದ್ಯಾರ್ಥಿಗಳಿಗೆ ತಿಳಿಯುತ್ತಿದ್ದಂತೆ ಶ್ರೀನಿವಾಸಲು ವಿರುದ್ಧ ಸುಮಾರು 46 ವಿದ್ಯಾರ್ಥಿಗಳು ದೂರು ನೀಡಿದ್ದರು. ಈ ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿ, ತನಿಖೆ ವೇಳೆ ಸುಮಾರು 18 ಕೋಟಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿತ್ತು. ಕೋಡಲೇ ಆರೋಪಿ ಶ್ರೀನಿವಾಸಲುನನ್ನ ಪೊಲೀಸರು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ:Jacqueline Fernandez: 200 ಕೋಟಿ ರೂ. ವಂಚನೆ ಕೇಸ್​ನ ಚಿಂತೆ ಬಿಟ್ಟು ವಿದೇಶಕ್ಕೆ ಹಾರಲಿರುವ ಜಾಕ್ವೆಲಿನ್​ ಫರ್ನಾಂಡಿಸ್​

ಬೆಂಗಳೂರಿನಲ್ಲಿ ಪೊಲೀಸರ ಕಾರ್ಯಾಚರಣೆ; ಮಾದಕ ವಸ್ತು ಸೇವಿಸುತ್ತಿದ್ದ 18 ಜನ ಸೇರಿ 3 ಡ್ರಗ್ ಪೆಡ್ಲರ್​ಗಳ ಬಂಧನ

ಬೆಂಗಳೂರು: ರಾಜ್ಯ ಇತ್ತೀಚೆಗೆ ಡ್ರಗ್ಸ್​ , ಗಾಂಜಾ ಜಾಲಗಳು ಪತ್ತೆಯಾಗುತ್ತಿದ್ದು, ಈ ಹಿನ್ನಲೆ ಕಟ್ಟುನಿಟ್ಟಿನ ಕ್ರಮವಹಿಸಿದ್ದ ಬೆಂಗಳೂರು ಕೇಂದ್ರ ವಿಭಾಗದ ಪೊಲೀಸರು, ಡ್ರಗ್ಸ್ ದಂಧೆ ವಿರುದ್ಧ ವಿಶೇಷ ಕಾರ್ಯಾಚರಣೆ ಮಾಡಿದ್ದಾರೆ. ಹೌದು ಇಂದು(ಜೂ.1) ನಗರದ ವಿವಿಧೆಡೆ ದಾಳಿ ನಡೆಸಿದ್ದ ಪೊಲೀಸರು ಗಾಂಜಾ, ಇತರೆ ಮಾದಕ ವಸ್ತು ಸೇವಿಸುತ್ತಿದ್ದ 18 ಜನ ಸೇರಿ 3 ಡ್ರಗ್ ಪೆಡ್ಲರ್​ಗಳ ಬಂಧಿಸಿದ್ದಾರೆ. ಡ್ರಗ್​ ಪೆಡ್ಲರ್​ಗಳ ಬಳಿಯಿದ್ದ 2.5 ಕೆಜಿ ಗಾಂಜಾ, 11 ಗ್ರಾಂ ಎಂಡಿಎಂಎ, 7 ಗ್ರಾಂ ಹೈಡ್ರಾ ಮ್ಯಾಂಗೋ ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು