AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ 20ಕ್ಕೂ ಹೆಚ್ಚು ಬಿಲ್ಡರ್​ಗಳ‌ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ವಾರ ಬೆಂಗಳೂರಿನ ಮೇಘನಾ ಫುಡ್ಸ್​ ಗ್ರೂಪ್ ಕಂಪನಿಗೆ ಸೇರಿದ 10ಕ್ಕೂ ಹೆಚ್ಚು ಕಡೆ ದಾಳಿ ಮಾಡಿದ್ದರು. ಇದೀಗ ಬೆಂಗಳೂರಿನಲ್ಲಿರುವ 20ಕ್ಕೂ ಹೆಚ್ಚು ಬಿಲ್ಡರ್​​ಗಳ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಂಗಳೂರಿನ 20ಕ್ಕೂ ಹೆಚ್ಚು ಬಿಲ್ಡರ್​ಗಳ‌ ಮನೆ, ಕಚೇರಿಗಳ ಮೇಲೆ ಐಟಿ ದಾಳಿ
ಆದಾಯ ತೆರಿಗೆ ಇಲಾಖೆ
Jagadisha B
| Edited By: ವಿವೇಕ ಬಿರಾದಾರ|

Updated on:Mar 30, 2024 | 12:41 PM

Share

ಬೆಂಗಳೂರು, ಮಾರ್ಚ್​ 30: ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಶನಿವಾರ (ಮಾರ್ಚ್​. 30) ಬೆಳಿಗ್ಗೆ ಬೆಂಗಳೂರಿನಲ್ಲಿರುವ (Bengaluru) 20ಕ್ಕೂ ಹೆಚ್ಚು ಬಿಲ್ಡರ್​​ಗಳ (Builders) ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ.

ಮೇಘನಾ ಫುಡ್ಸ್​ ಗ್ರೂಪ್ ಕಂಪನಿ ಮೇಲೆ ದಾಳಿ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ವಾರ ಬೆಂಗಳೂರಿನ ಮೇಘನಾ ಫುಡ್ಸ್​ ಗ್ರೂಪ್ ಕಂಪನಿಗೆ ಸೇರಿದ 10ಕ್ಕೂ ಹೆಚ್ಚು ಕಡೆ ದಾಳಿ ಮಾಡಿದ್ದರು. ಮೇಘನಾ ಫುಡ್ಸ್ ಕಂಪನಿ ಹೋಟೆಲ್ ಮತ್ತು ರೆಸ್ಟೋರೆಂಟ್​ಗಳನ್ನು ನಡೆಸುತ್ತಿದ್ದು, ಇದರ ಕೋರಮಂಗಲ, ಇಂದಿರಾನಗರ, ಜಯನಗರದಲ್ಲಿರುವ ಶಾಖೆಗಳಿವೆ. ಆದಾಯ ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು.

ಇದನ್ನೂ ಓದಿ: ಕಾಂಗ್ರೆಸ್​ಗೆ ಐಟಿ ನೋಟಿಸ್​ ಬಿಜೆಪಿಯವರ ತೆರಿಗೆ ಭಯೋತ್ಪಾದನೆ ಎಂದ ಪ್ರಿಯಾಂಕ್​ ಖರ್ಗೆ

ಏನಿದು ಐಟಿ ರೇಡ್?

ಆದಾಯ ತೆರಿಗೆ ಇಲಾಖೆ ಒಂದು ಸ್ಥಳದಲ್ಲಿ ನಡೆಸುವ ಶೋಧ ಮತ್ತು ಸರ್ವೇಕ್ಷಣೆ ಕಾರ್ಯಾಚರಣೆಯನ್ನೇ ರೇಡ್ ಎನ್ನುವುದು. ಒಬ್ಬ ವ್ಯಕ್ತಿ ಅಥವಾ ಸಂಸ್ಥೆ ಅಕ್ರಮವಾಗಿ ಹಣ ಇಟ್ಟುಕೊಂಡಿದ್ದು ಗೊತ್ತಾದರೆ ಅಥವಾ ಅನುಮಾನ ಬಂದರೆ ಐಟಿ ಇಲಾಖೆ ರೇಡ್ ಮಾಡುತ್ತದೆ.

ಕಪ್ಪು ಹಣ ಸಂಗ್ರಹವನ್ನು ನಿಗ್ರಹಿಸಲು ಸಾಮಾನ್ಯವಾಗಿ ಈ ರೇಡ್ ನಡೆಸಲಾಗುತ್ತದೆ. ತೆರಿಗೆ ಪಾವತಿಯಾಗದ ಹಣವನ್ನು ಕಪ್ಪು ಹಣ ಎಂದು ಭಾವಿಸಲಾಗುತ್ತದೆ. ಹೀಗಾಗಿ, ಅನ್​ಅಕೌಂಟೆಡ್ ಆಗಿರುವ ಹಣ, ಅಂದರೆ ದಾಖಲೆ ಇಲ್ಲದ ಮತ್ತು ತೆರಿಗೆ ಕಟ್ಟದೇ ಇರುವ ಹಣ ಕಪ್ಪು ಹಣ. ಒಡವೆಯೂ ಒಳಗೊಂಡಂತೆ ಯಾವುದೇ ಲೆಕ್ಕವಿಲ್ಲದ ಆಸ್ತಿಗಳು ಇದರಲ್ಲಿ ಒಳಗೊಳ್ಳುತ್ತವೆ.

ಆದಾಯ ತೆರಿಗೆ ಇಲಾಖೆ ದೇಶದ ಹಣಕಾಸು ಬೆಳವಣಿಗೆ ಬಗ್ಗೆ ಸದಾ ಜಾಗೃತವಾಗಿರುತ್ತದೆ. ಯಾವ ಬಿಸಿನೆಸ್ ಎಷ್ಟು ಲಾಭ ಮಾಡಿದೆ ಇತ್ಯಾದಿ ಎಲ್ಲವನ್ನೂ ಗಮನಿಸುತ್ತಾ ಇರುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:54 am, Sat, 30 March 24

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?